AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಬಳ್ಳಾರಿ ಕಾಂಗ್ರೆಸ್ ಸಮಾವೇಶದಲ್ಲಿ ಇಷ್ಟೊಂದು ಜನ ಸೇರಿದ್ರಾ? ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ

ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್ ಜೋಡೋ ಯಾತ್ರೆ ಸಮಾವೇಶದಲ್ಲಿ ಇಷ್ಟೊಂದು ಜನ ಸೇರಿದ್ರಾ? ಈ ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ

Fact Check ಬಳ್ಳಾರಿ ಕಾಂಗ್ರೆಸ್ ಸಮಾವೇಶದಲ್ಲಿ ಇಷ್ಟೊಂದು ಜನ ಸೇರಿದ್ರಾ? ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ
Photo fake check
TV9 Web
| Edited By: |

Updated on: Oct 16, 2022 | 5:39 PM

Share

ಬೆಂಗಳೂರು:  ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ 16ನೇ ದಿನಕ್ಕೆ‌ ಕಾಲಿಟ್ಟಿದೆ. ರಾಹುಲ್ ಯಾತ್ರೆ ಸಾವಿರ ಕಿಲೋ ಮೀಟರ್ ಪೊರೈಸಿದ ಬೆನ್ನಲ್ಲೆ ಬಳ್ಳಾರಿಯಲ್ಲಿ ನಿನ್ನೆ(ಅಕ್ಟೋಬರ್ 15) ಕಾಂಗ್ರೆಸ್ ಬೃಹತ್ ಸಮಾವೇಶ ಮಾಡಿದೆ. ಈ ಮೂಲಕ ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದೆ. ಇನ್ನು ಸಮಾವೇಶಕ್ಕೆ ಜನಸಾಗರವೇ ಹರಿದುಬಂದಿದ್ದು,  ಸಮಾವೇಶದಲ್ಲಿ ಭಾಗಿಯಾಗಿದ್ದ ಜನಸಂಖ್ಯೆಯ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪರ-ವಿರೋಧದ ಚರ್ಚೆ ಶುರುವಾಗಿದೆ.

ಸಿದ್ದರಾಮಯ್ಯನವರ ಸವಾಲ್ ಸ್ವೀಕರಿಸಿ, ಪ್ರತಿಸವಾಲು ಹಾಕಿದ ಶ್ರೀರಾಮುಲು

ಹೌದು….ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಪಕ್ಕಾ. ಇದಕ್ಕೆ ಬಳ್ಳಾರಿ ಸಮಾವೇಶದಲ್ಲಿ ಸೇರಿದ ಜನಸಂಖ್ಯೆಯೇ ಸಾಕ್ಷಿ ಎಂದು ಆ ಫೋಟೋವನ್ನು ಕಾಂಗ್ರೆಸ್ ಕಾರ್ಯಕರ್ತರು ಸಮಾಜಿಕ ಜಾಲತಾಣಗಳಲ್ಲಿ ಹಾಕಿಕೊಳ್ಳುತ್ತಿದ್ದಾರೆ. ಆದ್ರೆ, ಇದಕ್ಕೆ ಬಿಜೆಪಿ ಕಾರ್ಯಕರ್ತರು ಇದು ಫೇಕ್. ಈ ಫೋಟೋ ಬಳ್ಳಾರಿ ಸಮಾವೇಶದಲ್ಲ ಎಂದು ಕಮೆಂಟ್ ಹಾಕುತ್ತಿದ್ದಾರೆ.

ಹಾಗಾದ್ರೆ, ಈ ಫೋಟೋ ಬಳ್ಳಾರಿ ಸಮಾವೇಶದ್ದಾ? ಭಾರತ್ ಜೋಡೋ ಯಾತ್ರೆಗೆ ಇಷ್ಟೊಂದು ಜನಸಂಖ್ಯೆ ಹರಿದುಬಂದಿತ್ತಾ? ಅಲ್ಲವಾದರೆ ಮತ್ತೆ ಆ ಫೋಟೋ ಎಲ್ಲಿಯದ್ದು? ಎನ್ನುವ ಸತ್ಯಾಸತ್ಯತೆ ಈ ಕೆಳಗಿನಂತಿದೆ ನೋಡಿ…

ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಂಚಿಕೊಂಡಿರುವ ಫೋಟೋವನ್ನು ಫಾಕ್ಟ್​ ಚೆಕ್ ಮಾಡಿದಾಗ ಬಳ್ಳಾರಿ ಕಾಂಗ್ರೆಸ್​ ಸಮಾವೇಶದ ಫೋಟೋ ಅಲ್ಲ. ಇದು ನೈಜೀರಿಯಾದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಫೋಟೋ ಆಗಿದೆ. ಬೃಹತ್ ಸಂಖ್ಯೆಯಲ್ಲಿ ಸೇರಿದ ಫೋಟೋವನ್ನು Eagles Arusha ಎಂಬುವರ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ Eagles Arusha ಎನ್ನುವರು 2020 ಮಾರ್ಚ್​ನಲ್ಲಿ ತಮ್ಮ ಫೇಸ್​ಬುಕ್ ಪ್ರೊಫೈಲ್ ಫೋಟೋಗೆ ಹಾಕಿಕೊಂಡಿದ್ದಾರೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು