AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಬಳ್ಳಾರಿ ಕಾಂಗ್ರೆಸ್ ಸಮಾವೇಶದಲ್ಲಿ ಇಷ್ಟೊಂದು ಜನ ಸೇರಿದ್ರಾ? ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ

ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್ ಜೋಡೋ ಯಾತ್ರೆ ಸಮಾವೇಶದಲ್ಲಿ ಇಷ್ಟೊಂದು ಜನ ಸೇರಿದ್ರಾ? ಈ ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ

Fact Check ಬಳ್ಳಾರಿ ಕಾಂಗ್ರೆಸ್ ಸಮಾವೇಶದಲ್ಲಿ ಇಷ್ಟೊಂದು ಜನ ಸೇರಿದ್ರಾ? ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ
Photo fake check
TV9 Web
| Edited By: |

Updated on: Oct 16, 2022 | 5:39 PM

Share

ಬೆಂಗಳೂರು:  ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ 16ನೇ ದಿನಕ್ಕೆ‌ ಕಾಲಿಟ್ಟಿದೆ. ರಾಹುಲ್ ಯಾತ್ರೆ ಸಾವಿರ ಕಿಲೋ ಮೀಟರ್ ಪೊರೈಸಿದ ಬೆನ್ನಲ್ಲೆ ಬಳ್ಳಾರಿಯಲ್ಲಿ ನಿನ್ನೆ(ಅಕ್ಟೋಬರ್ 15) ಕಾಂಗ್ರೆಸ್ ಬೃಹತ್ ಸಮಾವೇಶ ಮಾಡಿದೆ. ಈ ಮೂಲಕ ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದೆ. ಇನ್ನು ಸಮಾವೇಶಕ್ಕೆ ಜನಸಾಗರವೇ ಹರಿದುಬಂದಿದ್ದು,  ಸಮಾವೇಶದಲ್ಲಿ ಭಾಗಿಯಾಗಿದ್ದ ಜನಸಂಖ್ಯೆಯ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪರ-ವಿರೋಧದ ಚರ್ಚೆ ಶುರುವಾಗಿದೆ.

ಸಿದ್ದರಾಮಯ್ಯನವರ ಸವಾಲ್ ಸ್ವೀಕರಿಸಿ, ಪ್ರತಿಸವಾಲು ಹಾಕಿದ ಶ್ರೀರಾಮುಲು

ಹೌದು….ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಪಕ್ಕಾ. ಇದಕ್ಕೆ ಬಳ್ಳಾರಿ ಸಮಾವೇಶದಲ್ಲಿ ಸೇರಿದ ಜನಸಂಖ್ಯೆಯೇ ಸಾಕ್ಷಿ ಎಂದು ಆ ಫೋಟೋವನ್ನು ಕಾಂಗ್ರೆಸ್ ಕಾರ್ಯಕರ್ತರು ಸಮಾಜಿಕ ಜಾಲತಾಣಗಳಲ್ಲಿ ಹಾಕಿಕೊಳ್ಳುತ್ತಿದ್ದಾರೆ. ಆದ್ರೆ, ಇದಕ್ಕೆ ಬಿಜೆಪಿ ಕಾರ್ಯಕರ್ತರು ಇದು ಫೇಕ್. ಈ ಫೋಟೋ ಬಳ್ಳಾರಿ ಸಮಾವೇಶದಲ್ಲ ಎಂದು ಕಮೆಂಟ್ ಹಾಕುತ್ತಿದ್ದಾರೆ.

ಹಾಗಾದ್ರೆ, ಈ ಫೋಟೋ ಬಳ್ಳಾರಿ ಸಮಾವೇಶದ್ದಾ? ಭಾರತ್ ಜೋಡೋ ಯಾತ್ರೆಗೆ ಇಷ್ಟೊಂದು ಜನಸಂಖ್ಯೆ ಹರಿದುಬಂದಿತ್ತಾ? ಅಲ್ಲವಾದರೆ ಮತ್ತೆ ಆ ಫೋಟೋ ಎಲ್ಲಿಯದ್ದು? ಎನ್ನುವ ಸತ್ಯಾಸತ್ಯತೆ ಈ ಕೆಳಗಿನಂತಿದೆ ನೋಡಿ…

ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಂಚಿಕೊಂಡಿರುವ ಫೋಟೋವನ್ನು ಫಾಕ್ಟ್​ ಚೆಕ್ ಮಾಡಿದಾಗ ಬಳ್ಳಾರಿ ಕಾಂಗ್ರೆಸ್​ ಸಮಾವೇಶದ ಫೋಟೋ ಅಲ್ಲ. ಇದು ನೈಜೀರಿಯಾದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಫೋಟೋ ಆಗಿದೆ. ಬೃಹತ್ ಸಂಖ್ಯೆಯಲ್ಲಿ ಸೇರಿದ ಫೋಟೋವನ್ನು Eagles Arusha ಎಂಬುವರ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ Eagles Arusha ಎನ್ನುವರು 2020 ಮಾರ್ಚ್​ನಲ್ಲಿ ತಮ್ಮ ಫೇಸ್​ಬುಕ್ ಪ್ರೊಫೈಲ್ ಫೋಟೋಗೆ ಹಾಕಿಕೊಂಡಿದ್ದಾರೆ.

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ