AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಷೇಪಣೆ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ, ಕುಷ್ಟಗಿ ಸಮಾವೇಶದಲ್ಲಿ ಜಾಣ ನಡೆ

ಪಕ್ಷದಲ್ಲಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಹೋದಲ್ಲೆಲ್ಲಾ ಅಭ್ಯರ್ಥಿ ಘೋಷಣೆ ಮಾಡುವುದನ್ನು ಕೈ ಬಿಟ್ಟ ಜಾಣ ನಡೆ ಇಟ್ಟಿದ್ದಾರೆ.

ಆಕ್ಷೇಪಣೆ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ, ಕುಷ್ಟಗಿ ಸಮಾವೇಶದಲ್ಲಿ ಜಾಣ ನಡೆ
ಸಿದ್ದರಾಮಯ್ಯ
TV9 Web
| Edited By: |

Updated on:Dec 16, 2022 | 4:32 PM

Share

ಕೊಪ್ಪಳ: ಇತ್ತೀಚೆಗಷ್ಟೇ ಕೊಪ್ಪಳದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ(Siddaramaiah) ಜಿಲ್ಲೆಯ ಈ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದರು. ಆದ್ರೆ, ಹೈಕಮಾಂಡ್ ಟಿಕೆಟ್​ ಹಂಚಿಕೆ ಮೊದಲೇ ಅಭ್ಯರ್ಥಿ ಹೆಸರು ಘೋಷಿಸುವುದು ಎಷ್ಟು ಸೂಕ್ತ ಎಂದು ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದ್ದವು. ಇದರಿಂದ ಎಚ್ಚೆತ್ತುಕೊಂಡಿರುವ ಸಿದ್ದರಾಮಯ್ಯ, ಇಂದು(ಡಿಸೆ.ಬರ್ 16) ಕುಷ್ಟಗಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಜಾಣ ನಡೆ ಇಟ್ಟಿದ್ದಾರೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲೆಯನ್ನೇ ಟಾರ್ಗೆಟ್ ಮಾಡಿದ ಬಿಜೆಪಿ ಮತ್ತು ಕಾಂಗ್ರೆಸ್; ಜಿಲ್ಲೆಯಲ್ಲಿ ಎರಡೂ ಪಕ್ಷಗಳ ರಾಜಕೀಯ ಚದುರಂಗದಾಟ

ಹೌದು…ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರ ಜನ್ಮದಿನ ಆಚರಣೆ ನಿಮಿತ್ತ ಇಂದು(ಡಿಸೆಂಬರ್ 16) ಆಯೋಜಿಸಿದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಅಮರೇಗೌಡ ನಿಮ್ಮ ಜೊತೆಗೆ ಇರ್ತಾರೆ ಅನ್ನೋ ಮೂಲಕ ಜಾಣ ನಡೆ ಇಟ್ಟಿದ್ದಾರೆ. ಈ ಮೂಲಕ ಹೋದಲ್ಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಕೈಬಿಟ್ಟಿದ್ದಾರೆ.

ಸಿದ್ದರಾಮಯ್ಯ ಅವರು ಹೋದಲ್ಲೆಲ್ಲಾ ಬಹಿರಂಗವಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದ್ದರು. ಇತ್ತೀಚೆಗೆ ಕೊಪ್ಪಳದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಹಿರಂಗವಾಗಿಯೇ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದರು.

ಈ ಹಿಂದೆ ಅಮರೇಗೌಡರನ್ನ ಗೆಲ್ಲಿಸುವಂತೆ ಕರೆ ಕೊಟ್ಟಿದ್ದ ಸಿದ್ದು ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ್ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಬಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರೆಡ್ಡಿ ಅವರನ್ನು ಗೆಲ್ಲಿಸುವ ಹೊಣೆಗಾರಿಗೆ ನಿಮ್ಮದು. ಜಿಲ್ಲೆಯ ಐದು ಕ್ಷೇತ್ರದಲ್ಲಿ ಸಹ ಕಾಂಗ್ರೆಸ್‌ ಜಯಭೇರಿ ಬಾರಿಸಬೇಕು ಎಂದು ಹೇಳಿದ್ದರು. ಇದು ಕಾಂಗ್ರೆಸ್​ನಲ್ಲೇ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಬಹಿರಂಗವಾಗಿಯೇ ಕುಷ್ಟಗಿಯಲ್ಲಿ ಅಮರೇಗೌಡ ಅವರನ್ನು ಗೆಲ್ಲಿಸುವಂತೆ ಹೇಳಿದ್ದರು. ಆದ್ರೆ, ಇದೀಗ ಕುಷ್ಟಗಿಯಲ್ಲಿ ಅಮರೇಗೌಡ ಅವರ ಕಾರ್ಯಕ್ರದಲ್ಲೇ ಸಿದ್ದರಾಮಯ್ಯ ಅವರ ತಮ್ಮ ಭಾಷಣದಲ್ಲಿ, ಅವರನ್ನು ಗೆಲ್ಲಿಸಿ, ಇವರನ್ನ ಗೆಲ್ಲಿಸಿ ಎಂದು ಹೇಳದೇ ಜಾಣ ನಡೆ ಇಟ್ಟರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:32 pm, Fri, 16 December 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್