ತಾಕತ್ ಇದ್ದರೆ ಕಾಂತರಾಜು ವರದಿ ಸ್ವೀಕರಿಸಿ: ಸಿಎಂ ಸಿದ್ದರಾಮಯ್ಯಗೆ ಹೆಚ್​ಡಿ ಕುಮಾರಸ್ವಾಮಿ ಸವಾಲು

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್​ ವರದಿಯನ್ನು ತಾಕತ್ತಿದ್ದರೆ ಸ್ವೀಕರಿಸಿ. ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು.

ತಾಕತ್ ಇದ್ದರೆ ಕಾಂತರಾಜು ವರದಿ ಸ್ವೀಕರಿಸಿ: ಸಿಎಂ ಸಿದ್ದರಾಮಯ್ಯಗೆ ಹೆಚ್​ಡಿ ಕುಮಾರಸ್ವಾಮಿ ಸವಾಲು
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
| Updated By: ವಿವೇಕ ಬಿರಾದಾರ

Updated on: Jan 30, 2024 | 4:55 PM

ಬೆಂಗಳೂರು, ಜನವರಿ 30: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್​ ವರದಿಯನ್ನು ತಾಕತ್ತಿದ್ದರೆ ಸ್ವೀಕರಿಸಿ. ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಸವಾಲು ಹಾಕಿದರು. ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, 2ಎ ಮೀಸಲು ವ್ಯಾಪ್ತಿಯಲ್ಲಿ ಸುಮಾರು 108 ಉಪ ಜಾತಿಗಳು ಇವೆ. ಆದರೆ, ಮೀಸಲಾತಿ ಸೌಲಭ್ಯದ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ, ಆಮೇಲೆ ಕಾಂತರಾಜು ವರದಿ, ಇನ್ನೊಂದು ವರದಿಯ ಬಗ್ಗೆ ಮಾತನಾಡಿ ಎಂದು ಸಿದ್ದರಾಮಯ್ಯ ಅವರಿಗೆ ಪಂಥಾಹ್ವಾನ ನೀಡಿದರು.

ಕಾಂತರಾಜು ವರದಿ ಹಿಡಿದುಕೊಂಡು ಪ್ರತಿದಿನ ಭಾಷಣ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ಬೊಮ್ಮಾಯಿ, ಯಡಿಯೂರಪ್ಪ ಈ ವರದಿಯನ್ನು ಸ್ವೀಕಾರ ಮಾಡಲಿಲ್ಲ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಈಗ ನೀವು ಅಧಿಕಾರಕ್ಕೆ ಬಂದು ಒಂದು ವರ್ಷ ಆಯಿತು. ಯಾಕೆ ಆ ವರದಿಯನ್ನು ಸ್ವೀಕಾರ ಮಾಡಿ ಜಾರಿ ಮಾಡಲಿಲ್ಲ. ಯಾರು ಅಡ್ಡ ಇದ್ದಾರೆ ನಿಮಗೆ. ತಾಕತ್ತು ಇದ್ದರೆ ಆ ಕಾಂತರಾಜು ವರದಿ ಸ್ವೀಕರಿಸಿ ಜಾರಿ ಮಾಡಿ ಎಂದು ಕುಮಾರಸ್ವಾಮಿ ಅವರು ಸಿಎಂಗೆ ನೇರ ಸವಾಲು ಹಾಕಿದರು.

ಒಬ್ಬ ಕುರಿ ಕಾಯುವವನ ಮಗ ಸಿಎಂ ಆದ ಅಂತಾ ನನ್ನ ಮೇಲೆ ವಿಷ ಕಾರ್ತಾರೆ ಅಂತ ಅಳಲು

ತೋಡಿಕೊಂಡಿದ್ದಾರೆ. ಕುರಿ ಕಾಯುವ ಮಗನನ್ನೇ ಅಂದು ದೇವೇಗೌಡರು ಆರ್ಥಿಕ ಸಚಿವರನ್ನಾಗಿ ಮಾಡಿದ್ದರು. ನಿಮ್ಮ ಇಷ್ಟು ವರ್ಷದ ರಾಜಕೀಯದಲ್ಲಿ ಎಷ್ಟು ಸಲ ಸಚಿವರಾದಿರಿ, ಮುಖ್ಯಮಂತ್ರಿ ಆದಿರಿ, ಉಪ ಮುಖ್ಯಮಂತ್ರಿ ಆದಿರಿ. ಜಾತಿವ್ಯವಸ್ಥೆ, ಶೋಷಣೆ ಅಂತ್ಯ ಮಾಡಲು ಅವಕಾಶ ಇತ್ತು ನಿಮಗೆ, ಯಾಕೆ ಮಾಡಲಿಲ್ಲ? ಎಂದು ಅವರು ಸಿದ್ದರಾಮಯ್ಯ ಅವರನ್ನು ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: ಮಂಡ್ಯ ಹನುಮ ಧ್ವಜ ವಿವಾದ: ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ ಎಂದ ಕುಮಾರಸ್ವಾಮಿ

ಇಂಥ ಸಮಾಜವನ್ನು ಒಡೆಯುವ ರಾಜಕಾರಣ ನಿಲ್ಲಿಸಿ. ಎಷ್ಟು ದಿನ ಅಧಿಕಾರದಲ್ಲಿ ಇರ್ತೀರಾ? ಕದ್ದುಮುಚ್ಚಿ ನಿಮ್ಮ ಹಾಗೆ ರಾಜಕೀಯ ಮಾಡೋನಲ್ಲ ನಾನು. ನೇರವಾಗಿಯೇ ನಾನು ಬಿಜೆಪಿ ಜತೆ ಕೈ ಜೋಡಿಸಿದ್ದೇನೆ. ನಿಮ್ಮ ಹಾಗೆ ಹೊಂದಾಣಿಕೆ ರಾಜಕಾರಣ ಮಾಡಲ್ಲ ನಾನು. ಜನಪರ ತೀರ್ಮಾನಗಳು ಇದ್ದರೆ ನಾವು ಕೂಡ ಬೆಂಬಲ ಕೊಡುತ್ತೇವೆ. ಕಮೀಷನ್ ಹೊಡೆಯುವುದು ನಿಲ್ಲಿಸಿ ಕೆಲಸ ಮಾಡಿ ಎಂದು ಅವರು ಸಿದ್ದರಾಮಯ್ಯ ಮೇಲೆ ಹರಿಹಾಯ್ದರು.

ಕಾಂಗ್ರೆಸ್​ನ್ನು ಕೊಣಕ್ಕೆ ಹೋಲಿಸಿದ ಹೆಚ್​ಡಿಕೆ

ಕಾಂಗ್ರೆಸ್ ಪಕ್ಷದ ತೀವ್ರ ಟೀಕಾ ಪ್ರಹಾರ ನಡೆಸಿದ ಅವರು, ಒಂದು ಕುಡಿಯುವ ನೀರಿನ ಜಾಗಕ್ಕೆ ಹಸುವನ್ನು ಬಿಟ್ಟರೆ ಅದು ನೀರನ್ನೂ ಕುಡಿದು ಅದನ್ನು ಕಲಕದೇ ಹೋಗುತ್ತದೆ. ಆದರೆ, ಅದೇ ಜಾಗಕ್ಕೆ ಕೋಣವನ್ನು ಬಿಟ್ಟರೆ ನೀರನ್ನು ಕುಡಿದು ಬೇರೆ ಯಾರೂ ಕುಡಿಯದ ರೀತಿ ಆ ನೀರನ್ನು ರಾಡಿ ಎಬ್ಬಿಸಿ ಹೋಗುತ್ತದೆ. ಕಾಂಗ್ರೆಸ್ ಕೋಣದ ರೀತಿ ಎಂದು ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.

ನಿತೀಶ್ ಕುಮಾರ್ ಅವರು 9ನೇ ಸಲ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ತೆಗೆದುಕೊಂಡಿದ್ದಾರೆ. ಇದೊಂದು ದಾಖಲೆ. ಆದರೆ, ನನ್ನ ವಿಷಯದಲ್ಲಿ ಹಾಗೆ ಆಗಿಲ್ಲ. ನರೇಂದ್ರ ಮೋದಿ 2018ರಲ್ಲೆ ಹೇಳಿದ್ದರು. ಇವತ್ತು ಕಾಂಗ್ರೆಸ್ ಬಿಟ್ಟು ಬನ್ನಿ ನಾಳೆಯೇ ಮತ್ತೆ ನಮ್ಮ ಜತೆ ಸೇರಿ ಮುಖ್ಯಮಂತ್ರಿ ಆಗಿ ಪ್ರಮಾಣ ತೆಗೆದುಕೊಳ್ಳಿ ಎಂದರು. ನಾನು ಕೇಳಲಿಲ್ಲ. ಅಂದು ಅವರ ಮಾತು ಕೇಳಿದ್ದಿದ್ದರೆ ನಿತೀಶ್ ಕುಮಾರ್ ರೀತಿ ನಾನೂ ಮತ್ತೆ ಸಿಎಂ ಆಗ್ತಾ ಇದ್ದೆ. ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್ ನವರನ್ನು ನಂಬಿ ನಾನು ಆ ಅವಕಾಶ ಕಳೆದುಕೊಂಡೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಅರಸು ಬಗ್ಗೆ ಮೊಸಳೆ ಕಣ್ಣೀರು

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರಿಗೆ ಭಾರತರತ್ನ ಕೊಡಬೇಕು ಎಂದು ಉಪ ಮುಖ್ಯಮಂತ್ರಿ ಅವರು ಕೇಂದ್ರಕ್ಕೆ ಒತ್ತಾಯ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ತನ್ನ ಜೀವನವನ್ನೇ ಅರ್ಪಣೆ ಮಾಡಿದ ಅವರಿಗೆ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿತು. ಅವರ ಜೀವನವನ್ನು ಸಂಪೂರ್ಣವಾಗಿ ಹಾಳು ಮಾಡಿತು. ಈಗ ನೋಡಿದರೆ ಕಾಂಗ್ರೆಸ್ ನಾಯಕರು ಅರಸು ಅವರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.

ಈಗ ಎಲ್ಲರೂ ಕಾಂಗ್ರೆಸ್ ಬಿಟ್ಟು ಹೋಗುತ್ತಿದ್ದಾರೆ. ನಿತೀಶ್ ಆಯಿತು, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್ ಯಾರಿಗೂ ಆ ಪಕ್ಷದ ಸಹವಾಸ ಬೇಡವಾಗಿದೆ. ಇವರ ನಡವಳಿಕೆ ನೋಡಿ ಎಲ್ಲರೂ ಬೇಸತ್ತು ಒಬ್ಬೊಬ್ಬರಾಗಿ ಹೋಗ್ತಾ ಇದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡರು, ಮಾಜಿ ಸಚಿವರಾದ ಅಲಕೊಡ್ ಹನುಮಂತಪ್ಪ, ವೆಂಕಟರಾವ್ ನಾಡಗೌಡ, ಲೀಲಾದೇವಿ ಆರ್ ಪ್ರಸಾದ್, ಮಾಜಿ ಶಾಸಕರಾದ ಸುರೇಶ್ ಗೌಡ, ರಾಜಾ ವೆಂಕಟಪ್ಪ ನಾಯಕ, ತಿಮ್ಮರಾಯಪ್ಪ, ಹಿರಿಯ ನಾಯಕರಾದ ವೀರಭದ್ರಪ್ಪ ಹಾಲಹರವಿ, ಚಂದ್ರಶೇಖರ್, ದೊಡ್ಡನಗೌಡ ಪಾಟೀಲ್, ಪ್ರಸನ್ನ ಕುಮಾರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ