AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂ ಬೆಳಿಗ್ಗೆ ಜೋಶಿ ಮನೆಗೆ ಈಶ್ವರಪ್ಪ ಭೇಟಿ, ಹಾಸ್ಯ ಚಟಾಕಿ ಹಾರಿಸಿದ ಕೇಂದ್ರ ಸಚಿವ

ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ. ಈ ವೇಳೆ ಕೆಎಸ್​ ಈಶ್ವರಪ್ಪ ಪ್ರಹ್ಲಾದ್ ಜೋಶಿ ಕಾಲಿಗೆ ನಮಸ್ಕರಿಸಲು ಮುಂದಾದರು. 

ಬೆಳ್ಳಂ ಬೆಳಿಗ್ಗೆ ಜೋಶಿ ಮನೆಗೆ ಈಶ್ವರಪ್ಪ ಭೇಟಿ, ಹಾಸ್ಯ ಚಟಾಕಿ ಹಾರಿಸಿದ ಕೇಂದ್ರ ಸಚಿವ
ಕೆಎಸ್​ ಈಶ್ವರಪ್ಪ
ಶಿವಕುಮಾರ್ ಪತ್ತಾರ್
| Edited By: |

Updated on: Dec 30, 2023 | 12:07 PM

Share

ಹುಬ್ಬಳ್ಳಿ, ಡಿಸೆಂಬರ್​ 30: ಇತ್ತೀಚಿಗೆ ನಡೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಘೋಷಣೆ ಆಗುವಕ್ಕಿಂತಲೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ ಕೆಎಸ್​ ಈಶ್ವರಪ್ಪ ಅವರು ಹಾವೇರಿ ಲೋಕಸಭಾ (Lokasabha Election) ಕ್ಷೇತ್ರದ ಪುತ್ರ ಕಾಂತೇಶ್​ ಅವರಿಗೆ ಟಿಕೆಟ್ ನೀಡಬೇಕು ಎಂದು ಬಹಿರಂಗವಾಗಿಯೇ ಹೇಳಿದ್ದರು. ಈ ಮೂಲಕ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಪಣ ತೊಟ್ಟಿದ್ದಾರೆ. ​

ಹೀಗಾಗಿ ಕೆಎಸ್​ ಈಶ್ವರಪ್ಪ ಕೇಂದ್ರ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇದೀಗ ಧಿಡೀರನೆ ಹುಬ್ಬಳ್ಳಿಯ ಮಯೂರಾ ಎಸ್ಟೇಟ್​ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಕೆ ಎಸ್​ ಈಶ್ವರಪ್ಪ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಬಿಜೆಪಿ ಲೀಡರ್​​ ಲೆಸ್, ಜೆಡಿಎಸ್​​ ಪೀಪಲ್​ ಲೆಸ್: ಸಚಿವ ಪ್ರಿಯಾಂಕ್ ಖರ್ಗೆಗೆ ಕೆಎಸ್​ ಈಶ್ವರಪ್ಪ ತಿರುಗೇಟು

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಹ್ಲಾದ್​ ಜೋಶಿ ನಾವಿಬ್ಬರೂ ಒಂದೇ ಪಕ್ಷದವರು ಏನಿಲ್ಲ ಬಿಡಿ. ಈಶ್ವರಪ್ಪ ಬಂದರೇ ಸುದ್ದಿ ಸಿಗುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಭೇಟಿ ವೇಳೆ ಕೆಎಸ್​ ಈಶ್ವರಪ್ಪ ಪ್ರಹ್ಲಾದ್ ಜೋಶಿ ಕಾಲಿಗೆ ನಮಸ್ಕರಿಸಲು ಮುಂದಾದರು. ಆಗ ಪ್ರಹ್ಲಾದ್ ಜೋಶಿ ನಯವಾಗಿ ತಿರಸ್ಕರಿದರು.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರಧಾನಿ ಮೋದಿ ಮತ್ತು ಚುನಾವಣಾ ಚಾಣಕ್ಯ ಅಮಿತ್​ ಶಾ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಹ್ಲಾದ್​ ಜೋಶಿ ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಶುಕ್ರವಾರ ದಾವಣಗೆರೆ ಪ್ರವಾಸ ಮುಗಿಸಿ ಪ್ರಹ್ಲಾದ್​ ಜೋಶಿ ಹುಬ್ಬಳ್ಳಿಗೆ ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?