AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮಾಜಿ ಐಪಿಎಸ್ ಅಧಿಕಾರಿ ಪ್ರತಾಪ್ ದಿಘಾವ್ಕರ್; ಮಹಾರಾಷ್ಟ್ರದಿಂದ ಲೋಕಸಭೆ ಟಿಕೆಟ್?

ಮಾಜಿ ಐಪಿಎಸ್ ಅಧಿಕಾರಿ ಮತ್ತು ಮಾಜಿ ಎಂಪಿಎಸ್‌ಸಿ ಸದಸ್ಯ ಪ್ರತಾಪ್ ದಿಘಾವ್ಕರ್ ಕೆಲವು ದಿನಗಳ ಹಿಂದೆ ಬಿಜೆಪಿ ಸೇರಿದ್ದರು. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವನಕುಳೆ ಅವರ ಸಮ್ಮುಖದಲ್ಲಿ ಅವರು  ಬಿಜೆಪಿ ಸದಸ್ಯತ್ವ ಸ್ವೀಕರಿಸಿದ್ದಾರೆ. ಇದೀಗ ದಿಘಾವ್ಕರ್​​ ಅವರು ಧುಲೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗಿದೆ.

ಬಿಜೆಪಿಗೆ ಮಾಜಿ ಐಪಿಎಸ್ ಅಧಿಕಾರಿ ಪ್ರತಾಪ್ ದಿಘಾವ್ಕರ್; ಮಹಾರಾಷ್ಟ್ರದಿಂದ ಲೋಕಸಭೆ ಟಿಕೆಟ್?
ಪ್ರತಾಪ್ ದಿಘಾವ್ಕರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 14, 2024 | 2:21 PM

Share

ಮಾಲೆಗಾಂವ್ ಫೆಬ್ರುವರಿ 14: ಬೇರೆ ಪಕ್ಷದಿಂದ ನಾಯಕರು ಬಿಜೆಪಿ (BJP) ಸೇರುತ್ತಲೇ ಇದ್ದಾರೆ ಇತ್ತೀಚೆಗಷ್ಟೇ ಕಾಂಗ್ರೆಸ್‌ (Congress) ಮುಖಂಡ ಅಶೋಕ್‌ ಚವಾಣ್‌ (Ashok Chavan) ಬಿಜೆಪಿ ಸೇರಿದ್ದರು. ಆ ಬಳಿಕ ರಾಜ್ಯಸಭಾ ಟಿಕೆಟ್ ಪಡೆಯುವ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜಕೀಯ ನಾಯಕರು ಮಾತ್ರವಲ್ಲದೆ ಐಪಿಎಸ್ ಅಧಿಕಾರಿಗಳು ಕೂಡಾ  ಬಿಜೆಪಿ ಸೇರಲು ಆರಂಭಿಸಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಪ್ರತಾಪ್ ದಿಘಾವ್ಕರ್ ಬಿಜೆಪಿಗೆ ಸೇರ್ಪಡೆಯಾಗಿದ್ದು ಇವರು ಧುಲೆಯಿಂದ ಲೋಕಸಭೆ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಈ ಕ್ಷೇತ್ರದಿಂದ ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಡಾ.ಸುಭಾಷ್ ಭಾಮ್ರೆ ಆಯ್ಕೆಯಾಗಿದ್ದಾರೆ. ಧುಲೆ ಕ್ಷೇತ್ರದಿಂದ ಡಾ. ಭಾಮ್ರೆ ಸೇರಿದಂತೆ ಅರ್ಧ ಡಜನ್ ಅಭ್ಯರ್ಥಿಗಳು ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧರಿದ್ದಾರೆ.

ಬಿಜೆಪಿಯಿಂದ ಉಮೇದುವಾರಿಕೆ ಕುರಿತು ಚರ್ಚೆ

ಮಾಜಿ ಐಪಿಎಸ್ ಅಧಿಕಾರಿ ಮತ್ತು ಮಾಜಿ ಎಂಪಿಎಸ್‌ಸಿ ಸದಸ್ಯ ಪ್ರತಾಪ್ ದಿಘಾವ್ಕರ್ ಕೆಲವು ದಿನಗಳ ಹಿಂದೆ ಬಿಜೆಪಿ ಸೇರಿದ್ದರು. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವನಕುಳೆ ಅವರ ಸಮ್ಮುಖದಲ್ಲಿ ಅವರು  ಬಿಜೆಪಿ ಸದಸ್ಯತ್ವ ಸ್ವೀಕರಿಸಿದರು ಆ ಬಳಿಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ಆರಂಭಿಸಿದೆ ಎಂಬ ಚರ್ಚೆ ನಡೆಯುತ್ತಿದೆ.

ಧುಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಲು ಪ್ರತಾಪ್ ದಿಘಾವ್ಕರ್ ಕ್ಷೇತ್ರ ಪ್ರವಾಸ ಆರಂಭಿಸಿದ್ದಾರೆ. ಅವರು ಜನರತ್ತ ಗಮನ ಹರಿಸುವುದನ್ನು ಮುಂದುವರೆಸಿದ್ದಾರೆ. ಆಕಾಂಕ್ಷಿಗಳು ಮತ್ತು ಅವರ ಬೆಂಬಲಿಗರು ವಿವಿಧೆಡೆ ಭಿತ್ತಿಪತ್ರಗಳನ್ನು ಇಟ್ಟು ವಾತಾವರಣ ನಿರ್ಮಿಸುತ್ತಿದ್ದಾರೆ. ಬಿಜೆಪಿಯ ರಣತಂತ್ರಗಳು ಇಲ್ಲಿ ಜಾರಿಯಾದರೆ ಹಾಲಿ ಸಂಸದ ಡಾ. ಸುಭಾಷ್ ಭಾಮ್ರೆ ಅವರ ಕಾಯುವಿಕೆ ಕಠಿಣವಾಗಲಿದೆ. ಮೋದಿ ಸರ್ಕಾರದಲ್ಲಿ ರಕ್ಷಣಾ ಖಾತೆ ರಾಜ್ಯ ಸಚಿವರೂ ಆಗಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಧುಲೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಲು ಈಗಾಗಲೇ ಅರ್ಧ ಡಜನ್ ಆಕಾಂಕ್ಷಿಗಳು ಸ್ಪರ್ಧಿಸುತ್ತಿದ್ದು, ಬಿಜೆಪಿ ನಿಖರವಾಗಿ ಏನು ಮಾಡುತ್ತದೆ ಎಂಬುದನ್ನು ನೋಡುವುದು ಮುಖ್ಯವಾಗಿದೆ.

ಇದನ್ನೂ ಓದಿ: Sonia Gandhi: ರಾಜ್ಯಸಭೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ  

ಬಿಜೆಪಿ ರಾಜ್ಯದಲ್ಲಿ ಮಿಷನ್ 45 ಅನ್ನು ಪ್ರಾರಂಭಿಸಿದೆ. 48 ಸ್ಥಾನಗಳ ಪೈಕಿ 45 ಸ್ಥಾನಗಳನ್ನು ಮಹಾಯುತಿಯ ಮೂಲಕ ಆಯ್ಕೆ ಮಾಡಲು ಕಾರ್ಯತಂತ್ರ ಸಿದ್ಧಪಡಿಸಲಾಗಿದೆ. ಇದಕ್ಕಾಗಿ ಆ ಕ್ಷೇತ್ರಗಳ ಪ್ರಬಲ ವ್ಯಕ್ತಿಗೆ ಬಿಜೆಪಿಯ ಬಾಗಿಲು ತೆರೆಯಲಾಗಿದೆ. ಇದರಿಂದ ದಿಘಾವ್ಕರ್‌ಗೆ ಉಮೇದುವಾರಿಕೆ ಸಿಗುತ್ತಾ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ