AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಾ ಕಾರಣ ಅಧಿಕಾರಿಗಳ ವರ್ಗಾವಣೆ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಕೆ ಸುಧಾಕರ್ ಬೆಂಬಲಿಗರ ಆರೋಪ

ವಿನಾ ಕಾರಣ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದಾರೆ ಎಂಬ ಆರೋಪ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕೇಳಿಬಂದಿದೆ. ಈ ಬಗ್ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಇಂದು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹರಹಾಕಿದ್ದಾರೆ.

ವಿನಾ ಕಾರಣ ಅಧಿಕಾರಿಗಳ ವರ್ಗಾವಣೆ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಕೆ ಸುಧಾಕರ್ ಬೆಂಬಲಿಗರ ಆರೋಪ
ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಡಾ ಕೆ ಸುಧಾಕರ್ ಬೆಂಬಲಿರ ಆಕ್ರೋಶ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jul 25, 2023 | 9:47 PM

Share

ಚಿಕ್ಕಬಳ್ಳಾಫುರ, ಜುಲೈ 25: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ವಿನಾ ಕಾರಣ ಅಧಿಕಾರಿಗಳ ವರ್ಗಾವಣೆ ಮಾಡಿ ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ (Dr.K.Sudhakar) ಬೆಂಬಲಿಗರು ಗಂಭೀರ ಆರೋಪ ಮಾಡಿದ್ದಾರೆ. ನಗರದ ಪ್ರತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಬಲಿಗರು, ಪ್ರದೀಪ್ ಈಶ್ವರ್ ಹಿಟ್ಲರ್ ಆಡಳಿತ ನಡೆಸುತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿ ರಾಜ್ಯದ ಜನರ ಗಮನ ಸೆಳೆದಿದ್ದರು. ಇದೀಗ ಇವರ ವಿರುದ್ಧ ಗಂಭೀರ ಆರೋಪ ಮಾಡಿರುವ ಸುಧಾಕರ್ ಬೆಂಬಲಿಗರು, ಬೆಂಗಳೂರಿನಲ್ಲಿರುವ ತಮ್ಮ ಪರಿಶ್ರಮ ನೀಟ್ ಅಕಾಡೆಮಿಯ ಕಟ್ಟಡದಲ್ಲಿ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದ್ದಾರೆ ಹಾಗೂ ವಿನಾ ಕಾರಣ ನಿಷ್ಠಾವಂತ ಅಧಿಕಾರಿಗಳ ವರ್ಗಾವಣೆ ಮಾಡುವುದರ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Assembly Session; ಕನ್ನಡ ಶಾಲೆಗಳ ಕ್ಲಾಸ್ ರೂಮುಗಳನ್ನು ಸಬಲೀಕರಿಸಿದರೆ ಬಹಳಷ್ಟು ಬದಲಾವಣೆಯಾಗಲಿದೆ: ಪ್ರದೀಪ್ ಈಶ್ವರ್

ಬಾಷಣದ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಸತ್ಯ ಹರಿಶ್ಚಂದ್ರ ಕಥೆಗಳನ್ನು ಹೇಳುತ್ತಾರೆ. ಆದರೆ ಪ್ರಾಯೋಗಿಕವಾಗಿ ಗಿಮೀಕ್ ರಾಜಕಾರಣ ಮಾಡುತ್ತಿದ್ದಾರೆ. ಶಾಸಕ ದ್ವೀಮುಖ ನೀತಿಯನ್ನು ಜನರೇ ಬಹಿರಂಗ ಮಾಡುತ್ತಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ನಗರಸಭೆಯ ಮಾಜಿ ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಹಲವು ಮುಖಂಡರು ಇದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 pm, Tue, 25 July 23

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ