AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂ ಬೆಳಿಗ್ಗೆ ಜೋಶಿ ಮನೆಗೆ ಈಶ್ವರಪ್ಪ ಭೇಟಿ, ಹಾಸ್ಯ ಚಟಾಕಿ ಹಾರಿಸಿದ ಕೇಂದ್ರ ಸಚಿವ

ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ. ಈ ವೇಳೆ ಕೆಎಸ್​ ಈಶ್ವರಪ್ಪ ಪ್ರಹ್ಲಾದ್ ಜೋಶಿ ಕಾಲಿಗೆ ನಮಸ್ಕರಿಸಲು ಮುಂದಾದರು. 

ಬೆಳ್ಳಂ ಬೆಳಿಗ್ಗೆ ಜೋಶಿ ಮನೆಗೆ ಈಶ್ವರಪ್ಪ ಭೇಟಿ, ಹಾಸ್ಯ ಚಟಾಕಿ ಹಾರಿಸಿದ ಕೇಂದ್ರ ಸಚಿವ
ಕೆಎಸ್​ ಈಶ್ವರಪ್ಪ
ಶಿವಕುಮಾರ್ ಪತ್ತಾರ್
| Edited By: |

Updated on: Dec 30, 2023 | 12:07 PM

Share

ಹುಬ್ಬಳ್ಳಿ, ಡಿಸೆಂಬರ್​ 30: ಇತ್ತೀಚಿಗೆ ನಡೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಘೋಷಣೆ ಆಗುವಕ್ಕಿಂತಲೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ ಕೆಎಸ್​ ಈಶ್ವರಪ್ಪ ಅವರು ಹಾವೇರಿ ಲೋಕಸಭಾ (Lokasabha Election) ಕ್ಷೇತ್ರದ ಪುತ್ರ ಕಾಂತೇಶ್​ ಅವರಿಗೆ ಟಿಕೆಟ್ ನೀಡಬೇಕು ಎಂದು ಬಹಿರಂಗವಾಗಿಯೇ ಹೇಳಿದ್ದರು. ಈ ಮೂಲಕ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಪಣ ತೊಟ್ಟಿದ್ದಾರೆ. ​

ಹೀಗಾಗಿ ಕೆಎಸ್​ ಈಶ್ವರಪ್ಪ ಕೇಂದ್ರ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇದೀಗ ಧಿಡೀರನೆ ಹುಬ್ಬಳ್ಳಿಯ ಮಯೂರಾ ಎಸ್ಟೇಟ್​ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಕೆ ಎಸ್​ ಈಶ್ವರಪ್ಪ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಬಿಜೆಪಿ ಲೀಡರ್​​ ಲೆಸ್, ಜೆಡಿಎಸ್​​ ಪೀಪಲ್​ ಲೆಸ್: ಸಚಿವ ಪ್ರಿಯಾಂಕ್ ಖರ್ಗೆಗೆ ಕೆಎಸ್​ ಈಶ್ವರಪ್ಪ ತಿರುಗೇಟು

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಹ್ಲಾದ್​ ಜೋಶಿ ನಾವಿಬ್ಬರೂ ಒಂದೇ ಪಕ್ಷದವರು ಏನಿಲ್ಲ ಬಿಡಿ. ಈಶ್ವರಪ್ಪ ಬಂದರೇ ಸುದ್ದಿ ಸಿಗುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಭೇಟಿ ವೇಳೆ ಕೆಎಸ್​ ಈಶ್ವರಪ್ಪ ಪ್ರಹ್ಲಾದ್ ಜೋಶಿ ಕಾಲಿಗೆ ನಮಸ್ಕರಿಸಲು ಮುಂದಾದರು. ಆಗ ಪ್ರಹ್ಲಾದ್ ಜೋಶಿ ನಯವಾಗಿ ತಿರಸ್ಕರಿದರು.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರಧಾನಿ ಮೋದಿ ಮತ್ತು ಚುನಾವಣಾ ಚಾಣಕ್ಯ ಅಮಿತ್​ ಶಾ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಹ್ಲಾದ್​ ಜೋಶಿ ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಶುಕ್ರವಾರ ದಾವಣಗೆರೆ ಪ್ರವಾಸ ಮುಗಿಸಿ ಪ್ರಹ್ಲಾದ್​ ಜೋಶಿ ಹುಬ್ಬಳ್ಳಿಗೆ ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ