AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂ ಬೆಳಿಗ್ಗೆ ಜೋಶಿ ಮನೆಗೆ ಈಶ್ವರಪ್ಪ ಭೇಟಿ, ಹಾಸ್ಯ ಚಟಾಕಿ ಹಾರಿಸಿದ ಕೇಂದ್ರ ಸಚಿವ

ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ. ಈ ವೇಳೆ ಕೆಎಸ್​ ಈಶ್ವರಪ್ಪ ಪ್ರಹ್ಲಾದ್ ಜೋಶಿ ಕಾಲಿಗೆ ನಮಸ್ಕರಿಸಲು ಮುಂದಾದರು. 

ಬೆಳ್ಳಂ ಬೆಳಿಗ್ಗೆ ಜೋಶಿ ಮನೆಗೆ ಈಶ್ವರಪ್ಪ ಭೇಟಿ, ಹಾಸ್ಯ ಚಟಾಕಿ ಹಾರಿಸಿದ ಕೇಂದ್ರ ಸಚಿವ
ಕೆಎಸ್​ ಈಶ್ವರಪ್ಪ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Dec 30, 2023 | 12:07 PM

Share

ಹುಬ್ಬಳ್ಳಿ, ಡಿಸೆಂಬರ್​ 30: ಇತ್ತೀಚಿಗೆ ನಡೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಘೋಷಣೆ ಆಗುವಕ್ಕಿಂತಲೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ ಕೆಎಸ್​ ಈಶ್ವರಪ್ಪ ಅವರು ಹಾವೇರಿ ಲೋಕಸಭಾ (Lokasabha Election) ಕ್ಷೇತ್ರದ ಪುತ್ರ ಕಾಂತೇಶ್​ ಅವರಿಗೆ ಟಿಕೆಟ್ ನೀಡಬೇಕು ಎಂದು ಬಹಿರಂಗವಾಗಿಯೇ ಹೇಳಿದ್ದರು. ಈ ಮೂಲಕ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಪಣ ತೊಟ್ಟಿದ್ದಾರೆ. ​

ಹೀಗಾಗಿ ಕೆಎಸ್​ ಈಶ್ವರಪ್ಪ ಕೇಂದ್ರ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇದೀಗ ಧಿಡೀರನೆ ಹುಬ್ಬಳ್ಳಿಯ ಮಯೂರಾ ಎಸ್ಟೇಟ್​ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಕೆ ಎಸ್​ ಈಶ್ವರಪ್ಪ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಬಿಜೆಪಿ ಲೀಡರ್​​ ಲೆಸ್, ಜೆಡಿಎಸ್​​ ಪೀಪಲ್​ ಲೆಸ್: ಸಚಿವ ಪ್ರಿಯಾಂಕ್ ಖರ್ಗೆಗೆ ಕೆಎಸ್​ ಈಶ್ವರಪ್ಪ ತಿರುಗೇಟು

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಹ್ಲಾದ್​ ಜೋಶಿ ನಾವಿಬ್ಬರೂ ಒಂದೇ ಪಕ್ಷದವರು ಏನಿಲ್ಲ ಬಿಡಿ. ಈಶ್ವರಪ್ಪ ಬಂದರೇ ಸುದ್ದಿ ಸಿಗುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಭೇಟಿ ವೇಳೆ ಕೆಎಸ್​ ಈಶ್ವರಪ್ಪ ಪ್ರಹ್ಲಾದ್ ಜೋಶಿ ಕಾಲಿಗೆ ನಮಸ್ಕರಿಸಲು ಮುಂದಾದರು. ಆಗ ಪ್ರಹ್ಲಾದ್ ಜೋಶಿ ನಯವಾಗಿ ತಿರಸ್ಕರಿದರು.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರಧಾನಿ ಮೋದಿ ಮತ್ತು ಚುನಾವಣಾ ಚಾಣಕ್ಯ ಅಮಿತ್​ ಶಾ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಹ್ಲಾದ್​ ಜೋಶಿ ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಶುಕ್ರವಾರ ದಾವಣಗೆರೆ ಪ್ರವಾಸ ಮುಗಿಸಿ ಪ್ರಹ್ಲಾದ್​ ಜೋಶಿ ಹುಬ್ಬಳ್ಳಿಗೆ ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ