AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕಿದರೆ ರಾಮನಿಗೆ ನೀಡಿದಂತೆ: ಲೋಕಸಭಾ ಟಿಕೆಟ್ ಸಿಗುವ ವಿಶ್ವಾಸದಲ್ಲಿ ಮಾಜಿ ಸ್ಪೀಕರ್​ ಕಾಗೇರಿ ಹೇಳಿಕೆ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್​ಗಾಗಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಮತ್ತು ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಡುವೆ ಸ್ಪರ್ಧೆ ಏರ್ಪಡುವ ಲಕ್ಷಣ ಗೋಚರಿಸುತ್ತಿದೆ. ಒಂದೆಡೆ, ಅನಂತಕುಮಾರ್ ಹೆಗಡೆ ವಿವಾದಿತ ಹೇಳಿಕೆಗಳ ಮೂಲಕ ಪ್ರರಚಾರ ತಂತ್ರ ಹೂಡಿದ್ದರೆ, ಇನ್ನೊಂದೆಡೆ ಕಾಗೇರಿ, ಬಿಜೆಪಿಗೆ ಮತ ಹಾಕಿದರೆ ರಾಮನಿಗೆ, ಮೋದಿಗೆ ಮತ ಹಾಕಿದಂತೆ ಎಂದಿದ್ದಾರೆ.

ಬಿಜೆಪಿಗೆ ಮತ ಹಾಕಿದರೆ ರಾಮನಿಗೆ ನೀಡಿದಂತೆ: ಲೋಕಸಭಾ ಟಿಕೆಟ್ ಸಿಗುವ ವಿಶ್ವಾಸದಲ್ಲಿ ಮಾಜಿ ಸ್ಪೀಕರ್​ ಕಾಗೇರಿ ಹೇಳಿಕೆ
ವಿಶ್ವೇಶ್ವರ ಹೆಗಡೆ ಕಾಗೇರಿ
TV9 Web
| Edited By: |

Updated on: Feb 07, 2024 | 10:13 AM

Share

ಕಾರವಾರ, ಫೆಬ್ರವರಿ: ಬಿಜೆಪಿ ನಾಯಕ, ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಇದೀಗ ಲೋಕಸಭಾ ಚುನಾವಣೆಗೆ (Lok Sabha Elections) ಉತ್ತರ ಕನ್ನಡ ಕ್ಷೇತ್ರದಿಂದ ಬಿಜೆಪಿ (BJP) ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಟಿಕೆಟ್ ಸಿಗುವ ವಿಶ್ವಾಸದಲ್ಲಿ ಚುನಾವಣೆ ಆರಂಭಕ್ಕೂ ಮುನ್ನ ರಾಮನ ಹೆಸರಿನಲ್ಲಿ ಪ್ರಚಾರ ಆರಂಭಿಸಿರುವ ಕಾಗೇರಿ, ಬಿಜೆಪಿಗೆ ನೀವು ಮತ ಹಾಕಿದರೆ ಅದು ರಾಮನಿಗೆ ಹಾಗೂ ಪ್ರಧಾನಿ ಮೋದಿಗೆ ಮತ ಹಾಕಿದಂತೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಕಾರ್ಯರ್ತರಿಗೆ ಕರೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಚೇರಿಯಲ್ಲಿ ಮಾತನಾಡಿದ ಅವರು, ಕೆನರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಮಲದ ಹೂ. ವ್ಯಕ್ತಿ ಯಾರು ಎಂಬುದನ್ನು ವರಿಷ್ಠರು ಸೂಕ್ತ ಸಮಯದಲ್ಲಿ ಘೋಷಣೆ ಮಾಡುತ್ತಾರೆ. ಕಳೆದ ಬಾರಿಗಿಂತಲೂ ದಾಖಲೆ ಮತಗಳಿಂದ ಈ ಬಾರಿ ನಮ್ಮ ಬಿಜೆಪಿ ಗೆಲ್ಲಲಿದೆ. ಕಳೆದ ಬಾರಿ 4 ಲಕ್ಷ 80 ಸಾವಿರ ಮತಗಳ ಅಂತರದಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ ಆ ದಾಖಲೆಯನ್ನು ಮುರಿದು ಇನ್ನೊಂದು ದಾಖಲೆಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ನಮ್ಮ ಕಾರ್ಯಕರ್ತರು ಹಾಗೂ ಮತದಾರರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿಗೆ ಮತ ಹಾಕಿದ್ರೆ ಅದು ರಾಮನಿಗೆ ಮತ ನೀಡಿದಂತೆ. ಬಿಜೆಪಿಗೆ ಮತ ಚಲಾಯಿಸಿದರೆ ಅದು ನರೇಂದ್ರ ಮೋದಿಗೆ ಮತ ಹಾಕಿದಂತೆ. ಜತೆಗೆ, ದೇಶದ ಐಕ್ಯತೆಗೆ ಮತ ನೀಡಿದಂತೆ. ಈ ಸಂದೇಶವನ್ನು ಜನರಿಗೆ ತಲುಪಿಸೋಣ, ಅವರಲ್ಲಿ ಜಾಗೃತಿ ಮೂಡಿಸೋಣ. ಎಲ್ಲರೂ ಮತದಾನ ಮಾಡುವಂತೆ ನಾವು ಮಾಡೋಣ ಎಂದು ಕಾರ್ಯರ್ತರು ಹಾಗೂ ಮುಖಂಡರಿಗೆ ಮನವಿ ಮಾಡಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಅನಂತಕುಮಾರ್ ಹೆಗಡೆ ಹಾಲಿ ಸಂಸದರಾಗಿದ್ದಾರೆ. ಕೆಲವು ವರ್ಷಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದಿದ್ದ ಹೆಗಡೆ ಇತ್ತೀಚೆಗೆ ಸಕ್ರಿಯರಾಗಿ ರಾಜಕೀಯ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಪಕ್ಷದ ಕಾರ್ಯಕರ್ತರ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಮಂಗನ ಕಾಯಿಲೆ; 14 ದಿನಗಳಲ್ಲಿ 37 ಜನರಿಗೆ ಸೋಂಕು, 3 ಮಂಗಗಳ ಸಾವು

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಹೆಗಡೆ ವಾಗ್ದಾಳಿ ನಡೆಸಿದ್ದು ವಿವಾದಕ್ಕೆ ಗ್ರಾಸವಾಗಿತ್ತು. ಆ ನಂತರವೂ ಕೆಲವು ವಿವಾದಿತ ಹೇಳಿಕೆಗಳನ್ನು ನೀಡುವ ಮೂಲಕ ಅವರು ಸುದ್ದಿಯಲ್ಲಿದ್ದಾರೆ. ಈ ಮಧ್ಯೆ, ವಿಧಾನಸಭೆ ಚುನಾವಣೆ ಸೋಲಿನ ನಂತರ ತುಸು ಮೌನಕ್ಕೆ ಶರಣಾಗಿದ್ದ ಕಾಗೇರಿಯೂ ಇದೀಗ ರಾಜಕೀಯ ಚಟುವಟಿಕೆ ಬಿರುಸುಗೊಳಿಸಿರುವುದು ಉತ್ತರ ಕನ್ನಡ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ