AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಬಿಜೆಪಿಯಿಂದ ಎಡವಟ್ಟು, ಕೊನೆಗೂ ಯಡಿಯೂರಪ್ಪ ಮುನಿಸು ಶಮನಗೊಳಿಸಿದ ಹೈಕಮಾಂಡ್

ರಾಜ್ಯ ಬಿಜೆಪಿಯ ಎಡವಟ್ಟಿನಿಂದ ಮುನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಮಾಧಾನಪಡಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದೆ. ದೆಹಲಿಯಿಂದ ಬಂದ ಕರೆಗೆ ಬಿಎಸ್​ವೈ ಕೋಪ ಶಮನವಾಗಿದೆ.

ರಾಜ್ಯ ಬಿಜೆಪಿಯಿಂದ ಎಡವಟ್ಟು, ಕೊನೆಗೂ ಯಡಿಯೂರಪ್ಪ ಮುನಿಸು ಶಮನಗೊಳಿಸಿದ ಹೈಕಮಾಂಡ್
ಬಿ ಎಸ್ ಯಡಿಯೂರಪ್ಪ
TV9 Web
| Edited By: |

Updated on:Dec 14, 2022 | 11:25 PM

Share

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ (JP Nadda) ಅವರ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಮುನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿಯನ್ನು ಬಿ.ಎಸ್.ಯಡಿಯೂರಪ್ಪನವರನ್ನು (BS Yediyurappa) ಕೊನೆಗೂ ಬಿಜೆಪಿ ನಾಯಕರು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೆಹಲಿ ನಾಯಕರ ಕರೆ ಮೇರೆಗೆ ಯಡಿಯೂರಪ್ಪನವರ ಕೋಪ ಶಮನವಾಗಿದ್ದು, ನಾಳೆ(ಡಿ.15) ಕೊಪ್ಪಳ (Koppal) ಕಾರ್ಯಕ್ರಮದಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಬಿ.ಸಿ ಪಾಟೀಲ್ ವಿರುದ್ಧ ಬಣಕಾರ್​ ಆಪರೇಷನ್​ ಹಸ್ತ ಸಕ್ಸಸ್​ ಬೆನ್ನಲ್ಲೇ ಶಿವರಾಮ್ ಹೆಬ್ಬಾರ್​ ವಿರುದ್ಧವೂ ಕಾಂಗ್ರೆಸ್​ ರಿವರ್ಸ್ ಆಪರೇಷನ್

ಕರ್ನಾಟಕದಲ್ಲಿ ಒಟ್ಟು 10 ಬಿಜೆಪಿ ಜಿಲ್ಲಾ ಕಚೇರಿಗಳ ಉದ್ಘಾಟನೆ ನಿಮಿತ್ತ ನಾಳೆ(ಡಿ.15) ಕೊಪ್ಪಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಆಗಮಿಸುತ್ತಿದ್ದಾರೆ. ಆದ್ರೆ, ಈ ಕಾರ್ಯಕ್ರಮಕ್ಕೆ ಬಿಜೆಪಿ ಬಿಎಸ್ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿಲ್ಲ. ಇದರಿಂದ ಯಡಿಯೂರಪ್ಪ ಅಸಮಾಧಾನಗೊಂಡಿದ್ದರು. ಕೊಪ್ಪಳಕ್ಕೆ BSY ಬರುವುದಿಲ್ಲವೆಂದು ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡನಗೌಡ ಹೇಳಿದ್ದರು. ಇದು ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿತ್ತು. ಬಿಎಸ್​ವೈರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಮಾತು ಕೇಳಿಬಂದಿತ್ತು.ಇದನ್ನು ಅರಿತ ಸ್ಥಳೀಯ ಮುಖಂಡರು ರಾಜ್ಯದ ನಾಯಕರ ಗಮನಕ್ಕೆ ತಂದಿದ್ದಾರೆ.

ಈ ಬಗ್ಗೆ ಸಾಮಾಜಿ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಬಿಜೆಪಿ ನಾಯಕರಾದ ರವಿಕುಮಾರ್ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್​, ಬಿಎಸ್​ವೈ ನಿವಾಸಕ್ಕೆ ಭೇಟಿ ನೀಡಿ ಕೊಪ್ಪಳದ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದರು. ಆದರೂ ಇದಕ್ಕೆ ಒಪ್ಪದ ಯಡಿಯೂರಪ್ಪ ಬೇರೆ ಕಾರ್ಯಕ್ರಮಗಳು ನಿಗದಿಯಾಗಿವೆ ಎಂದು ಹೇಳಿ ಕಳುಹಿಸಿದ್ದಾರೆ. ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಈ ಬಗ್ಗೆ ದೆಹಲಿ ನಾಯಕರ ಗಮನಕ್ಕೆ ತಂದಿದ್ದಾರೆ.

ಬಳಿಕ ದೆಹಲಿ ನಾಯಕರಿಂದಲೇ ಕೊಪ್ಪಳ ಕಾರ್ಯಕ್ರಮಕ್ಕೆ ಬರುವಂತೆ ಫೋನ್ ಕರೆ ಮೂಲಕ ಆಹ್ವಾನ ಬಂದಿದೆ. ದೆಹಲಿ ನಾಯಕರ ಕರೆ ಹಿನ್ಬಲೆ ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿಯಾಲು ಒಪ್ಪಿಕೊಂಡರು. ಈ ಮೂಲಕ ದೆಹಲಿ ನಾಯಕರು ಬಿಎಸ್​ವೈ ಮುನಿಸು ಶಮನ ಮಾಡುವಲ್ಲಿ ಯಶಸ್ವಿಯಾಗಿದೆ.

ಹೆಲಿಕಾಪ್ಟರ್ ಮೂಲಕ ಕೊಪ್ಪಳಕ್ಕೆ

ಇಂದು(ಡಿ.14) ಸಂಜೆವರೆಗೂ BSY ಕೊಪ್ಪಳ ಪ್ರವಾಸ ನಿರ್ಧಾರವಾಗಿರಲಿಲ್ಲ. ದೆಹಲಿ ನಾಯಕರ ಕರೆ ಹಿನ್ನೆಲೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಒಪ್ಪಿಕೊಂಡಿರುವ ಯಡಿಯೂರಪ್ಪ, ಕೊನೆ ಕ್ಷಣದಲ್ಲಿ ಕೊಪ್ಪಳಕ್ಕೆ ತೆರಳುವುದು ಖಚಿತವಾಗಿದ್ದು, ಹೆಚ್​ಎಎಲ್​ ಏರ್​ಪೋರ್ಟ್​ನಿಂದ ಹೆಲಿಕಾಪ್ಟರ್ ಮೂಲಕ ಕೊಪ್ಪಳಕ್ಕೆ ತೆರಳಲಿದ್ದಾರೆ.

ಯಡಿಯೂರಪ್ಪ ಅವರನ್ನು ಕಡೆಗಣಿಸುತ್ತಿರುವುದು ಇದೊಂದೇ ಕಾರ್ಯಕವಲ್ಲ. ಈ ಹಿಂದೆ ಪಕ್ಷದ ಕಾರ್ಯಚಟುವಟಿಕೆಗಳ ಬ್ಯಾನರ್​ಗಳಲ್ಲೂ ಸಹ ಯಡಿಯೂರಪ್ಪನವರ ಫೋಟೋ ಹಾಕಿಲ್ಲದಿರುವ ಉದಾಹರಣೆಗಳು ಇವೆ. ಅಲ್ಲದೇ ಈ ಬಗ್ಗೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು ಉಂಟು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:54 pm, Wed, 14 December 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು