ಜೆಡಿಎಸ್​ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿ FIR; ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಬೇಕು; ಜಿಟಿ ದೇವೇಗೌಡ

ಸೆಪ್ಟೆಂಬರ್​ 10ರಂದು ಬೆಂಗಳೂರಿನ ಅರಮನೆ ಜೆಡಿಎಸ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು. ಈ ವೇಳೆ ಸಭೆಯಲ್ಲಿ ಹೆಚ್ ಡಿ ದೇವೇಗೌಡರು, ಸಿಎಂ ಇಬ್ರಾಹಿಂ ಮತ್ತು ಹೆಚ್ ಡಿ ರೇವಣ್ಣ ಸೇರಿ ಎಲ್ಲರೂ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್​ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದರು.

ಜೆಡಿಎಸ್​ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿ FIR; ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಬೇಕು; ಜಿಟಿ ದೇವೇಗೌಡ
ಜಿ ಟಿ ದೇವೇಗೌಡ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 08, 2023 | 3:18 PM

ಮೈಸೂರು, ಸೆ.08: ಜೆಡಿಎಸ್​ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಎಫ್​ಐಆರ್​ (FIR) ಹಾಕಿಸುತ್ತಿದ್ದಾರೆ ಎಂದು ಜೆಡಿಎಸ್​ (JDS) ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ (GT Devegowda)ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ, ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಬೇಕು. ಇದೇ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರೂ ಒಲವು ಹೊಂದಿದ್ದಾರೆ ಎಂದರು.

ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ

ಚುನಾವಣೆಯನ್ನು ಒಟ್ಟಾಗಿ ಎದುರಿಸೋಣ ಎನ್ನುವುದು ಒಮ್ಮತದ ಅಭಿಪ್ರಾಯವಾಗಿದೆ. ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹೊಟ್ಟೆ ಉರಿಯಿಂದ ಹೆಚ್​ಡಿ ಕುಮಾರಸ್ವಾಮಿಯವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ. ಸೆಪ್ಟೆಂಬರ್​ 10ರಂದು ಬೆಂಗಳೂರಿನ ಅರಮನೆ ಜೆಡಿಎಸ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು. ಈ ವೇಳೆ ಸಭೆಯಲ್ಲಿ ಹೆಚ್ ಡಿ ದೇವೇಗೌಡರು, ಸಿಎಂ ಇಬ್ರಾಹಿಂ ಮತ್ತು ಹೆಚ್ ಡಿ ರೇವಣ್ಣ ಸೇರಿ ಎಲ್ಲರೂ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಪ್ರಕರಣ; ನ್ಯಾಯಾಲಯದ ತೀರ್ಪು ಸಂತಸ ನೀಡಿದೆ, ಇದು ಎಲ್ಲ ರಾಜಕೀಯ ಧುರೀಣರಿಗೆ ಪಾಠವಾಗಬೇಕು: ಎ ಮಂಜು

ರಾಜ್ಯದಲ್ಲಿ ಜನ ಕಾಂಗ್ರೆಸ್ ಪಕ್ಷದ ವಿರುದ್ಧ ದಂಗೆ ಎದ್ದಿದ್ದಾರೆ

ಮೈತ್ರಿ ಬಳಿಕ ಸ್ಥಾನಗಳ ಹಂಚಿಕೆ ಅಳತೆಗೋಲಿನಿಂದ ಮಾಡಬೇಕು. ಈ ವೇಳೆ ನಾನು ಕಾರ್ಯಕರ್ತರು, ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಈ ಹಿಂದೆ ಬಿಜೆಪಿ ಜೊತೆ ಹೋಗಿದಕ್ಕೆ ನನ್ನನ್ನೇ ಜನರು ಹುಣಸೂರಿನಲ್ಲಿ ನನ್ನನ್ನು ಸೋಲಿಸಿದ್ದರು, ಈಗ ಪರಿಸ್ಥಿತಿ ಬದಲಾಗಿದೆ. ರಾಜ್ಯದಲ್ಲಿ ಜನ ಕಾಂಗ್ರೆಸ್ ಪಕ್ಷದ ವಿರುದ್ಧ ದಂಗೆ ಎದ್ದಿದ್ದಾರೆ ಎಂದು ಮೈಸೂರಿನಲ್ಲಿ ಜೆಡಿಎಸ್​ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us