AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಸಂದರ್ಭದಲ್ಲಿ ಮುನಿರತ್ನ ನಮ್ಮ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದರು: ಡಿಕೆ ಸುರೇಶ್​​

ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಹೊತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್​ ಸಂಸದ ಡಿಕೆ ಸುರೇಶ್​ ವಾಗ್ದಾಳಿ ಮಾಡಿದ್ದಾರೆ. ಮುನಿರತ್ನ ವಿರುದ್ಧ ಸುಮೋಟೋ ದಾಖಲಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಮುನಿರತ್ನ ನಮ್ಮ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದರು: ಡಿಕೆ ಸುರೇಶ್​​
ಮುನಿರತ್ನ, ಡಿಕೆ ಸುರೇಶ್​
ಪ್ರಸನ್ನ ಗಾಂವ್ಕರ್​
| Edited By: |

Updated on:Sep 14, 2024 | 12:03 PM

Share

ಬೆಂಗಳೂರು, ಸೆಪ್ಟೆಂಬರ್​ 14: ಬಿಜೆಪಿ ಶಾಸಕ ಮುನಿರತ್ನ (Munirathna) ಜೀವ ಬೆದರಿಕೆ, ಜಾತಿ ನಿಂದನೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು (Contractor Chaluvaraju) ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್ (DK Suresh)​ ಮಾತನಾಡಿ, ಶಾಸಕ ಮುನಿರತ್ನ ಚುನಾವಣೆ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗೂ ಬೆದರಿಕೆ ಹಾಕಿದ್ದರು. ಶಾಸಕ ಮುನಿರತ್ನರಿಂದ ಅಧಿಕಾರಿಗಳಂತೂ ಭಯ ಭೀತರಾಗಿದ್ದಾರೆ. ಕೆಲವು ಅಧಿಕಾರಿಗಳು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ. ಅಧಿಕಾರಿಗಳು ದೂರು ಕೊಟ್ಟರೆ ಸರ್ಕಾರ ಅವರ ರಕ್ಷಣೆಗೆ ಬರುತ್ತೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ ಅವರು ದಲಿತ ಸಮುದಾಯಕ್ಕೆ ಕೀಳು ಪದಗಳಿಂದ ಸಂಬೋಧನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸುಮೋಟೋ ಕೇಸ್ ದಾಖಲಿಸಬೇಕು. ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ ಎಂದರು.

ಇದನ್ನು ಬಿಜೆಪಿ ನಾಯಕರು ಯಾವ ರೀತಿ ಅರಗಿಸಿಕೊಳ್ಳುತ್ತಿದ್ದಾರೆ? ಬಿಜೆಪಿಯ ಒಬ್ಬೇ ಒಬ್ಬರು ನಾಯಕರು ಇದುವರೆಗೂ ಹೇಳಿಕೆ ನೀಡಿಲ್ಲ. ಬಿಜೆಪಿಯವರಿಗೆ ನೈತಿಕತೆ ಇದ್ರೆ ಮುನಿರತ್ನ ಅವರನ್ನು ಇಷ್ಟೊತ್ತಿಗಾಗಲೇ ಪಕ್ಷದಿಂದ ವಜಾ ಮಾಡಬೇಕಿತ್ತು ಎಂದಿದ್ದಾರೆ.

ಇದನ್ನೂ ಓದಿ: ಶಾಸಕ ಮುನಿರತ್ನ, ಗುತ್ತಿಗೆದಾರ ಆಡಿಯೋ ವೈರಲ್: ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ, ಕೊಲೆ ಬೆದರಿಕೆ ಆರೋಪ

ನಾವ್ಯಾರೂ ಕೂಡ ಕೇಳಿರದ ಅವಾಚ್ಯ ಪದಗಳನ್ನು ಕೇಳಬೇಕಾಗಿದೆ. ಇದಕ್ಕಿಂತ ಕೀಳು ಪದಗಳನ್ನು ಯಾರೂ ಉಪಯೋಗಿಸಲು ಸಾಧ್ಯವಿಲ್ಲ. ಕೀಳರಿಮೆ ಮನಸ್ಥಿತಿ ಇರುವವರು ಯಾರೂ ಇಂತಹ ಪದ ಬಳಸಲ್ಲ. ಒಂದು ಕಡೆ ರಾಮನ ಜಪ, ಒಂದು ಕಡೆ ಸಂಸ್ಕೃತಿ ಜಪ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಅದೇ ತಾಯಂದಿರನ್ನು ಮಂಚಕ್ಕೆ ಕರೆಯುವ ಜಪ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದರು.

ದಲಿತ ಸಮುದಾಯದವರ ಬಗ್ಗೆ ಯಾರೂ ಇಂಥ ಪದ ಬಳಸಿಲ್ಲ. ದಲಿತ ಸಮುದಾಯದ ಮೇಲೆ ಇಂತಹ ಪದ ಬಳಕೆ ಎಷ್ಟು ಸರಿ? ದಲಿತ ಸಮುದಾಯವನ್ನು 80ರ ದಶಕದ ಬಳಿಕ ಯಾರೂ ಇಂಥ ಪದ ಬಳಸುತ್ತಿರಲಿಲ್ಲ. ದಲಿತ ಸಮುದಾಯದ ಮೇಲೆ ಇಂಥ ಪದ ಬಳಕೆ ಮಾಡುವುದು ಎಷ್ಟು ಸರಿ? ಇದಕ್ಕೆ ಬಿಜೆಪಿ ನಾಯಕರು, ಎನ್​ಡಿಎ ನಾಯಕರು ಪ್ರತಿಕ್ರಿಯಿಸಬೇಕೆಂದು ಎಂದು ಒತ್ತಾಯಿಸಿದ್ದಾರೆ.

ಕುಮಾರಸ್ವಾಮಿಯೇ ನಾಗಮಂಗಲ ಗಲಾಟೆ ಮಾಡಿಸಿರಬಹುದು: ಡಿಕೆಸು

ಕುಮಾರಸ್ವಾಮಿಯೇ ನಾಗಮಂಗಲ ಗಲಾಟೆ ಮಾಡಿಸಿರಬಹುದು. ಪ್ರತಿ ವಾರ ಇಲ್ಲಿಗೆ ಬರುತ್ತಾರಲ್ಲ, ಹಾಗೆ ಗಲಾಟೆ ಮಾಡಿಸಿರಬಹುದು. ಮುಸ್ಲಿಮನಾಗಿ ಹುಟ್ಟಬೇಕು ಅಂತಾ ಹೇಳುತ್ತಿದ್ದವನು ನಾನಲ್ಲ. ಹೆಚ್​. ಡಿ.ಕುಮಾರಸ್ವಾಮಿ ನಿತ್ಯ ಒಂದೊಂದು ಹೇಳಿಕೆ ಕೊಡುತ್ತಾರೆ. ಹಿಂದೆ ಗಲಭೆಗಳಾದಾಗ ಅಮಿತ್ ಶಾ, ಪ್ರಧಾನಿ ಮೋದಿ ವಿರುದ್ಧ ಕುಮಾರಸ್ವಾಮಿ ಹೇಳಿಕೆ ಕೊಟ್ಟಿದ್ದರು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:01 pm, Sat, 14 September 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ