AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೇ ಸಿಎಂ ಎಂದು ಹೇಳುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು, ಸರ್ಕಾರದ ಅವನತಿ ಶುರುವಾಗಿದೆ

ಕಾಂಗ್ರೆಸ್​​ ನಾಯಕರು ಸೂಚಿಸಿದ್ದರು. ಅವರು ಬಂದು ಹಫ್ತಾ ವಸೂಲಿ ಮಾಡಿಕೊಂಡು ಹೋದರು. ಮರುದಿನವೇ ಅಸಮಾಧಾನ ಸ್ಫೋಟವಾಗಿದೆ. ಜೆಸಿಬಿಯಿಂದ ಲೂಟಿ ಮಾಡಿದ ರೀತಿ ಹಣದ ಲೂಟಿ ನಡೆಯುತ್ತಿದೆ. ‘ಕೈ’ ಸರ್ಕಾರ ಬಂದ ಮೇಲೆ ರಸ್ತೆಗೆ ಒಂದು ಬುಟ್ಟಿ ಮಣ್ಣೂ ಹಾಕಿಲ್ಲ. ಇದು ಆರ್ಥಿಕವಾಗಿ ಪಾಪರ್ ಆಗಿರುವ ಸರ್ಕಾರ. ಸಿಎಂ ಗೌರವಯುತವಾಗಿ ರಾಜೀನಾಮೆ ಕೊಡುವುದು ಒಳ್ಳೆಯದು. ಇಲ್ಲದಿದ್ದರೆ ಮಂತ್ರಿಗಳು, ಶಾಸಕರೇ ಸರ್ಕಾರ ಬೀಳಿಸುತ್ತಾರೆ. ಸಿಎಂ, ಡಿಸಿಎಂ ಸಂಪುಟ ವಿಸರ್ಜಿಸಿ ಚುನಾವಣೆಗೆ ಹೋಗೋದು ಸೂಕ್ತ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಹೇಳಿದರು.

ನಾನೇ ಸಿಎಂ ಎಂದು ಹೇಳುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು, ಸರ್ಕಾರದ ಅವನತಿ ಶುರುವಾಗಿದೆ
ಮಾಜಿ ಸಚಿವ ಕೆಎಸ್​ ಈಶ್ವರಪ್ಪ
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ|

Updated on: Nov 03, 2023 | 12:34 PM

Share

ಬೆಂಗಳೂರು ನ.03: ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ (Congress Government) ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲ ಎಂಬವುದು ಡಿಕೆ ಶಿವಕುಮಾರ್​ ಅವರ ಮಾತಿನ ಅರ್ಥ. ನಾನೇ ಸಿಎಂ ಎನ್ನುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು. ಕರ್ನಾಟಕದ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೆ ಅಂತಾ ಹೇಳಿದ್ದೆ. ಅಜಿತ್ ಪವಾರ್​​ಗಳು ಬಹಳ ಜನ ಹುಟ್ಟಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಹಿರಂಗ ಹೇಳಿಕೆ ಕೊಡದಂತೆ ಕಾಂಗ್ರೆಸ್​​ ನಾಯಕರು ಸೂಚಿಸಿದ್ದರು. ಅವರು ಬಂದು ಹಫ್ತಾ ವಸೂಲಿ ಮಾಡಿಕೊಂಡು ಹೋದರು. ಮರುದಿನವೇ ಅಸಮಾಧಾನ ಸ್ಫೋಟವಾಗಿದೆ. ಜೆಸಿಬಿಯಿಂದ ಲೂಟಿ ಮಾಡಿದ ರೀತಿ ಹಣದ ಲೂಟಿ ನಡೆಯುತ್ತಿದೆ. ‘ಕೈ’ ಸರ್ಕಾರ ಬಂದ ಮೇಲೆ ರಸ್ತೆಗೆ ಒಂದು ಬುಟ್ಟಿ ಮಣ್ಣೂ ಹಾಕಿಲ್ಲ. ಇದು ಆರ್ಥಿಕವಾಗಿ ಪಾಪರ್ ಆಗಿರುವ ಸರ್ಕಾರ. ಸಿಎಂ ಗೌರವಯುತವಾಗಿ ರಾಜೀನಾಮೆ ಕೊಡುವುದು ಒಳ್ಳೆಯದು. ಇಲ್ಲದಿದ್ದರೆ ಮಂತ್ರಿಗಳು, ಶಾಸಕರೇ ಸರ್ಕಾರ ಬೀಳಿಸುತ್ತಾರೆ. ಸಿಎಂ, ಡಿಸಿಎಂ ಸಂಪುಟ ವಿಸರ್ಜಿಸಿ ಚುನಾವಣೆಗೆ ಹೋಗೋದು ಸೂಕ್ತ ಎಂದರು.

ಪ್ರಧಾನಿ ಮೋದಿ ಅವರ ಬಗ್ಗೆ ಏಕವಚನದಲ್ಲಿ ಸಿದ್ದರಾಮಯ್ಯ ಪದ ಪ್ರಯೋಗಿಸುವ ಕುರಿತು ಮಾತನಾಡಿದ ಅವರು ಅವರಿಗಿಂತ ಜಾಸ್ತಿ ಪದ ಪ್ರಯೋಗ ಮಾಡಲು ಬರುತ್ತದೆ. ನಾನು ಆರ್​ಎಸ್​ಎಸ್​ನಲ್ಲಿ ಬೆಳೆದವನು. ಬಿಜೆಪಿ ಜವಾಬ್ದಾರಿ ಇರುವವನು. ಸಂಸ್ಕಾರ ಹೇಳಿಕೊಟ್ಟಿದ್ದಾರೆ. ಇನ್ನೊಂದು ಬಾರಿ ಮೋದಿ ಅವರ ಬಗ್ಗೆ ಸಿದ್ದರಾಮಯ್ಯ ಏಕವಚನದಲ್ಲಿ ಮಾತಾಡಿದರೆ ಆಗ ನಾನು ಏನು ಹೇಳಬೇಕೋ ಅದನ್ನೇ ಹೇಳುತ್ತೇನೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಹೊಸಪೇಟೆ: ಗೊಂದಲವಿಲ್ಲ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ

ಜಾತಿ ಗಣತಿ ಬಿಡುಗಡೆ ಮಾಡುತ್ತಾರೋ ಇಲ್ಲವೋ ಎಂಬುವುದನ್ನು ಬಹಿರಂಗವಾಗಿ ಸರ್ಕಾರ ಹೇಳಬೇಕು. ಕಾಂತರಾಜ್ ವರದಿ ಅವೈಜ್ಞಾನಿಕ ಅಂತ ನಿರ್ಮಲಾನಂದ ಸ್ವಾಮೀಜಿ ಹೇಳಿದ್ದಾರೆ. ನ್ಯಾಯಾಲಯದ ಮೊರೆ ಹೋದರೇ ಒಂದೇ ದಿನದಲ್ಲಿ ವರದಿ ಬಿದ್ದು ಹೋಗುತ್ತದೆ. ಇವರಿಗೆ ಜನರಿಗೆ ಅನುಕೂಲ ಮಾಡಬೇಕು ಅಂತ ಇಲ್ಲ. ಆ ವರದಿ ಇಟ್ಟುಕೊಂಡು ಮತ್ತೆ ವೋಟ್ ಪಡೆಯಬೇಕು ಅಷ್ಟೇ ಎಂದು ವಾಗ್ದಾಳಿ ಮಾಡಿದರು.

ಇದನ್ನು ಮೊದಲು ಮಾಡಿದ್ದು ನಮ್ಮ ಸರ್ಕಾರದಲ್ಲಿ, ಬಿಎಸ್​ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಹಣ ಬಿಡುಗಡೆ ಮಾಡಿದ್ದರು. ಇವರು ಹಿಂದುಳಿದ ವರ್ಗಗಳ ಚಾಂಪಿಯನ್ ಅಂತಾ ಅನ್ನಿಸಿಕೊಳ್ಳಲು ಕಾಂತರಾಜ್ ವರದಿ ಬಗ್ಗೆ ಹೇಳುತ್ತಿದ್ದಾರೆ. ಇಷ್ಟು ಮೋಸ ಮಾಡಿ ಹಿಂದುಳಿದ ವರ್ಗಗಳ ನಾಯಕ ಅಂತಾ ಅನ್ನಿಸಿಕೊಳ್ಳಬೇಕಾ? ಚಡ್ಡಿ ಒಂದು ವಿಷಯ ಬಿಟ್ಟು ಉಳಿದದ್ದು ಎಲ್ಲಾ ಬಿ.ಕೆ. ಹರಿ ಪ್ರಸಾದ್ ಹೇಳಿದ್ದು ಸರಿ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

ದೆಹಲಿಯಲ್ಲಿ ಗುರುವಾರ ನಡೆದ ಓಬಿಸಿ ಸಭೆ ವಿಚಾರವಾಗಿ ಮಾತನಾಡಿದ ಅವರು ದೆಹಲಿಯಲ್ಲಿ ಹಿಂದುಳಿದ ವರ್ಗಗಳ ವಿಚಾರವಾಗಿ ಸಭೆ ನಡೆಯಿತು. 40 ಜನ ಸಭೆಯಲ್ಲಿ ಭಾಗವಹಿಸಿದ್ದರು. ಹಿಂದುಳಿದ ವರ್ಗಗಳ ಬಗ್ಗೆ ಸ್ಪಷ್ಟವಾಗಿ ತಜ್ಞರ ಜೊತೆ ಎಲ್ಲಾ ಚರ್ಚೆ ಮಾಡಿ ಒಂದು ರೂಪ ತರಬೇಕು ಎಂದು ಚರ್ಚೆಯಾಯಿತು. ಇದನ್ನು ಹೊರತುಪಡಿಸಿ ರಾಜ್ಯದ ವಿಚಾರ ಯಾವುದೂ ಚರ್ಚೆ ಆಗಲಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ