AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ದುರುದ್ದೇಶಪೂರಿತ ಹಿಂದುತ್ವಕ್ಕೆ ಯುವಕರು ಬಲಿ? RSS​​, ಶಾಸಕರ ಮಗ ಕೊಲೆಯಾದ ನಿದರ್ಶನ ಇದೆಯಾ? ಸಿದ್ದು ಪ್ರಶ್ನೆ

ಯುವಕರು ಬಿಜೆಪಿಯ ದುರುದ್ದೇಶಪೂರಿತ ಹಿಂದುತ್ವಕ್ಕೆ ಬಲಿಯಾಗ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಬಿಜೆಪಿಯ ದುರುದ್ದೇಶಪೂರಿತ ಹಿಂದುತ್ವಕ್ಕೆ ಯುವಕರು ಬಲಿ? RSS​​, ಶಾಸಕರ ಮಗ ಕೊಲೆಯಾದ ನಿದರ್ಶನ ಇದೆಯಾ? ಸಿದ್ದು ಪ್ರಶ್ನೆ
ಸಿದ್ದರಾಮಯ್ಯ
TV9 Web
| Edited By: |

Updated on: Jan 22, 2023 | 5:00 PM

Share

ಉಡುಪಿ: ಯುವಕರು ಬಿಜೆಪಿ (BJP) ಯ ದುರುದ್ದೇಶಪೂರಿತ ಹಿಂದುತ್ವಕ್ಕೆ ಬಲಿಯಾಗ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು. ಉಡುಪಿಯಲ್ಲಿ ಇಂದು (ಜ.22) ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಅವರು ಮಾತನಾಡಿ,  ಬಿಜೆಪಿಯವರು ಹಿಂದೂ ಪರ ಇಲ್ಲ, ಹಿಂದುತ್ವದ ಪರವಾಗಿರುವವರು. ನಾನು, ಡಿಕೆಶಿ, ಹರಿಪ್ರಸಾದ್, ವೀರಪ್ಪ ಮೊಯ್ಲಿ​ ಹಿಂದುತ್ವವಾದಿಗಳಲ್ವಾ ಎಂದು ಪ್ರಶ್ನಿಸಿದರು. ಹಿಂದೂಗಳ ಪರವಾಗಿರುವವರು‌ ಅಂದ್ರೆ ಮನುಷ್ಯತ್ವದ ಪರ ಇರುವವರು. ಕರಾವಳಿ ಭಾಗದಲ್ಲಿ ಕೊಲೆಯಾದವರು ಹಿಂದುಳಿದ ಜಾತಿಯವರು. ಆರ್​ಎಸ್​ಎಸ್​​, ಶಾಸಕರ ಮಗ ಕೊಲೆಯಾದ ನಿದರ್ಶನ ಇದೆಯಾ? ಕೊಲೆಯಾದರೆ ಹೆಣಗಳ ಮೇಲೆ ರಾಜಕೀಯ ಮಾಡ್ತಾರೆ ಎಂದು ಕಿಡಿಕಾರಿದರು.

ನಳಿನ್ ಕುಮಾರ್ ಕಟೀಲು ನಾಲಾಯಕ್ 

ನಳಿನ್ ಕುಮಾರ್ ಕಟೀಲು​ ಬಿಜೆಪಿ ಅಧ್ಯಕ್ಷನಾಗಲು ನಾಲಾಯಕ್. ರಸ್ತೆ, ಚರಂಡಿ ಸಮಸ್ಯೆ ಬಗ್ಗೆ ಮಾತಾಡಬೇಡಿ ಎಂದು ಕಟೀಲು ಹೇಳ್ತಾರೆ. ದಯವಿಟ್ಟು ಬಿಜೆಪಿಯವರ ಮಾತಿಗೆ ಮರುಳಾಗಬೇಡಿ. ನರೇಂದ್ರ ಮೋದಿಯಷ್ಟು ಸುಳ್ಳು ಹೇಳಿದ ಪ್ರಧಾನಿ ಯಾರೂ ಇಲ್ಲ. ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದು ಸಾವರ್ಕರ್ ಮಾಸಾಶನ ಪಡೆದಿದ್ದರು.​ ಕರಾವಳಿಯನ್ನು ಹಿಂದುತ್ವದ ಪ್ರಯೋಗಾಲಯ ಮಾಡಲು ಹೊರಟಿದ್ದಾರೆ. ನಮ್ಮ ವಿರೋಧ ಮನುವಾದಿಗಳಿಗೆ ಹೊರತು ಹಿಂದೂವಾದಿಗೆ ಅಲ್ಲ. ವಿಧಾನಸೌಧದ ಗೋಡೆಗಳು ಲಂಚ ಲಂಚ ಎಂದು ಪಿಸುಗುಡುತ್ತಿವೆ ಎಂದು ಸಿದ್ಧರಾಮಯ್ಯ ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಸಿದ್ದರಾಮಯ್ಯಗೆ ರಾಜಕೀಯ ನಿವೃತ್ತಿ ಪಡೆಯುವ ಸ್ಥಿತಿ ಬರಲಿದೆ: ಸಿದ್ದುಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ

ಬಿಜೆಪಿಗರಿಗೆ ಸಿದ್ಧರಾಮಯ್ಯ ಪ್ರಶ್ನೆ

ಪಿಎಫ್ಐ, ಆರ್​ಎಸ್​ಎಸ್​​ ಇದ್ದ ಹಾಗೆ, SDPI, ಬಿಜೆಪಿ ಇದ್ದ ಹಾಗೆ. RSS, ಬಿಜೆಪಿಯ ಯಾರಾದರೂ ಒಬ್ಬ ಸ್ವಾತಂತ್ರ್ಯಕ್ಕಾಗಿ ಸತ್ತಿದ್ದಾರಾ ಎಂದು ಪ್ರಶ್ನಿಸಿದರು. ಮಾತೆತ್ತಿದ್ರೆ SDPI, ಪಿಎಫ್​ಐನವರನ್ನು ಬಿಡುಗಡೆ ಮಾಡಿದ್ರು ಅಂತಾರೆ. ನಾನು ಜೈಲಿನಿಂದ ಬಿಡುಗಡೆ ಮಾಡಿದವರ ಪಟ್ಟಿ ಕೊಡಿ ಎಂದು ಕೇಳಿದ್ದೆ. ಈ ಬಗ್ಗೆ ಆರಗ ಜ್ಞಾನೇಂದ್ರಗೂ ಪತ್ರ ಬರೆದಿದ್ದೆ, ಪ್ರತಿಕ್ರಿಯೆ ಬಂದಿಲ್ಲ. ವಿದ್ಯಾರ್ಥಿಗಳು, ದಲಿತರು, ರೈತ ಸಂಘಟನೆಯವರ ಪಟ್ಟಿ ಕೊಟ್ಟಿದ್ದರು.

ಇದನ್ನೂ ಓದಿ: ತ್ರಿಶೂಲ ಹಿಡ್ಕೊಂಡು ಬಿಜೆಪಿ ಕಾರ್ಯಕರ್ತರು ಸಾಯ್ತವ್ರೆ, ಯಾವ ಮಂತ್ರಿ ಮಗನೂ ಬಲಿಯಾಗಲ್ಲ: ಡಿ.ಕೆ.ಶಿವಕುಮಾರ್

ಸ್ಯಾಂಟ್ರೋ ರವಿಯಿಂದ ಆರಗ ಜ್ಞಾನೇಂದ್ರ ಬಣ್ಣ ಬಯಲು

ಎಸ್​ಡಿಪಿಐ ಜತೆ ಸಂಬಂಧ ಇಟ್ಟುಕೊಂಡಿರುವುದು ಬಿಜೆಪಿಯವರು. ಈಗ PFI ಸಂಘಟನೆಯನ್ನು ಮಾತ್ರ ರದ್ದು ಮಾಡಿದ್ದಾರೆ. ಸ್ಯಾಂಟ್ರೋ ರವಿಯನ್ನು ಪೊಲೀಸ್​ ಕಸ್ಟಡಿಗೆ ಕೇಳಲೇ ಇಲ್ಲ. ರವಿಯನ್ನು ಕಸ್ಟಡಿಗೆ ಕೇಳಿದರೆ ಇವರ ಜಾತಕವೆಲ್ಲಾ ಹೊರ ಬರುತ್ತೆ. ಸ್ಯಾಂಟ್ರೋ ರವಿಯಿಂದ ಆರಗ ಜ್ಞಾನೇಂದ್ರ ಬಣ್ಣ ಬಯಲಾಗಬಹುದು. ಈ ಕಾರಣಕ್ಕೆ ಸ್ಯಾಂಟ್ರೋ ರವಿಯನ್ನು ಪೊಲೀಸ್ ಕಸ್ಟಡಿಗೆ ಕೇಳಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ