AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರು ನನ್ನ ಗುರುಗಳು, ನಾನವರ ಶಿಷ್ಯ ಎಂದ ಮಾಜಿ ಸಚಿವ ವಿ ಸೋಮಣ್ಣ

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರನ್ನು ಮಾಜಿ ಸಚಿವ ವಿ ಸೋಮಣ್ಣ ಇಂದು ನಗರದ ಪದ್ಮನಾಭನಗರದ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ದೇವೇಗೌಡರನ್ನ ಭೇಟಿಯಾಗಿದ್ದಕ್ಕೆ ಸಂತೋಷವಾಗಿದೆ. ಅವರು ನನ್ನ ಗುರುಗಳು ಎಂದು ಹೇಳಿದ್ದಾರೆ.

ಸುನಿಲ್​ ಎಮ್​ ಹೆಚ್​
| Edited By: |

Updated on: Jan 05, 2024 | 10:39 PM

Share

ಬೆಂಗಳೂರು, ಜನವರಿ 05: ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರನ್ನು ಮಾಜಿ ಸಚಿವ ವಿ ಸೋಮಣ್ಣ (V Somanna) ಇಂದು ನಗರದ ಪದ್ಮನಾಭನಗರದ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ವೇಳೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು. ಸೋಮಣ್ಣ ಮತ್ತು ದೇವೇಗೌಡರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.

ದೇವೇಗೌಡರು ನನ್ನ ಗುರುಗಳು ಎಂದ ವಿ.ಸೋಮಣ್ಣ

ಭೇಟಿ ಬಳಿಕ ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, ದೇವೇಗೌಡರನ್ನ ಭೇಟಿಯಾಗಿದ್ದಕ್ಕೆ ಸಂತೋಷವಾಗಿದೆ. ದೇವೇಗೌಡರ ತಂತ್ರಗಾರಿಕೆ ಕಲಿಯಬೇಕು. ನಾನು ಸೋತಬಳಿಕ ನನಗೆ ಕರೆ ಮಾಡಿ ಮಾತಾಡಿದ್ದರು. ಅವರು ನನ್ನ ಗುರುಗಳು. ನಾನು ಅವರ ಶಿಷ್ಯ. 1983ರಲ್ಲಿ ನಾನು ರಾಜಕೀಯ ಬಂದಾಗ ಅವರ ಅನುಯಾಯಿ ಆಗಿದ್ದೆ   ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಸಹೋದರ ವಿರುದ್ಧದ ಪ್ರಕರಣ: ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗವೆಂದ ಕುಮಾರಸ್ವಾಮಿ

ನಾನು H.D.ದೇವೇಗೌಡರಿಂದ ಸಾಕಷ್ಟು ಕಲಿತಿದ್ದೇನೆ. ಅವರಿಗೆ ವಯಸ್ಸಾಗಿರಬಹುದು, ಅಗಾಧ ಜ್ಞಾನ ಇದೆ. ಸುಮಾರು 1 ಗಂಟೆರ ಕಾಲ ಮಾತುಕತೆ ನಡೆಸಿದ್ದೇನೆ. ಅವರು ಕೆಲ ವಿಚಾರಗಳನ್ನ ಹೇಳಿದ್ದಾರೆ ಎಂದರು.

ಈಗ ಏನೂ ಹೇಳುವ ವಾತಾವರಣವಿಲ್ಲ

ತುಮಕೂರು ಲೋಕಸಭಾ ಕ್ಷೇತ್ರದ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಈಗ ಏನೂ ಹೇಳುವ ವಾತಾವರಣವಿಲ್ಲ. ಜ.15 ಅಥವಾ 16ರ ಬಳಿಕ ಗೊತ್ತಾಗುತ್ತೆ. ಸುಮ್ಮನೆ ಬುರುಡೆ ಹೊಡೆದರೆ ಆಗಲ್ಲ ಎಂದು ಹೇಳಿದ್ದಾರೆ.

ರಾಜ್ಯ BJP ನಾಯಕರ ಮೇಲೆ ಅಸಮಾಧಾನ

ರಾಜ್ಯ BJP ನಾಯಕರ ಮೇಲೆ ಅಸಮಾಧಾನ ವಿಚಾರವಾಗಿ ಮಾತನಾಡಿ, ಈ ಕುರಿತು ಮಾತನಾಡಿ ಬಗೆಹರಿಸುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ. ಮೈತ್ರಿಯಿಂದ ಜನತೆ ಬಹಳ ಖುಷಿಯಿಂದ ಇದ್ದಾರೆ ಎಂದರು.

ದೇಶಕ್ಕೆ ಮೋದಿಯಂತವರು ಬೇಕು: ಹೆಚ್​ಡಿ ರೇವಣ್ಣ

ಹೆಚ್​ಡಿ ರೇವಣ್ಣ ಪ್ರತಿಕ್ರಿಯಿಸಿದ್ದು, ಸೋಮಣ್ಣ ಹಿರಿಯರು ನಮ್ಮಲ್ಲೇ ಇದ್ದವರು. ಇಂದು ದೇವೇಗೌಡರ ಬಹಳ ದಿನಗಳ ನಂತರ ಭೇಟಿಯಾದರು. ಹಳೆಯ ವಿಚಾರಗಳನ್ನ ಮೆಲುಕು ಹಾಕಿದರು ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ಸಿಗರು ಸೇಡಿನ ರಾಜಕಾರಣ ಮಾಡಿ ತುಳಿಯಲು ಹೊರಟಿದ್ದಾರೆ: ಶ್ರೀಕಾಂತ್ ಪ್ರಕರಣ ಉಲ್ಲೇಖಿಸಿ ದೇವೇಗೌಡ ವಾಗ್ದಾಳಿ

ಸೋಮಣ್ಣಗೆ ತುಮಕೂರು ಲೋಕಸಭಾ ಟಿಕೆಟ್ ಬಿಟ್ಟು ಕೊಡುವ ವಿಚಾರವಾಗಿ ಮಾತನಾಡಿ, ಆ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆ ಬಗ್ಗೆ ಮಾತನಾಡುತ್ತಾರೆ. ಪ್ರಧಾನಿ ಮೋದಿ ಅವರ ಭೇಟಿಯ ವೇಳೆ ನಮ್ಮ ಕುಟುಂಬವನ್ನ ಬಹಳ ಗೌರವದಿಂದ ನಡೆಸಿಕೊಂಡರು. ನಾವು ಎಂದಿಗೂ ಅದನ್ನ ಮರೆಯುವುದಿಲ್ಲ. ದೇಶಕ್ಕೆ ಮೋದಿಯಂತವರು ಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ