AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿ FIR; ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಬೇಕು; ಜಿಟಿ ದೇವೇಗೌಡ

ಸೆಪ್ಟೆಂಬರ್​ 10ರಂದು ಬೆಂಗಳೂರಿನ ಅರಮನೆ ಜೆಡಿಎಸ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು. ಈ ವೇಳೆ ಸಭೆಯಲ್ಲಿ ಹೆಚ್ ಡಿ ದೇವೇಗೌಡರು, ಸಿಎಂ ಇಬ್ರಾಹಿಂ ಮತ್ತು ಹೆಚ್ ಡಿ ರೇವಣ್ಣ ಸೇರಿ ಎಲ್ಲರೂ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್​ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದರು.

ಜೆಡಿಎಸ್​ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿ FIR; ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಬೇಕು; ಜಿಟಿ ದೇವೇಗೌಡ
ಜಿ ಟಿ ದೇವೇಗೌಡ
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 08, 2023 | 3:18 PM

Share

ಮೈಸೂರು, ಸೆ.08: ಜೆಡಿಎಸ್​ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಎಫ್​ಐಆರ್​ (FIR) ಹಾಕಿಸುತ್ತಿದ್ದಾರೆ ಎಂದು ಜೆಡಿಎಸ್​ (JDS) ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ (GT Devegowda)ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ, ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಬೇಕು. ಇದೇ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರೂ ಒಲವು ಹೊಂದಿದ್ದಾರೆ ಎಂದರು.

ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ

ಚುನಾವಣೆಯನ್ನು ಒಟ್ಟಾಗಿ ಎದುರಿಸೋಣ ಎನ್ನುವುದು ಒಮ್ಮತದ ಅಭಿಪ್ರಾಯವಾಗಿದೆ. ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹೊಟ್ಟೆ ಉರಿಯಿಂದ ಹೆಚ್​ಡಿ ಕುಮಾರಸ್ವಾಮಿಯವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ. ಸೆಪ್ಟೆಂಬರ್​ 10ರಂದು ಬೆಂಗಳೂರಿನ ಅರಮನೆ ಜೆಡಿಎಸ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು. ಈ ವೇಳೆ ಸಭೆಯಲ್ಲಿ ಹೆಚ್ ಡಿ ದೇವೇಗೌಡರು, ಸಿಎಂ ಇಬ್ರಾಹಿಂ ಮತ್ತು ಹೆಚ್ ಡಿ ರೇವಣ್ಣ ಸೇರಿ ಎಲ್ಲರೂ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಪ್ರಕರಣ; ನ್ಯಾಯಾಲಯದ ತೀರ್ಪು ಸಂತಸ ನೀಡಿದೆ, ಇದು ಎಲ್ಲ ರಾಜಕೀಯ ಧುರೀಣರಿಗೆ ಪಾಠವಾಗಬೇಕು: ಎ ಮಂಜು

ರಾಜ್ಯದಲ್ಲಿ ಜನ ಕಾಂಗ್ರೆಸ್ ಪಕ್ಷದ ವಿರುದ್ಧ ದಂಗೆ ಎದ್ದಿದ್ದಾರೆ

ಮೈತ್ರಿ ಬಳಿಕ ಸ್ಥಾನಗಳ ಹಂಚಿಕೆ ಅಳತೆಗೋಲಿನಿಂದ ಮಾಡಬೇಕು. ಈ ವೇಳೆ ನಾನು ಕಾರ್ಯಕರ್ತರು, ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಈ ಹಿಂದೆ ಬಿಜೆಪಿ ಜೊತೆ ಹೋಗಿದಕ್ಕೆ ನನ್ನನ್ನೇ ಜನರು ಹುಣಸೂರಿನಲ್ಲಿ ನನ್ನನ್ನು ಸೋಲಿಸಿದ್ದರು, ಈಗ ಪರಿಸ್ಥಿತಿ ಬದಲಾಗಿದೆ. ರಾಜ್ಯದಲ್ಲಿ ಜನ ಕಾಂಗ್ರೆಸ್ ಪಕ್ಷದ ವಿರುದ್ಧ ದಂಗೆ ಎದ್ದಿದ್ದಾರೆ ಎಂದು ಮೈಸೂರಿನಲ್ಲಿ ಜೆಡಿಎಸ್​ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ