AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಯ್ತು ಎಫ್ಐಆರ್, ಏನಿದು ಪ್ರಕರಣ?

ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊನೆಗೂ ಎಫ್​ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ವಿವರ.

ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಯ್ತು ಎಫ್ಐಆರ್, ಏನಿದು ಪ್ರಕರಣ?
ಸಂಸದ ಪ್ರತಾಪ್ ಸಿಂಹ
ರಾಮ್​, ಮೈಸೂರು
| Edited By: |

Updated on: Dec 27, 2023 | 7:44 AM

Share

ಮೈಸೂರು, (ಡಿಸೆಂಬರ್ 27): ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಕೊನೆಗೂ ಎಫ್​ಐಆರ್ ದಾಖಲಾಗಿದೆ. ಮೈಸೂರಿನ (Mysuru) ದೇವರಾಜ ಪೊಲೀಸ್ ಠಾಣೆಯಲ್ಲಿ 1860ರ IPC ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ.

ಅಲ್ಲದೇ ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು‌ ಪ್ರತಾಪ್​ ಸಿಂಹ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್​ ಕಾರ್ಯಕರ್ತರು, ನಿನ್ನೆ(ಡಿಸೆಂಬರ್ 27) ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಕೊನೆಗೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದರು.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್

ಪ್ರತಾಪ್​ ಸಿಂಹರಿಂದ ಹಿಂದು ಮತ್ತು ಮುಸ್ಲಿಂ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್​ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಲಿಖಿತ ದೂರು ನೀಡಿದ್ದರು. ಅದಂತೆ ಇದೀಗ ದೇವರಾಜ್ ಪೊಲೀಸ್ ಠಾಣೆಯಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹುಣಸೂರಿನಲ್ಲಿ ಮಂಗಳವಾರ ನಡೆದ ಹನುಮ ಜಯಂತಿಯಲ್ಲಿ ಭಾಗವಹಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ಯಕರ್ತನಿಂದ ಹಿಡಿದು ಸಿಎಂ ಪುತ್ರನವರೆಗೂ ಎಲ್ಲರೂ ನನ್ನ ಟಾರ್ಗೆಟ್ ಮಾಡಿದ್ದಾರೆ. ನನ್ನ ಭಯೋತ್ಪಾದಕ ಅಂತ ಬಿಂಬಿಸುವ ಪ್ರಯತ್ನ ಕಾಂಗ್ರೆಸಿಗರು ಮಾಡಿದರು. ಮುಸ್ಲಿಮರೆಲ್ಲಾ ಭಯೋತ್ಪಾದಕರು ಅನ್ನೋ ರೀತಿ ನನಗೆ ಮುಸ್ಲಿಂ ವೇಷ ತೊಡಿಸಿ ಕೈಯಲ್ಲಿ ಬಾಂಬ್ ಕೊಟ್ಟಿದ್ದರು. ಸಂಸತ್ ವಿಚಾರದಲ್ಲಿ ನಾನು ಸ್ಪಷ್ಟನೆ ಕೊಟ್ಟ ಬೆನ್ನಲ್ಲೆ ಪ್ರತಾಪ್ ಸಿಂಹ ಸಹೋದರ ಮರಗಳ್ಳ ಅಂತಾ ಕಾಂಗ್ರೆಸ್ ನವರು ಪೋಸ್ಟ್ ಮಾಡಿದ್ದರು ಎಂದು ಟೀಕಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?