AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕರ ಜೊತೆ ಒಳ ಒಪ್ಪಂದ: ಶಾಸಕ ಯತ್ನಾಳ್​ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒಳಒಪ್ಪಂದ ಎಲ್ಲರಿಗೂ ಗೊತ್ತಿದೆ. ಚುನಾವಣೆ ಸಂದರ್ಭದಲ್ಲಿ ಕೂಡ ವಿಪಕ್ಷ ನಾಯಕರ ಜೊತೆ ಯತ್ನಾಳ್​​​ ಒಳ ಒಪ್ಪಂದ ಮಾಡಿಕೊಂಡಿದ್ದರು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ ಮಾಡಿದ್ದಾರೆ.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jun 28, 2023 | 6:20 PM

Share

ವಿಜಯಪುರ: ಚುನಾವಣೆ ಸಂದರ್ಭದಲ್ಲಿ ವಿಪಕ್ಷ ನಾಯಕರ ಜೊತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಒಳ ಒಪ್ಪಂದ ಮಾಡಿಕೊಂಡಿದ್ದರು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್​ ಯತ್ನಾಳ್​ ಒಳಒಪ್ಪಂದ ಎಲ್ಲರಿಗೂ ಗೊತ್ತಿದೆ. ಅವರು​ ದೊಡ್ಡ ನಾಯಕರಾಗುತ್ತಾರೆ ಎಂದುಕೊಂಡಿದ್ವಿ, ಆದರೆ ಆಗಲ್ಲ. ನನ್ನ ಸೋಲಿಸಲು ನಿರಾಣಿ ಹಣಕೊಟ್ಟಿದ್ದಾರೆಂದು ಹೇಳುತ್ತಾ ಬಂದರು. ಯತ್ನಾಳ್​ ಹೇಳಿಕೆಯಿಂದ ಕಾರ್ಯಕರ್ತರಿಗೆ ಗೊಂದಲ ಉಂಟಾಯ್ತು ಎಂದಿದ್ದಾರೆ.

ನಾಲ್ಕು ವರ್ಷಗಳ ಕಾಲ ಪಾಲಿಕೆ ಚುನಾವಣೆ ನಡೆಯದಂತೆ ಮಾಡಿದರು. ಬಬಲೇಶ್ವರ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸರಿಯಾಗಿ ಹೋಗಲಿಲ್ಲ. 2ಎ ಮೀಸಲಾತಿ ಹೋರಾಟದಲ್ಲೂ ಯತ್ನಾಳ್​ ಸಮಸ್ಯೆ ಮಾಡಿದರು. ಒಟ್ಟಾಗಿ ಹೋರಾಟ ಮಾಡುವ ಮನೋಭಾವ ಯತ್ನಾಳ್​ಗೆ ಬರಲಿಲ್ಲ. ಎಲ್ಲವನ್ನೂ ಮರೆತು ಪಕ್ಷ ಸಂಘಟನೆ ಮಾಡಿಕೊಂಡು ಹೋಗಬೇಕಿದೆ. ಇದನ್ನು ರಾಜಿ ಎಂದರೂ ಅಡ್ಡಿಯಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್ ಡಿ ಕುಮಾರಸ್ವಾಮಿಗೆ ಮಾಡಲು ಕೆಲಸವಿಲ್ಲ, ಸರ್ಕಾರದ ಬಗ್ಗೆ ನೆಗೆಟಿವ್ ಕಾಮೆಂಟ್ ಮಾಡುತ್ತಾ ಕಾಲಹರಣ ಮಾಡುತ್ತಾರೆ: ದಿನೇಶ್ ಗುಂಡೂರಾವ್

ಘಟನೆಗೆ ನೇರ ಕಾರಣ ಯತ್ನಾಳ್

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ನೇರ ಕಾರಣ ಯತ್ನಾಳ್​. ವಿಜಯಪುರದಲ್ಲಿ ನಡೆದ ಸಭೆಗೆ ಉದ್ದೇಶ ಪೂರ್ವಕವಾಗಿ ಬರಲಿಲ್ಲ. ಜಿಗಜಿಣಗಿ ಮತ್ತೆ ಆಯ್ಕೆ ಮಾಡಬೇಕೆಂದು ಜೊಲ್ಲೆ ಹೇಳಿದ್ದು ತಪ್ಪಾ ಎಂದು ಪ್ರಶ್ನಿಸಿದ್ದಾರೆ. ಶಾಸಕ​ ಯತ್ನಾಳ್​ ತಮ್ಮ ಬೆಂಬಲಿಗರಿಂದ ಗಲಾಟೆ ಮಾಡಿಸಿದರು. ಜೆಡಿಎಸ್​​ನಲ್ಲಿದ್ದಾಗ ಟೋಪಿ ಹಾಕಿ ನಮಾಜ್ ಮಾಡಿದ್ದು ಯಾರು ಎಂದರು.

ಅಟಲ್ ಸರ್ಕಾರದಲ್ಲಿ ಕೇಂದ್ರ ಮಂತ್ರಿಯಾಗಿದ್ದೆ ಎಂದು ಹೇಳ್ತಿದ್ದಾರೆ. ಅಣ್ವಸ್ತ್ರ ವಿಚಾರದಲ್ಲಿ ಕಾಂಗ್ರೆಸ್ ಸೇರಲು ಯತ್ನಾಳ್​​ ಮುಂದಾಗಿದ್ದರು. ವಾಜಪೇಯಿ ಬಿಟ್ಟು ಕಾಂಗ್ರೆಸ್​ ಸೇರಲು ಯತ್ನಾಳ್​​ ಮುಂದಾಗಿದ್ದರು. ಆಗ ಯತ್ನಾಳ್​ರನ್ನು ಅನಂತಕುಮಾರ್​ ತಡೆದಿದ್ದನ್ನು ಮರೆಯಬಾರದು. ಸ್ಟಾರ್ ಪ್ರಚಾರಕರಾಗಿದ್ದ ಯತ್ನಾಳ್​​ ಎಷ್ಟು ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಹೈಕಮಾಂಡ್​ಗೆ 2,500 ಕೋಟಿ ಕೊಟ್ಟರೆ ಸಿಎಂ ಆಗುತ್ತಾರೆ ಎಂದಿದ್ದರು.

ಇದನ್ನೂ ಓದಿ: ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ: ಬಸವರಾಜ ಬೊಮ್ಮಾಯಿ ಟೀಕೆ

ಯತ್ನಾಳ್​ ಹೇಳಿಕೆಯಿಂದ ನಮಗೆ ದೊಡ್ಡ ಮಟ್ಟದ ಹಿನ್ನಡೆಯಾಯ್ತು. ಬೊಮ್ಮಾಯಿ ಸಿಎಂ ಆಗಿದ್ದಾಗ ಬ್ಲ್ಯಾಕ್​ಮೇಲ್​ ಮಾಡುತ್ತಾ ಬಂದರು. ನಿಮ್ಮ ಕ್ಷೇತ್ರದಲ್ಲಿ ಪಂಚಮಸಾಲಿ ಸಮುದಾಯದ ಜನರು ಹೆಚ್ಚಿದ್ದಾರೆ. ನಿಮ್ಮನ್ನು ಸೋಲಿಸುತ್ತೇನೆಂದು ಹೇಳುತ್ತಾ ಕೆಲಸ ಮಾಡಿಸಿಕೊಂಡರು ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಸರ್ಕಾರ ಐದು ಗ್ಯಾರಂಟಿಗಳನ್ನು ಈಡೇರಿಸಬೇಕು

ರಾಜ್ಯ ಕಾಂಗ್ರೆಸ್​ ಸರ್ಕಾರ ಐದು ಗ್ಯಾರಂಟಿಗಳನ್ನು ಈಡೇರಿಸಬೇಕು. ಈಗಾಗಲೇ ಕೇಂದ್ರ ಸರ್ಕಾರ ತಲಾ ಐದು ಕೆಜಿ ಅಕ್ಕಿ ಕೊಡುತ್ತಿದೆ. ಕಾಂಗ್ರೆಸ್ ಸರ್ಕಾರ ಒಟ್ಟಾರೆ 15 ಕೆಜಿ ಅಕ್ಕಿಯನ್ನು ನೀಡಬೇಕು. ಅಕ್ಕಿ ವಿತರಣೆ ಮಾಡದಿದ್ರೆ ಸರ್ಕಾರದ ವಿರುದ್ಧ ಸದನದ ಒಳಗೆ ಹಾಗೂ ಹೊರಗೂ ನಾವು ಹೋರಾಟ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ