ಲೋಕಸಭೆ ಚುನಾವಣೆ 2024: ಚಿಕ್ಕಮಗಳೂರಿನ ರೆಸಾರ್ಟ್​ನಲ್ಲಿ ಕುಮಾರಸ್ವಾಮಿ ವಾಸ್ತವ್ಯ, ಪಕ್ಷದ ಶಾಸಕರೊಂದಿಗೆ ಸಭೆ

| Updated By: ವಿವೇಕ ಬಿರಾದಾರ

Updated on: Mar 01, 2024 | 11:13 AM

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಮತ್ತು ಶಾಸಕರು ಇಂದು ಮಧ್ಯಾಹ್ನ ಚಿಕ್ಕಮಗಳೂರಿಗೆ ತೆರಳಲಿದ್ದಾರೆ.

ಲೋಕಸಭೆ ಚುನಾವಣೆ 2024: ಚಿಕ್ಕಮಗಳೂರಿನ ರೆಸಾರ್ಟ್​ನಲ್ಲಿ ಕುಮಾರಸ್ವಾಮಿ ವಾಸ್ತವ್ಯ, ಪಕ್ಷದ ಶಾಸಕರೊಂದಿಗೆ ಸಭೆ
ಹೆಚ್​ಡಿ ಕುಮಾರಸ್ವಾಮಿ
Follow us on

ಚಿಕ್ಕಮಗಳೂರು, ಮಾರ್ಚ 01: ಲೋಕಸಭೆ ಚುನಾವಣೆಗೆ (Lok Sabha Election) ಎರಡು ತಿಂಗಳು ಬಾಕಿ ಉಳಿದಿದೆ. ಎಲ್ಲ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ಹೆಣೆಯುತ್ತಿವೆ. ಇನ್ನು ಕಾರ್ನಾಟಕದಲ್ಲಿ ಜೆಡಿಎಸ್ (JDS)​ ಬಿಜೆಪಿ (BJP) ಜೊತೆ ಮೈತ್ರಿ ಮಾಡಿಕೊಂಡಿದೆ. ಇದರಿಂದ ಮೋದಿ ಅಲೆಯಲ್ಲಿ ಮತ್ತು ಸ್ಥಳೀಯ ನಾಯಕರ ವರ್ಚಸ್ಸಿನಿಂದ ಕನಿಷ್ಠ 2-3 ಕ್ಷೇತ್ರಗಳಲ್ಲಿ ಗೆಲವು ಸಾಧಿಸುತ್ತೇವೆ ಎಂದು ಜೆಡಿಎಸ್​ ನಾಯಕರು ಲೆಕ್ಕಾಚಾರ ಹಾಕಿದ್ದಾರೆ. ಇನ್ನು ಜೆಡಿಎಸ್​ ಲೋಕಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧಿರಿಸಿದೆ. ವಿಶೇಷವಾಗಿ ಮಂಡ್ಯ (Mandya) ಕ್ಷೇತ್ರವನ್ನೇ ಪ್ರಮುಖವಾಗಿಸಿಕೊಂಡಿದೆ. ಈ ಸಂಬಂಧ ತಂತ್ರಗಾರಿಗೆ ರೂಪಿಸಲು ಕಾಫಿನಾಡು ಚಿಕ್ಕಮಗಳೂರಿನ ರೆಸಾರ್ಟ್​​ನಲ್ಲಿ (Chikkamagaluru Resort) ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಪಕ್ಷದ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.

ಹೀಗಾಗಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಮತ್ತು ಶಾಸಕರು ಇಂದು (ಮಾ.01) ಮಧ್ಯಾಹ್ನ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ರೆಸಾರ್ಟ್​​ನಲ್ಲಿ ಕುಳಿತು ಲೋಕಸಭಾ ಚುನಾವಣೆ ಸಂಬಂಧ ರಣತಂತ್ರ ಹೆಣೆಯಲಿದ್ದಾರೆ.
ಈ ಸಭೆಯಲ್ಲಿ ಮಂಡ್ಯ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುವ ಬಗ್ಗೆ ಚರ್ಚಿಸಲಿದ್ದಾರೆ. ಹಾಗೆ ಮಂಡ್ಯದ ರಾಜಕೀಯ ಬೆಳವಣಿಗೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಹಳೆ ಮೈಸೂರು ಭಾಗದ ಜೆಡಿಎಸ್ ಶಾಸಕರು, ಮುಖಂಡರು ಭಾಗಿಯಾಗಲಿದ್ದಾರೆ. ಹೀಗಾಗಿ ಹೆಚ್​ಡಿ ಕುಮಾರಸ್ವಾಮಿ ಸಂಪೂರ್ಣ ರೆಸಾರ್ಟ್ ಬುಕ್ ಮಾಡಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಕರ್ನಾಟಕದಿಂದ ಜೈಶಂಕರ್, ನಿರ್ಮಲಾ ಸೀತಾರಾಮನ್ ಸ್ಪರ್ಧೆ ಸಾಧ್ಯತೆ: ಪ್ರಲ್ಹಾದ್ ಜೋಶಿ

ಮೂರು ದಿನಗಳ ಸಭೆ ನಂತರ ಕೊನೆ ದಿನ ಮಾರ್ಚ್​ 3 ರಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಎಂಎಲ್​​​ಸಿ ಭೋಜೇಗೌಡ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೆಚ್​ಡಿ ಕುಮಾರಸ್ವಾಮಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಮಂಡ್ಯ ಕ್ಷೇತ್ರ ಟಿಕೆಟ್​ಗಾಗಿ ಏಕಿಷ್ಟು ಬಡದಾಟ

ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್​ ಪಕ್ಷೇತರವಾಗಿ ಸ್ಪರ್ಧಿಸಿದ್ದರು. ಸುಮಲತಾ ಅಂಬರೀಶ್​ ಅವರಿಗೆ ಬಿಜೆಪಿ ಅಘೋಷಿತ ಬೆಂಬಲ ವ್ಯಕ್ತಪಡಿಸಿತ್ತು. ಅಂದಿನ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಸ್ಪರ್ಧಿಸಿ, ಸೋಲು ಕಂಡಿದ್ದರು. ಸುಮಲತಾ ಅಂಬರೀಶ್​ ಗೆದ್ದಿದ್ದರು. ಆದರೆ ಇದೀಗ ಸುಮಲತಾ ಅಂಬರೀಶ್​ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದು, ಅತ್ತ ಜೆಡಿಎಸ್​ ಬಿಜೆಪಿ ಮಿತ್ರಪಕ್ಷದಲ್ಲಿ ಸೇರಿಕೊಂಡಿದೆ. ಇದರಿಂದ ಈ ಬಾರಿಯ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ಸುಮಲತಾ ಅಂಬರೀಶ್​ ಅವರ ಪಾಲಾಗೊತ್ತೊ ಅಥವಾ ಎನ್​ಡಿಎ ಅಭ್ಯರ್ಥಿಗೆ ಸಿಗುತ್ತೊ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:13 am, Fri, 1 March 24