AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರ್ಯಾಪ್ ಹೆಸರಿನಲ್ಲಿ ಮುನಿರತ್ನ ಬ್ಲ್ಯಾಕ್ ಮೇಲ್ ಮಾಡುತ್ತಾರೆ: ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಗಂಭೀರ ಆರೋಪ

ಹನಿಟ್ರ್ಯಾಪ್ ಹೆಸರಿನಲ್ಲಿ ಮಾಜಿ ಸಚಿವ ಎನ್ ಮುನಿರತ್ನ ಅವರು ಬ್ಲ್ಯಾಕ್ ಮೇಲ್ ಮಾಡುತ್ತಾರೆ ಎಂದು ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮುನಿರತ್ನ ಅವರು ಅಧಿಕಾರಿಗಳ ಮೇಲೆ ಹನಿಟ್ರ್ಯಾಪ್ ಮಾಡಿದ್ದರು. ಮುಖಗವಸು ಹಾಕಿಕೊಂಡು ಮುನಿರತ್ನ ವಿರುದ್ಧ ಆರೋಪ ಮಾಡಿದ ಸಂತ್ರಸ್ಥೆ ಯಾರೆಂದು ಗೊತ್ತಿಲ್ಲ. ಒಂದೊಮ್ಮೆ ಗೊತ್ತಾದರೆ ಅವರ ಪರ ನಿಲ್ಲುತ್ತೇನೆ ಎಂದರು.

ಹನಿಟ್ರ್ಯಾಪ್ ಹೆಸರಿನಲ್ಲಿ ಮುನಿರತ್ನ ಬ್ಲ್ಯಾಕ್ ಮೇಲ್ ಮಾಡುತ್ತಾರೆ: ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಗಂಭೀರ ಆರೋಪ
ಎನ್ ಮುನಿರತ್ನ
Poornima Agali Nagaraj
| Edited By: |

Updated on: Oct 09, 2023 | 3:21 PM

Share

ಬೆಂಗಳೂರು, ಅ.9: ಹನಿಟ್ರ್ಯಾಪ್ (Honeytrap) ಹೆಸರಿನಲ್ಲಿ ಮಾಜಿ ಸಚಿವ ಎನ್. ಮುನಿರತ್ನ (N.Munirathna) ಅವರು ಬ್ಲ್ಯಾಕ್ ಮೇಲ್ ಮಾಡುತ್ತಾರೆ ಎಂದು ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮುನಿರತ್ನ ಅವರು ಅಧಿಕಾರಿಗಳ ಮೇಲೆ ಹನಿಟ್ರ್ಯಾಪ್ ಮಾಡಿದ್ದರು. ಮುಖಗವಸು ಹಾಕಿಕೊಂಡು ಮುನಿರತ್ನ ವಿರುದ್ಧ ಆರೋಪ ಮಾಡಿದ ಸಂತ್ರಸ್ಥೆ ಯಾರೆಂದು ಗೊತ್ತಿಲ್ಲ. ಒಂದೊಮ್ಮೆ ಗೊತ್ತಾದರೆ ಅವರ ಪರ ನಿಲ್ಲುತ್ತೇನೆ ಎಂದಿದ್ದಾರೆ.

ಮಾಜಿ ಸಚಿವ ಮುನಿರತ್ನ ವಿರುದ್ಧ ಓರ್ವ ಮಹಿಳೆ ಮಾತಾಡಿರುವ ವೀಡಿಯೋ ವಿಷಯ ಗಮನಕ್ಕೆ ಬಂದಿದೆ. ಖಾಸಗಿ ಚಾನೆಲ್ ಒಬ್ಬರು ಇದರ ಬಗ್ಗೆ ಕೇಳಿದರು. ನನಗೇನು‌ ಗೊತ್ತಿಲ್ಲ ಎಂದಿದ್ದೇನೆ. ಮುನಿರತ್ನ ಅವರು ಹನಿಟ್ರ್ಯಾಪ್ ಹೆಸರಿನಲ್ಲಿ ಹೆದರಿಸಿ, ಬೆದರಿಸುತ್ತಾರೆ. ಈ ರೀತಿ ಸಾಕಷ್ಟು ಸಲ ಮಾಡಿದ್ದಾರೆ. ಮುನಿರತ್ನ ಅವರಿಂದ ಅನ್ಯಾಯವಾದ ಸಂತ್ರಸ್ಥರ ಪರ ನಾನು ನಿಲ್ಲುತ್ತೇನೆ ಎಂದರು.

ಈ ಹಿಂದೆ ಮುನಿರತ್ನ ಅವರು ಎಫ್​​ಎಸ್​ಎಲ್​ ಅಧಿಕಾರಿ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದರು. ಸದ್ಯ ಮುಖಗವಸು ಹಾಕಿಕೊಂಡು ಮುನಿರತ್ನ ವಿರುದ್ಧ ಆರೋಪ ಮಾಡಿದ ಸಂತ್ರಸ್ಥೆ ಯಾರೆಂದು ಗೊತ್ತಿಲ್ಲ. ಅವರ ಸ್ವರ ಕೇಳಿದ ರೀತಿ ಅನಿಸುತ್ತಿದೆ. ಅವರು ಮುಖಗವಸು ಇಲ್ಲದೆ ಮುಂದೆ ಬಂದರೆ ಯಾರಂತ ಗೊತ್ತಾಗಲಿದೆ. ಅವರು ನನ್ನ ಬಳಿ ಬಂದು ಸಹಾಯ ಕೇಳಿದರೆ ಅವರ ಬೆಂಬಲಕ್ಕೆ ನಿಲ್ಲುತ್ತೇವೆ ಎಂದರು.

ಇದನ್ನೂ ಓದಿ: ಮನೆಗೆ ಬರುವ ಅತಿಥಿಗಳನ್ನು ಬಿಕಿನಿಯಲ್ಲಿ ಸ್ವಾಗತಕೋರುವ ಹನಿಟ್ರ್ಯಾಪ್ ಸುಂದರಿ ಲಾಕ್​, ಮಾಡೆಲ್​ ರಂಗಿನಾಟ ಅಬ್ಬಬ್ಬಾ.!

ಯಾರೇ ಸಂತ್ರಸ್ಥರು ಬಂದು ನನ್ನ ಬೆಂಬಲ ಕೇಳಿದರು ನೆರವಿಗೆ ದಾವಿಸುತ್ತೇನೆ. ಮುನಿರತ್ನ ಅವರು ನಾನು ಅಕ್ರಮ ಎಸಗಿಲ್ಲ ಅಂತಾರೆ. ಡಿಕೆ ಶಿವಕುಮಾರ್, ಡಿಕೆ ಸುರೇಶ್ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಆರ್ ಆರ್ ನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ ಅಂತಾರೆ. ಆದರೆ 9 ವಾರ್ಡ್​ಗೆ ಅನುದಾನ ತಡೆ ಹಿಡಿದಿರುವುದು ಸ್ವತಃ ಮುನಿರತ್ನ ಅವರೇ. ಈ ಕುರಿತು ತನಿಖೆ ನಡೆಯುತ್ತಿದೆ ಎಂದರು.

ಕುಮಾರಸ್ವಾಮಿ ಕಾರಿನಲ್ಲಿ ಕಾಣಿಸಿದ್ದಕ್ಕೆ ಈ ದ್ವೇಷ ಅಂತ ಮುನಿರತ್ನ ಅವರು ಹೇಳಿದ್ದರು. ಮಾಜಿ ಸಚಿವರಾಗಿರುವ ಮುನಿರತ್ನ ಸಣ್ಣ ಮರಿ. ಬಿಜೆಪಿ ನಾಯಕರಾಗಿ ನೀವು ಏನು ಮಾಡುತ್ತಿದ್ದೀರಿ? ಕುಮಾರಣ್ಣ ವೆಲ್ ಕಮ್‌ ಮಾಡಲು ನೀನು ಯಾಕೆ ಹೋದೆ? ಮುನಿರತ್ನ ಎಲ್ಲಿ ಕಾಲಿಟ್ಟಿದ್ದಾರೋ ಅಲ್ಲಿ ಸರ್ವ ನಾಶವಾಗಿದೆ. ಬಿಜೆಪಿ ಸೇರಿದರು, ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿತು. ಅಣ್ಣಾಮಲೈ ರಾಜ್ಯ ಉಸ್ತುವಾರಿ ಕೊಟ್ಟಿದ್ದರು. ಪಕ್ಷ ಸೋತು ಸುಣ್ಣ ಆಯಿತು. ನಿಖಿಲ್ ಕುಮಾರಸ್ವಾಮಿ ರಾಜಕೀಯವಾಗಿ ಬೆಳೆಯಬೇಕು. ಮುನಿರತ್ನ ಐರನ್ ಲೆಗ್, ಅವರ ಜೊತೆ ಇರಬೇಡಿ ಎಂದು ಮನವಿ ಮಾಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ