AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಲಸಿಕೆ ವಿರುದ್ಧವೇ ಮಾತಾಡಿ ಇಬ್ಬಗೆ ನೀತಿ ಅನುಸರಿಸಿತು: ಮಾಜಿ ಸಿಎಂ ಕುಮಾರಸ್ವಾಮಿ

ನಿನ್ನೆ ಸಿಎಂ ಯಡಿಯೂರಪ್ಪ ಘೋಷಿಸಿರುವ ಲಾಕ್​ಡೌನ್ ಪ್ಯಾಕೇಜ್ ಬಗ್ಗೆಯೂ ಟೀಕಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಲಸಿಕೆ ವಿರುದ್ಧವೇ ಮಾತಾಡಿ ಇಬ್ಬಗೆ ನೀತಿ ಅನುಸರಿಸಿತು: ಮಾಜಿ ಸಿಎಂ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
guruganesh bhat
|

Updated on: May 20, 2021 | 4:35 PM

Share

ಬೆಂಗಳೂರು: ಕೊವಿಡ್ ಲಸಿಕೆ, ಇಂದಿರಾ ಕ್ಯಾಂಟೀನ್ ಸೇರಿದಂತೆ ಸದ್ಯ ಚಾಲ್ತಿಯಲ್ಲಿರುವ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಸರಣಿ ಟ್ವೀಟ್​ಗಳ ಮೂಲಕ ಟೀಕಿಸಿದ್ದಾರೆ. ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ, ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್‌ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್‌ನ ಇಬ್ಬಗೆ ನೀತಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್‌ ಕೊಡಬೇಕೆನಿಸಿದೆ! ಎಂದು ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ಸಿದ್ದರಾಮಯ್ಯಗೆ ಮಾತಿನ ಗುದ್ದು ಹಾಕಿದ್ದಾರೆ.

ನಿನ್ನೆ ಸಿಎಂ ಯಡಿಯೂರಪ್ಪ ಘೋಷಿಸಿರುವ ಲಾಕ್​ಡೌನ್ ಪ್ಯಾಕೇಜ್ ಬಗ್ಗೆಯೂ ಟೀಕಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಜನಹಿತದ ಲಾಕ್‌ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Meghana Raj: 2 ತಿಂಗಳ ಹಸುಗೂಸಿಗೆ ಕೊವಿಡ್​ ಬಂದಾಗ ಎದುರಾಗಿದ್ದ ಭಯದ ಪರಿಸ್ಥಿತಿ ಬಗ್ಗೆ ವಿವರಿಸಿದ ಮೇಘನಾ ರಾಜ್​

ರಾಜ್​ಕುಮಾರ್​ಗೆ ಯೋಗಾಸನ ಹೇಳಿಕೊಟ್ಟ ಹೊನ್ನಪ್ಪ ನಾಯ್ಕರ್​ ಕೊವಿಡ್​​ನಿಂದ ನಿಧನ (Former CM HD Kumaraswamy taunts Opposition leader Siddaramaiah on Covid Vaccine and lockdown)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್