AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಂಗಿ ಪ್ರವಾಸ ಕೈಬಿಟ್ಟ ಮಾಜಿ ಸಿಎಂ ಯಡಿಯೂರಪ್ಪ; ಬಿಜೆಪಿ ನಿಯಮಗಳೇ ಒಬ್ಬರೇ ಪ್ರವಾಸ ಮಾಡಲು ಅಡ್ಡಿ!

ಬಿಜೆಪಿಯ ನಿಯಮಗಳ ಪ್ರಕಾರ ಪಕ್ಷದ ಯಾವುದೇ ನಾಯಕ ರಾಜ್ಯ ಪ್ರವಾಸ ಕೈಗೊಳ್ಳಬೇಕಾದರೆ ಪಕ್ಷ ಪ್ರವಾಸ ಕಾರ್ಯಕ್ರಮ ಸಿದ್ಧಪಡಿಸಬೇಕು. ಪಕ್ಷದಿಂದ ಪ್ರವಾಸ ಪಟ್ಟಿ ಮತ್ತು ವಿಷಯ ನಿಗದಿಯಾಗದೇ ಒಬ್ಬರೇ ಪ್ರವಾಸ ಸಾಧ್ಯವಿಲ್ಲ.

ಏಕಾಂಗಿ ಪ್ರವಾಸ ಕೈಬಿಟ್ಟ ಮಾಜಿ ಸಿಎಂ ಯಡಿಯೂರಪ್ಪ; ಬಿಜೆಪಿ ನಿಯಮಗಳೇ ಒಬ್ಬರೇ ಪ್ರವಾಸ ಮಾಡಲು ಅಡ್ಡಿ!
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
TV9 Web
| Edited By: |

Updated on: Aug 28, 2021 | 2:40 PM

Share

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದ ಮಾಜಿ ಸಿಎಂ ಬಿ‌.ಎಸ್. ಯಡಿಯೂರಪ್ಪ(BS Yediyurappa) ತಮ್ಮ ಪ್ರವಾಸದ ರೂಪುರೇಷೆಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ. ಈಮುನ್ನ ಅವರೊಬ್ಬರೇ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಅವರು ತಿಳಿಸಿದ್ದರು. ಆದರೆ ಇದೀಗ ಒಬ್ಬರೇ ಪ್ರವಾಸ ಕೈಗೊಳ್ಳುವ ಬದಲು ಪಕ್ಷದ ಮುಖಂಡರ ಜತೆಗೂಡಿ ಪ್ರವಾಸ ಮಾಡಲು ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ.

ಬಿಜೆಪಿಯ ನಿಯಮಗಳ ಪ್ರಕಾರ ಪಕ್ಷದ ಯಾವುದೇ ನಾಯಕ ರಾಜ್ಯ ಪ್ರವಾಸ ಕೈಗೊಳ್ಳಬೇಕಾದರೆ ಪಕ್ಷ ಪ್ರವಾಸ ಕಾರ್ಯಕ್ರಮ ಸಿದ್ಧಪಡಿಸಬೇಕು. ನಿರ್ದಿಷ್ಟ ವಿಷಯಗಳನ್ನು ಇಟ್ಟುಕೊಂಡು ಪ್ರವಾಸ ಕಾರ್ಯಕ್ರಮ ಸಿದ್ಧಪಡಿಸಬೇಕು. ಪಕ್ಷದಿಂದ ಪ್ರವಾಸ ಪಟ್ಟಿ ಮತ್ತು ವಿಷಯ ನಿಗದಿಯಾಗದೇ ಒಬ್ಬರೇ ಪ್ರವಾಸ ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರದಲ್ಲಿರುವ ಕಾರಣದಿಂದ ಏಕ ವ್ಯಕ್ತಿ ಪ್ರವಾಸ ಸೂಕ್ತವೂ ಅಲ್ಲ ಎಂದು ಅವರು ತೀರ್ಮಾನಿಸಿದ್ದಾರೆ. ವಿಧಾನ ಪರಿಷತ್, ಜಿಲ್ಲಾ ಪಂಚಾಯತ್ ಮತ್ತು ತಾ‌ಲೂಕಾ ಪಂಚಾಯತ್ ಚುನಾವಣೆಗಳಿಗಾಗಿ ಶೀಘ್ರವೇ ರಾಜ್ಯದಲ್ಲಿ ಪಕ್ಷದಿಂದ ಸಂಘಟನಾ ಪ್ರವಾಸದಂತೆ ಅವರು ತಮ್ಮ ಪ್ರವಾಸವನ್ನು ರೂಪಿಸಲು ಅವರು ತೀರ್ಮಾನಿಸಿದ್ದಾರೆ. ಈ ಉದ್ದೇಶದ ಈಡೇರಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ಒಬ್ಬರೇ ಪ್ರವಾಸ ನಡೆಸುವುದು ಸಮಂಜಸವಲ್ಲ. ಪಕ್ಷದಿಂದ ಕಾರ್ಯಸೂಚಿ ಸಿದ್ಧವಾಗದೇ ಒಬ್ಬರೇ ಪ್ರವಾಸ ನಡೆಸಿದರೆ ಪಕ್ಷದ ಮಟ್ಟದಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತವೆ ಎಂಬ ಕಾರಣಗಳು ಏಕಾಂಗಿ ಪ್ರವಾಸವನ್ನು ಮಾಡದಂತೆ ಅವರನ್ನು ತಡೆದಿವೆ ಎಂಬ ಮಾಹಿತಿ ಬಿಜೆಪಿ ಮೂಲಗಳಿಂದ ಲಭ್ಯವಾಗಿದೆ.

ಇತ್ತೀಚೆಗಷ್ಟೇ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಘೋಷಿಸಿದ್ದರು. 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿ ತೊಡಗಿರುವ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯದ ತುಂಬ ಪ್ರವಾಸ ಮಾಡಲೆಂದು ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Polls 2023) ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪಣ ತೊಟ್ಟಿರುವ ಬಿ.ಎಸ್. ಯಡಿಯೂರಪ್ಪ ತಮ್ಮ ಪ್ರವಾಸಕ್ಕೆಂದು 1 ಕೋಟಿ ರೂ. ಮೌಲ್ಯದ ಹೊಸ ಟೊಯೊಟಾ ವೆಲ್​ಫೈರ್ (Toyota Vellfire)  ಕಾರನ್ನು ಖರೀದಿಸಿದ್ದಾರೆ.

78 ವರ್ಷದ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ತಮ್ಮ ಕುಟುಂಬಸ್ಥರೊಂದಿಗೆ ಮಾಲ್ಡೀವ್ಸ್​ಗೆ ಪ್ರವಾಸಕ್ಕೆ ತೆರೆಳಿದ್ದರು. ಕುಟುಂಬದೊಂದಿಗೆ ಮಾಲ್ಡೀವ್ಸ್​ನಲ್ಲಿ ಎಂಜಾಯ್ ಮಾಡಿದ ಯಡಿಯೂರಪ್ಪ ಸೋಮವಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ವಾಪಾಸಾಗಿದ್ದಾರೆ. ಈ ವೇಳೆ ಅವರನ್ನು ಬರಮಾಡಿಕೊಳ್ಳಲು ಹೊಸ ಟೊಯೊಟಾ ವೆಲ್​ಫೈರ್ ಕಾರನ್ನು ತರಲಾಗಿತ್ತು. ಅಂದಾಜು 1 ಕೋಟಿ ರೂ. ಬೆಲೆಯ ಬಿಳಿ ಬಣ್ಣದ KA -05- ND – 4545 ನೋಂದಣಿ ಸಂಖ್ಯೆಯ ಟೊಯೊಟಾ ವೆಲ್‌ಫೈರ್ ಕಾರನ್ನು ಯಡಿಯೂರಪ್ಪ ತಮ್ಮ ರಾಜ್ಯ ಪ್ರವಾಸಕ್ಕಾಗಿ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: 

ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

Shivamogga: ಯಡಿಯೂರಪ್ಪ-ಈಶ್ವರಪ್ಪ ಭೇಟಿ: ಟಿಫನ್​ ಬ್ರೇಕ್​ನಲ್ಲಿ ಒಂದಾದ ಕುಚಿಕು ಗೆಳೆಯರು

(Former CM Yediyurappa abandoned Karnataka solo tour BJP rules impede travel alone)

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್