AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಹಿರಿಯೂರು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಮಾಜಿ ಶಾಸಕಿ ಪೂರ್ಣಿಮಾ​​ ಮತ್ತು ಟಿ.ಡಿ.ಶ್ರೀನಿವಾಸ್ ಶುಕ್ರವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಚಿವ ಡಿ.ಸುಧಾಕರ್, ಮಾಜಿ ಸಿಎಂ ಮೊಯ್ಲಿ ಮತ್ತು ಶಾಸಕ ಜಯಚಂದ್ರ ಭಾಗಿ ಆಗಿದ್ದರು. ಸೇರ್ಪಡೆ ಬಳಿಕ ಮಾತನಾಡಿ ಸಿಎಂ ಸಿದ್ದರಾಮಯ್ಯ ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾಗೆ ಟಿಕೆಟ್​ ತಪ್ಪಲು ನಾನೂ ಸ್ವಲ್ಪ ಕಾರಣ ಎಂದಿದ್ದಾರೆ.

ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಹಿರಿಯೂರು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್
ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್​ ಸೇರ್ಪಡೆ​​
ಪ್ರಸನ್ನ ಗಾಂವ್ಕರ್​
| Edited By: |

Updated on: Oct 20, 2023 | 3:05 PM

Share

ಬೆಂಗಳೂರು, ಅಕ್ಟೋಬರ್ 20: ಹಿರಿಯೂರು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Poornima Srinivas) ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ಅವರು ಸಹ ಕಾಂಗ್ರೆಸ್ ಸೇರಿದರು. ಈ ವೇಳೆ ಸಚಿವ ಡಿ.ಸುಧಾಕರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ಜಯಚಂದ್ರ ಸೇರಿದಂತೆ ಹಲವು ಮುಖಡರು ಉಪಸ್ಥಿತರಿದ್ದರು.

ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾಗೆ ಟಿಕೆಟ್​ ತಪ್ಪಲು ನಾನೂ ಸ್ವಲ್ಪ ಕಾರಣ: ಸಿಎಂ ಸಿದ್ದರಾಮಯ್ಯ

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾಗೆ ಟಿಕೆಟ್​ ತಪ್ಪಲು ನಾನೂ ಸ್ವಲ್ಪ ಕಾರಣ. ಟಿಕೆಟ್ ತಪ್ಪಿಸಿದ್ದು ನಾನೇ ಅಂತಾ ಗೊತ್ತಿದ್ರೂ ಸಿಟ್ಟು ಮಾಡಿಕೊಂಡಿಲ್ಲ. ಭೈರತಿ ಬಸವರಾಜಗೆ ಟಿಕೆಟ್​ ಕೊಡಿಸಲು ಹೋಗಿ ಇವರಿಗೆ ತಪ್ಪಿತು. ಬಿಜೆಪಿ ಶಾಸಕರಾದರೂ ಕಾಂಗ್ರೆಸ್ ರಕ್ತ ಪೂರ್ಣಿಮಾರಲ್ಲಿ ಹರಿಯುತ್ತಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು

ಶ್ರೀನಿವಾಸ್ ಕೂಡ ಒಲ್ಲದ ಮನಸ್ಸಿನಿಂದಲೇ ಬಿಜೆಪಿಯಲ್ಲಿದ್ದರು. ಕೃಷ್ಣಪ್ಪ, ಶ್ರೀನಿವಾಸ್ ಇಬ್ಬರೂ ಸಾಮಾಜಿಕ ನ್ಯಾಯದ ಪರವಾಗಿ ಇರುವವರು. ಕಾಂಗ್ರೆಸ್ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಪಕ್ಷ. ಸಮಾಜವನ್ನು ಜಾತಿ ಧರ್ಮದ ಆಧಾರದ ಮೇಲೆ ಒಡೆಯುವ ಪಕ್ಷ ಅಲ್ಲ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಸಚಿವ ಸಂಪುಟ ಬದಲಾವಣೆ: ಕಾಂಗ್ರೆಸ್​ನಿಂದ ತೇಲಿಬಂತು ಮತ್ತೊಂದು ಸುದ್ದಿ

ಕೆಲವರು ಜಾತ್ಯತೀತ ಅಂತಾ ಬೋರ್ಡ್​ ಹಾಕಿಕೊಳ್ಳುತ್ತಾರೆ. ಆಮೇಲೆ ಸ್ವಾರ್ಥಕ್ಕಾಗಿ ಕೋಮುವಾದಿಗಳ ಜತೆ ಸೇರಿಕೊಳ್ಳುತ್ತಾರೆ ಎಂದು JDS ವಿರುದ್ಧ ಕಿಡಿ ಕಾರಿದ್ದಾರೆ. ಕೋಮುವಾದ ದೇಶಕ್ಕೆ ಹಾನಿಕಾರಕ. ಬಹುತ್ವ ಇರುವ ದೇಶದಲ್ಲಿ ಕೋಮುವಾದ ಸರಿಯಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಎ.ಕೃಷ್ಣಪ್ಪ ಪುತ್ರಿಗೆ ಬಹಳ ದಿನದಿಂದ ಗಾಳ ಹಾಕಿಕೊಂಡೇ ಬಂದಿದ್ದೆ: ಡಿಸಿಎಂ ಡಿಕೆ ಶಿವಕುಮಾರ್

ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎ.ಕೃಷ್ಣಪ್ಪ ಪುತ್ರಿಗೆ (ಪೂರ್ಣಿಮಾ) ಬಹಳ ದಿನದಿಂದ ಗಾಳ ಹಾಕಿಕೊಂಡೇ ಬಂದಿದ್ದೆ. ಆ ಮೀನು ಕಚ್ಚಲಿಲ್ಲ, ಶ್ರೀನಿವಾಸ್​ಗೂ ಗಾಳ ಹಾಕುತ್ತಿದ್ದೆ. ಅದೂ ಕಚ್ಚಿರಲಿಲ್ಲ. ಏನೇನೋ ಲೆಕ್ಕಾಚಾರ ಹಾಕುತ್ತಿದ್ದ ಮೀನು ಈಗ ಸೇರಿಕೊಂಡಿದೆ. ಕೊನೆಗೂ ನಮ್ಮ ಪಕ್ಷಕ್ಕೆ ಎಲ್ಲಾ ಸೇರ್ಪಡೆ ಆಗಿದ್ದಾರೆ. ಯಾವ ಸಮುದಾಯದ 4-5 ಸಾವಿರ ಜನ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ