ಪೌರಾಡಳಿತ ಮಂತ್ರಿಯನ್ನು ತಕ್ಷಣ ಚಿತ್ರದುರ್ಗಕ್ಕೆ ಕಳುಹಿಸಿ: ಕೋಟ ಶ್ರೀನಿವಾಸ್ ಪೂಜಾರಿ

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವು ಪ್ರಕರಣ ಹಾಗೂ ಹಲವರು ಅಸ್ವಸ್ಥಗೊಂಡ ಬಗ್ಗೆ ರಾಜ್ಯ ಸರ್ಕಾರವನ್ನು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಪೌರಾಡಳಿತ ಮಂತ್ರಿಯನ್ನು ತಕ್ಷಣ ಚಿತ್ರದುರ್ಗಕ್ಕೆ ಕಳುಹಿಸಿ: ಕೋಟ ಶ್ರೀನಿವಾಸ್ ಪೂಜಾರಿ
ಬಿಜೆಪಿ ಎಂಎಲ್​ಸಿ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್
Edited By: Rakesh Nayak Manchi

Updated on: Aug 06, 2023 | 3:51 PM

ಮಂಗಳೂರು, ಆಗಸ್ಟ್ 6: ಕಲುಷಿತ ನೀರು ಸೇವಿಸಿ 100ಕ್ಕೂ ಹೆಚ್ಚು ಜನ‌ರು ಆಸ್ಪತ್ರೆಗೆ ಸೇರಿದ್ದಾರೆ. ದುರಾದೃಷ್ಟ ಪೌರಾಡಳಿತ ಸಚಿವ ರಹೀಂಖಾನ್ (Rahim Kharn) ಭೇಟಿಯೇ ಕೊಟ್ಟಿಲ್ಲ ಎಂದು ಬಿಜೆಪಿ ಎಂಎಲ್​ಸಿ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಆಕ್ರೋಶ ಹೊರಹಾಕಿದ್ದಾರೆ. ಚಿತ್ರದುರ್ಗದಲ್ಲಿ (Chitradurga) ಕಲುಷಿತ ನೀರು ಸೇವಿಸಿ ಐವರು ಸಾವು ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವರನ್ನು ಕೂಡಲೇ ಚಿತ್ರದುರ್ಗಕ್ಕೆ ಕಳುಹಿಸಿ ಎಂದರು.

ಆರೋಗ್ಯ ಮಂತ್ರಿ ಆಸ್ಪತ್ರೆಗೆ ಬಂದು ಪರಿಹಾರ ಕೊಟ್ಟು ಹೋಗುತ್ತಾರೆ. ಪೌರಾಡಳಿತ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಹ ಹೋಗಿಲ್ಲ. ಹೇಳುವವರು ಕೇಳುವವರು ಯಾರು ಇಲ್ಲ ಎಂಬ ಪರಿಸ್ಥಿತಿ ನಡೆಯುತ್ತಿದೆ. ಘಟನೆ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖೆ ಮಾಡಬೇಕು. ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಘಟನೆಗೆ ಮೂಲ ಕಾರಣ ಏನು ಎಂಬುವುದರ ಬಗ್ಗೆ ತನಿಖೆ ಆಗಬೇಕು. ಮಾತೆತ್ತಿದರೆ ಅಧಿಕಾರಕ್ಕೆ ಬಂದು 2-3 ತಿಂಗಳಾಯಿತು ಎಂದು ಹೇಳುತ್ತಾರೆ, ಜನರ ಸಾವಿನ ಸ್ಥಿತಿ ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ: ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಬಸವೇಶ್ವರ ಆಸ್ಪತ್ರೆಗೆ ಭೇಟಿ ನೀಡಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ಜನರ ಆರೋಗ್ಯ ವಿಚಾರಸಿದಿ ಮಾಜಿ ಸಚಿವ ಸಿಟಿ ರವಿ, ರಾಜ್ಯದ ಹಲವೆಡೆ ಈರೀತಿಯ ಪ್ರಕರಣ ನಡೆದಿವೆ. ರಾಜ್ಯ ಸರ್ಕಾರ ಈವರೆಗೆ ಎಚ್ಚೆತ್ತುಕೊಂಡಿಲ್ಲ. ಸಾವಿನ ಬಳಿಕ ಪರಿಹಾರ ಕೊಡುವುದು ಒಂದು ಭಾಗ. ಈರೀತಿಯ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಕೊಡಬೇಕು. ಮೃತರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಆಗ್ರಹಿಸಿದ ಸಿ.ಟಿ.ರವಿ, ಸಾವು ಸಂಭವಿಸುವವರೆಗೆ ಗಂಭೀರವಾಗಿ ಪರಿಗಣಿಸದಿರುವ ಮಾನಸಿಕತೆ ಒಳ್ಳೆಯದಲ್ಲ. ಜಿಲ್ಲಾಡಳಿತ ಮತ್ತು ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ದರಿದ್ರ ಬಂದಿಲ್ಲ ಎಂದು ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಮಾತನಾಡಿದ ಸಿ.ಟಿ. ರವಿ, ಆ ದರಿದ್ರ ಅವರಿಗೆ ಬರುವುದು ಬೇಡ, ಅದು ಒಳ್ಳೆಯದೂ ಅಲ್ಲ ಎಂದರು. ಆಸ್ಪತ್ರೆಗೆ ಸಿಟಿ ರವಿ ಜೊತೆ ಮಾಜಿ ಸಚಿವ ಬಿ.ಸಿ.ನಾಗೇಶ್, ಚಿತ್ರದುರ್ಗ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಎಂಎಲ್​ಸಿ ಕೆ.ಎಸ್.ನವೀನ್ ಇದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us