AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಮತ ಬ್ಯಾಂಕ್ ಭದ್ರಗೊಳಿಸಲು ಪಠ್ಯಕ್ಕೆ ಕೈಹಾಕಿದ್ದಾರೆ: ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಆರೋಪ

ರೈತರು, ಮಕ್ಕಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಯೋಚನೆಯೇ ಇಲ್ಲ. ಸಿದ್ದರಾಮಯ್ಯಗೆ ಕಾಣುತ್ತಿರುವುದು ಟಿಪ್ಪು ಸುಲ್ತಾನ್​ ಅಷ್ಟೇ. ಸಿದ್ದರಾಮಯ್ಯ ಹಿಂದೂ ವಿರೋಧಿ, ಇದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಆರೋಪ ಮಾಡಿದ್ದಾರೆ.

ಮುಸ್ಲಿಮರ ಮತ ಬ್ಯಾಂಕ್ ಭದ್ರಗೊಳಿಸಲು ಪಠ್ಯಕ್ಕೆ ಕೈಹಾಕಿದ್ದಾರೆ: ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಆರೋಪ
ಮಾಜಿ ಸಚಿವ ಬಿ.ಸಿ.ನಾಗೇಶ್​
ಗಂಗಾಧರ​ ಬ. ಸಾಬೋಜಿ
|

Updated on: Jun 16, 2023 | 3:17 PM

Share

ತುಮಕೂರು: ಸುಪ್ರೀಂಕೋರ್ಟ್​​ನಲ್ಲಿ ಹಿಜಾಬ್ ಪ್ರಕರಣ ಇದ್ದರೂ ಮತ್ತು ಮುಸ್ಲಿಮರ ಮತ ಬ್ಯಾಂಕ್ ಭದ್ರಗೊಳಿಸಲು ಪಠ್ಯಕ್ಕೆ ಕೈಹಾಕಿದ್ದಾರೆ ಎಂದು ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಆರೋಪ ಮಾಡಿದ್ದಾರೆ. ನಗರದಲ್ಲಿ ಟಿವಿ9 ಜೊತೆ ಸಾವರ್ಕರ್, ಹೆಡ್ಗೆವಾರ್ ಹಾಗೂ ಸೂಲಿಬೆಲೆ ಪಠ್ಯ ಕೈ ಬಿಟ್ಟ ವಿಚಾರವಾಗಿ ಮಾತನಾಡಿದ ಅವರು, ರೈತರು, ಮಕ್ಕಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಯೋಚನೆಯೇ ಇಲ್ಲ. ಸಿದ್ದರಾಮಯ್ಯಗೆ ಕಾಣುತ್ತಿರುವುದು ಟಿಪ್ಪು ಸುಲ್ತಾನ್​ ಅಷ್ಟೇ. ಸಿದ್ದರಾಮಯ್ಯ ಹಿಂದೂ ವಿರೋಧಿ, ಇದರಲ್ಲಿ ಅನುಮಾನವೇ ಇಲ್ಲ. ರಾಜ್ಯ ಸರ್ಕಾರ ಮಕ್ಕಳಿಗೆ ಸುಳ್ಳು ಇತಿಹಾಸ ಹೇಳಲು ಹೊರಟಿದೆ ಎಂದು ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ ಪಠ್ಯದಲ್ಲಿ ಏನು ಬದಲಾವಣೆ ಮಾಡಬೇಕು ಅಂತಾ ಪರಿಶೀಲನೆ ಮಾಡುತ್ತೇವೆ ಅಂತಾ ಹೇಳದೇ ಹೀಗೆ ಮಾಡುತ್ತಿದ್ದಾರೆ. ಅವರು ಬುದ್ದಿಜೀವಿ ಹಾಗೂ ಅನುಭವಿ ರಾಜಕಾರಣಿ ಹೀಗೆ ಮಾಡುತ್ತಾರೆ ಅಂತಾ ಗೊತ್ತಿರಲಿಲ್ಲ. ಅವರಿಗೆ ಇದು ಬಿಜೆಪಿ ಸರ್ಕಾರ ತಂದಿದ್ದು,ಹಾಗಾಗಿ ಇದನ್ನು ತೆಗೆಯಬೇಕು ಎಂಬುವುದು ಅಷ್ಟೇ ಅವರ ಮುಂದಿದೆ. ಎಪಿಎಮ್​​ಸಿ ಕಾಯ್ದೆ ಕೂಡ ರೈತರ ಬಳಿ ಚರ್ಚಿಸಿ ಮುಂದುವರೆಯಬೇಕಿತ್ತು ಆದರೆ ಸಿಎಂ ಹಾಗೆ ಮಾಡಿಲ್ಲ ಎಂದರು.

ಇದನ್ನೂ ಓದಿ: ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಅವರಿಂದ ಅಧಿಕಾರ ಪಡೆದ ಅತಿರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ದ್ವೇಷದ ರಾಜಕಾರಣ ಎಂದ ಬಿಸಿ ನಾಗೇಶ್

ಸಿದ್ದರಾಮಯ್ಯನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅಹಂಕಾರದ ರಾಜಕೀಯ ಮಾಡುತ್ತಿದ್ದಾರೆ. ಇವರು ಜನಪ್ರತಿನಿಧಿಗಳು ಅಂತಾ ಅನಿಸಿಲ್ಲ. ಇವರು ಕರ್ನಾಟಕದ ಓನರ್ಸ್ ರೀತಿಯಲ್ಲಿ ಆಡುತ್ತಿದ್ದಾರೆ. ಕಂಪನಿಯಲ್ಲಿ ಓನರ್ಸ್ ಹೇಗೆ ವರ್ತಿಸುತ್ತಾರೋ ಹಾಗೇ ಕೆಲವು ಮಂತ್ರಿಗಳು ವರ್ತಿಸುತ್ತಿದ್ದಾರೆ. ಏಕವಚನದಲ್ಲಿ ಮಾತಾಡೋದು, ಎಲ್ಲಾ ಅಭಿವೃದ್ಧಿ ಕೆಲಸ ನಿಲ್ಲಿಸಿದ್ದಾರೆ.

ಅಭಿವೃದ್ಧಿ ಬಿಟ್ಟು ಪಾರ್ಲಿಮೆಂಟ್ ಚುನಾವಣೆಗೆ ಮುಸಲ್ಮಾನರ ಮತಗಳಿಗಾಗಿ ಈ ಕೆಲಸಕ್ಕೆ ಮುಂದಾಗಿದ್ದಾರೆ. ಇದುವರೆಗೂ ಕೇಸರಿಕರಣ ಆಗಿದೆ ಅಂದರು ಎಲ್ಲಿ ಆಗಿದೆ. ಮುಸಲ್ಮಾನರಿಗೆ ಖುಷಿ ಸಿಗಲು ಹೆಡ್ಗೆವಾರ್, ಸೂಲಿಬೆಲೆ ಹಾಗೂ ಸಾವರ್ಕಯ ಪಠ್ಯ ಬದಲಿಸಲು ಮುಂದಾಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್​​ ಖಂಡಿಸುತ್ತೆ, ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಹಸುಗಳನ್ನ ಕಡಿಯುತ್ತೇವೆ ಅಂತಾರೆ ಇದೆಲ್ಲಾ ಹಿಂದು ವಿರೋದಿ ಹೇಳಿಕೆಗಳು. ಜನಪರ ಕಾರ್ಯಕ್ರಮಗಳನ್ನ ಘೊಷಣೆ ಮಾಡಿದ್ದಾರೆ ಅವೆಲ್ಲಾ ಮಾಡುತ್ತಿದ್ದಾರಾ? ಮಕ್ಕಳಿಗೆ ಪುಸ್ತಕ, ಯೂನಿಫಾರ್ಮ್​ಗಳನ್ನ ಕಳಿಸುತ್ತಿದ್ದಾರೆ. ವಿದ್ಯುತ್ ಬಗ್ಗೆ ಗಮನ ಹರಿಸಿಲ್ಲ‌. ಇದೆಲ್ಲವೂ ಕರೆಸಿ ಯಾರ ಬಳಿಯೂ ಚರ್ಚಿಸಿಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?