ಬೆಳ್ಳಂ ಬೆಳಿಗ್ಗೆ ಜೋಶಿ ಮನೆಗೆ ಈಶ್ವರಪ್ಪ ಭೇಟಿ, ಹಾಸ್ಯ ಚಟಾಕಿ ಹಾರಿಸಿದ ಕೇಂದ್ರ ಸಚಿವ

ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ. ಈ ವೇಳೆ ಕೆಎಸ್​ ಈಶ್ವರಪ್ಪ ಪ್ರಹ್ಲಾದ್ ಜೋಶಿ ಕಾಲಿಗೆ ನಮಸ್ಕರಿಸಲು ಮುಂದಾದರು. 

ಬೆಳ್ಳಂ ಬೆಳಿಗ್ಗೆ ಜೋಶಿ ಮನೆಗೆ ಈಶ್ವರಪ್ಪ ಭೇಟಿ, ಹಾಸ್ಯ ಚಟಾಕಿ ಹಾರಿಸಿದ ಕೇಂದ್ರ ಸಚಿವ
ಕೆಎಸ್​ ಈಶ್ವರಪ್ಪ
Edited By: ವಿವೇಕ ಬಿರಾದಾರ

Updated on: Dec 30, 2023 | 12:07 PM

ಹುಬ್ಬಳ್ಳಿ, ಡಿಸೆಂಬರ್​ 30: ಇತ್ತೀಚಿಗೆ ನಡೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಘೋಷಣೆ ಆಗುವಕ್ಕಿಂತಲೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ ಕೆಎಸ್​ ಈಶ್ವರಪ್ಪ ಅವರು ಹಾವೇರಿ ಲೋಕಸಭಾ (Lokasabha Election) ಕ್ಷೇತ್ರದ ಪುತ್ರ ಕಾಂತೇಶ್​ ಅವರಿಗೆ ಟಿಕೆಟ್ ನೀಡಬೇಕು ಎಂದು ಬಹಿರಂಗವಾಗಿಯೇ ಹೇಳಿದ್ದರು. ಈ ಮೂಲಕ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಪಣ ತೊಟ್ಟಿದ್ದಾರೆ. ​

ಹೀಗಾಗಿ ಕೆಎಸ್​ ಈಶ್ವರಪ್ಪ ಕೇಂದ್ರ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇದೀಗ ಧಿಡೀರನೆ ಹುಬ್ಬಳ್ಳಿಯ ಮಯೂರಾ ಎಸ್ಟೇಟ್​ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಕೆ ಎಸ್​ ಈಶ್ವರಪ್ಪ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಬಿಜೆಪಿ ಲೀಡರ್​​ ಲೆಸ್, ಜೆಡಿಎಸ್​​ ಪೀಪಲ್​ ಲೆಸ್: ಸಚಿವ ಪ್ರಿಯಾಂಕ್ ಖರ್ಗೆಗೆ ಕೆಎಸ್​ ಈಶ್ವರಪ್ಪ ತಿರುಗೇಟು

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಹ್ಲಾದ್​ ಜೋಶಿ ನಾವಿಬ್ಬರೂ ಒಂದೇ ಪಕ್ಷದವರು ಏನಿಲ್ಲ ಬಿಡಿ. ಈಶ್ವರಪ್ಪ ಬಂದರೇ ಸುದ್ದಿ ಸಿಗುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಭೇಟಿ ವೇಳೆ ಕೆಎಸ್​ ಈಶ್ವರಪ್ಪ ಪ್ರಹ್ಲಾದ್ ಜೋಶಿ ಕಾಲಿಗೆ ನಮಸ್ಕರಿಸಲು ಮುಂದಾದರು. ಆಗ ಪ್ರಹ್ಲಾದ್ ಜೋಶಿ ನಯವಾಗಿ ತಿರಸ್ಕರಿದರು.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರಧಾನಿ ಮೋದಿ ಮತ್ತು ಚುನಾವಣಾ ಚಾಣಕ್ಯ ಅಮಿತ್​ ಶಾ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಹ್ಲಾದ್​ ಜೋಶಿ ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಶುಕ್ರವಾರ ದಾವಣಗೆರೆ ಪ್ರವಾಸ ಮುಗಿಸಿ ಪ್ರಹ್ಲಾದ್​ ಜೋಶಿ ಹುಬ್ಬಳ್ಳಿಗೆ ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us