AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರು ನನ್ನ ಗುರುಗಳು, ನಾನವರ ಶಿಷ್ಯ ಎಂದ ಮಾಜಿ ಸಚಿವ ವಿ ಸೋಮಣ್ಣ

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರನ್ನು ಮಾಜಿ ಸಚಿವ ವಿ ಸೋಮಣ್ಣ ಇಂದು ನಗರದ ಪದ್ಮನಾಭನಗರದ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ದೇವೇಗೌಡರನ್ನ ಭೇಟಿಯಾಗಿದ್ದಕ್ಕೆ ಸಂತೋಷವಾಗಿದೆ. ಅವರು ನನ್ನ ಗುರುಗಳು ಎಂದು ಹೇಳಿದ್ದಾರೆ.

Sunil MH
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 05, 2024 | 10:39 PM

Share

ಬೆಂಗಳೂರು, ಜನವರಿ 05: ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರನ್ನು ಮಾಜಿ ಸಚಿವ ವಿ ಸೋಮಣ್ಣ (V Somanna) ಇಂದು ನಗರದ ಪದ್ಮನಾಭನಗರದ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ವೇಳೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು. ಸೋಮಣ್ಣ ಮತ್ತು ದೇವೇಗೌಡರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.

ದೇವೇಗೌಡರು ನನ್ನ ಗುರುಗಳು ಎಂದ ವಿ.ಸೋಮಣ್ಣ

ಭೇಟಿ ಬಳಿಕ ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, ದೇವೇಗೌಡರನ್ನ ಭೇಟಿಯಾಗಿದ್ದಕ್ಕೆ ಸಂತೋಷವಾಗಿದೆ. ದೇವೇಗೌಡರ ತಂತ್ರಗಾರಿಕೆ ಕಲಿಯಬೇಕು. ನಾನು ಸೋತಬಳಿಕ ನನಗೆ ಕರೆ ಮಾಡಿ ಮಾತಾಡಿದ್ದರು. ಅವರು ನನ್ನ ಗುರುಗಳು. ನಾನು ಅವರ ಶಿಷ್ಯ. 1983ರಲ್ಲಿ ನಾನು ರಾಜಕೀಯ ಬಂದಾಗ ಅವರ ಅನುಯಾಯಿ ಆಗಿದ್ದೆ   ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಸಹೋದರ ವಿರುದ್ಧದ ಪ್ರಕರಣ: ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗವೆಂದ ಕುಮಾರಸ್ವಾಮಿ

ನಾನು H.D.ದೇವೇಗೌಡರಿಂದ ಸಾಕಷ್ಟು ಕಲಿತಿದ್ದೇನೆ. ಅವರಿಗೆ ವಯಸ್ಸಾಗಿರಬಹುದು, ಅಗಾಧ ಜ್ಞಾನ ಇದೆ. ಸುಮಾರು 1 ಗಂಟೆರ ಕಾಲ ಮಾತುಕತೆ ನಡೆಸಿದ್ದೇನೆ. ಅವರು ಕೆಲ ವಿಚಾರಗಳನ್ನ ಹೇಳಿದ್ದಾರೆ ಎಂದರು.

ಈಗ ಏನೂ ಹೇಳುವ ವಾತಾವರಣವಿಲ್ಲ

ತುಮಕೂರು ಲೋಕಸಭಾ ಕ್ಷೇತ್ರದ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಈಗ ಏನೂ ಹೇಳುವ ವಾತಾವರಣವಿಲ್ಲ. ಜ.15 ಅಥವಾ 16ರ ಬಳಿಕ ಗೊತ್ತಾಗುತ್ತೆ. ಸುಮ್ಮನೆ ಬುರುಡೆ ಹೊಡೆದರೆ ಆಗಲ್ಲ ಎಂದು ಹೇಳಿದ್ದಾರೆ.

ರಾಜ್ಯ BJP ನಾಯಕರ ಮೇಲೆ ಅಸಮಾಧಾನ

ರಾಜ್ಯ BJP ನಾಯಕರ ಮೇಲೆ ಅಸಮಾಧಾನ ವಿಚಾರವಾಗಿ ಮಾತನಾಡಿ, ಈ ಕುರಿತು ಮಾತನಾಡಿ ಬಗೆಹರಿಸುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ. ಮೈತ್ರಿಯಿಂದ ಜನತೆ ಬಹಳ ಖುಷಿಯಿಂದ ಇದ್ದಾರೆ ಎಂದರು.

ದೇಶಕ್ಕೆ ಮೋದಿಯಂತವರು ಬೇಕು: ಹೆಚ್​ಡಿ ರೇವಣ್ಣ

ಹೆಚ್​ಡಿ ರೇವಣ್ಣ ಪ್ರತಿಕ್ರಿಯಿಸಿದ್ದು, ಸೋಮಣ್ಣ ಹಿರಿಯರು ನಮ್ಮಲ್ಲೇ ಇದ್ದವರು. ಇಂದು ದೇವೇಗೌಡರ ಬಹಳ ದಿನಗಳ ನಂತರ ಭೇಟಿಯಾದರು. ಹಳೆಯ ವಿಚಾರಗಳನ್ನ ಮೆಲುಕು ಹಾಕಿದರು ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ಸಿಗರು ಸೇಡಿನ ರಾಜಕಾರಣ ಮಾಡಿ ತುಳಿಯಲು ಹೊರಟಿದ್ದಾರೆ: ಶ್ರೀಕಾಂತ್ ಪ್ರಕರಣ ಉಲ್ಲೇಖಿಸಿ ದೇವೇಗೌಡ ವಾಗ್ದಾಳಿ

ಸೋಮಣ್ಣಗೆ ತುಮಕೂರು ಲೋಕಸಭಾ ಟಿಕೆಟ್ ಬಿಟ್ಟು ಕೊಡುವ ವಿಚಾರವಾಗಿ ಮಾತನಾಡಿ, ಆ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆ ಬಗ್ಗೆ ಮಾತನಾಡುತ್ತಾರೆ. ಪ್ರಧಾನಿ ಮೋದಿ ಅವರ ಭೇಟಿಯ ವೇಳೆ ನಮ್ಮ ಕುಟುಂಬವನ್ನ ಬಹಳ ಗೌರವದಿಂದ ನಡೆಸಿಕೊಂಡರು. ನಾವು ಎಂದಿಗೂ ಅದನ್ನ ಮರೆಯುವುದಿಲ್ಲ. ದೇಶಕ್ಕೆ ಮೋದಿಯಂತವರು ಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!