AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ತೊಂದರೆಯೇ ಹೆಚ್ಚು, ಬಿಜೆಪಿಗೆ ಹೆಚ್​ಡಿಕೆ ಟ್ವೀಟ್​​ ಏಟು

ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ಹರದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ ಎಂದು ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ತೊಂದರೆಯೇ ಹೆಚ್ಚು, ಬಿಜೆಪಿಗೆ ಹೆಚ್​ಡಿಕೆ ಟ್ವೀಟ್​​ ಏಟು
ಹೆಚ್​ ಡಿ ಕುಮಾರಸ್ವಾಮಿ
ವಿವೇಕ ಬಿರಾದಾರ
|

Updated on: Mar 12, 2023 | 3:10 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ಮಾ.12) ಮಂಡ್ಯದ ಮದ್ದೂರಿನಲ್ಲಿ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯನ್ನು (Bengaluru-Mysore Express Way) ಉದ್ಘಾಟಿಸಿದರು. ಈ ಎಕ್ಸಪ್ರೆಸ್​ವೇ ವಿಚಾರವಾಗಿ ವಿಪಕ್ಷಗಳು ಕ್ರೆಡಿಟ್​ ವಾರ್​ ಶುರು ಮಾಡಿಕೊಂಡಿದ್ದವು. ಈಗ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumarswamy) ಸರಣಿ ಟ್ವೀಟ್​ ಮಾಡುವ ಮೂಲಕ ಬಿಜೆಪಿಯ (BJP) ವಿರುದ್ಧ ಹರಿಹಾಯ್ದಿದ್ದಾರೆ. “ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ಹರದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ” ಎಂದು ವಾಗ್ದಾಳಿ ಮಾಡಿದ್ದಾರೆ.

ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ.

ಕೆಲವರ ಪಾಲಿಗೆ ದೊಡ್ಡ ಎಟಿಎಂ ಆಗಿಬಿಟ್ಟ ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್ ಹೆದ್ದಾರಿಯ ಅಸಲಿ ಅಂಶಗಳನ್ನು ಪಟ್ಟಿ ಮಾಡಿದರೆ ಕನ್ನಡಿಗರಿಗೆ ನಿರಾಶೆ, ನೋವು, ಹತಾಶೆ ಖಂಡಿತಾ. ಹಾಗಾದರೆ; ಕೆಳಗಿನ ಅಂಶಗಳನ್ನು ಗಮನಿಸೋಣ.

1. ಈ ದಶಪಥ ಹೆದ್ದಾರಿಯ ಮಾರಣಾಂತಿಕ ಹೊಡೆತ ಮೊದಲು ಬಿದ್ದಿರುವುದು ಮಂಡ್ಯ ಜಿಲ್ಲೆ ಜನರಿಗೆ. ಆರ್ಥಿಕವಾಗಿ, ಸಾಮಾಜಿಕವಾಗಿ ಈ ಜಿಲ್ಲೆಯನ್ನು ಮುಗಿಸುವುದೇ ದಶಪಥ ಹೆದ್ದಾರಿಯ ದುರುದ್ದೇಶವಾ? ಜಿಲ್ಲೆಯ ಆರ್ಥಿಕ ಸರಪಳಿಗೆ ಕುಣಿಕೆ ಬಿಗಿಯುವುದೇ ಇದರ ಒಳ ಉದ್ದೇಶವಾ? ಎನ್ನುವುದು ನನ್ನ ಅನುಮಾನ ಎಂದು ಪ್ರಶ್ನಿಸಿದ್ದಾರೆ.

2. ಮಧ್ಯಮ, ಸಣ್ಣಗಾತ್ರದ ಹೊಟೇಲು, ಸಣ್ಣ-ಅತಿಸಣ್ಣ ಉದ್ದಿಮೆ, ಕಬ್ಬುಬೆಲ್ಲ, ಪೆಟ್ರೋಲ್ ಬಂಕ್ ಸೇರಿ ಅಗತ್ಯ ವಸ್ತುಗಳ ಸುಮಾರು 2600ಕ್ಕೂ ಹೆಚ್ಚು ಸ್ಥಳೀಯ ಉದ್ಯಮ ನೆಲಕಚ್ಚಿವೆ. ಎಳನೀರು ವ್ಯಾಪಾರಕ್ಕೆ ಎಳ್ಳುನೀರು ಬಿಡಲಾಗಿದೆ. 6000ಕ್ಕೂ ಹೆಚ್ಚು ಜನರ ಜೀವನೋಪಾಯಕ್ಕೆ ಹೊಡೆತ ಬಿದ್ದು, ಅವರ ಬದುಕಿನ ಮೇಲೆ‌ ಹೆದ್ದಾರಿ ಹೆಮ್ಮಾರಿ ಬಂದು ಕೂತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ