AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಕುಮ ಬೇಡ ಎನ್ನುವ ಇವರು ಹಿಂದೂನಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ

ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ, ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮಂಗಳಕರವಾದದ್ದು ಯಾವುದೂ ಬೇಡ. ಅವರಿಗೆ ಬೇಕಿರುವುದು ಅಮಂಗಳಕರವಾದದ್ದೆ ಎಂದು ವಾಗ್ದಾಳಿ ಮಾಡಿದ್ದಾರೆ. 

ಕುಂಕುಮ ಬೇಡ ಎನ್ನುವ ಇವರು ಹಿಂದೂನಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ
ಮಾಜಿ ಶಾಸಕ ಸಿ.ಟಿ.ರವಿ, ಸಿಎಂ ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: |

Updated on: Feb 02, 2024 | 9:57 PM

Share

ಬೆಂಗಳೂರು, ಫೆಬ್ರುವರಿ 2: ಹಿಂದೂಗಳಾರೂ ಕುಂಕುಮ, ವಿಭೂತಿ ಬೇಡ ಅಂತಾ ಹೇಳಲ್ಲ. ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ (CT Ravi) ವಾಗ್ದಾಳಿ ಮಾಡಿದ್ದಾರೆ. ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತೆತ್ತಿದರೆ ನಾನು ಹಿಂದೂ ಅಂತಾರೆ. ನಮ್ಮ ತಂದೆ ಹೆಸರಲ್ಲಿ ರಾಮ ಇದೆ ಎಂದು ಹೇಳ್ಳುತ್ತಾರೆ. ಹಾಗಿದ್ದರೆ ಕುಂಕುಮ ಬೇಡ ಅಂತಾ ಯಾಕೆ ಅನ್ನಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಮಂಗಳಕರವಾದದ್ದು ಯಾವುದೂ ಸಿದ್ದರಾಮಯ್ಯಗೆ ಬೇಡ. ಅವರಿಗೆ ಬೇಕಿರುವುದು ಅಮಂಗಳಕರವಾದದ್ದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಶಾಸಕ ಪಿ.ಎಂ.ನರೇಂದ್ರಸ್ವಾಮಿರಿಂದ ಕಾಂಗ್ರೆಸ್​ ಪಕ್ಷ ಹೇಳಿಸಿದೆ

ಸಿ.ಟಿ.ರವಿ ಬಗ್ಗೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವಾಚ್ಯ ಶಬ್ದದಿಂದ ನಿಂದನೆ ವಿಚಾರವಾಗಿ ಮಾತನಾಡಿದ ಅವರು, ನರೇಂದ್ರಸ್ವಾಮಿರಿಂದ ಕಾಂಗ್ರೆಸ್​ ಪಕ್ಷ ಹೇಳಿಸಿದೆ. ನಾನು ರಾಷ್ಟ್ರಧ್ವಜಕ್ಕೆ ಅಗೌರವ ತರುವ ರೀತಿಯಲ್ಲಿ ಮಾತನಾಡಿಲ್ಲ. ತಾಲಿಬಾನ್ ಧ್ವಜ ಹಾಕಿದ್ವಾ, ಹನುಮಧ್ವಜ ಹಾಕಿದ್ದೇವೆ ಎಂದಿದ್ದೆ. ಇದರಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಆಗುವಂತಹದ್ದು ಎಲ್ಲಿ ಆಗಿದೆ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಫೆ 7ರಂದು ದಿಲ್ಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಸರ್ಕಾರ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಟೂಲ್ ಕಿಟ್ ರಾಜಕಾರಣ ಭಾಗವಾಗಿ ಸಚಿವ ಪ್ರಿಯಾಂಕ್​ ಖರ್ಗೆ ಟ್ವೀಟ್ ಮಾಡಿದರು.​ ಆ ನಂತರ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿಕೆ ಕೊಟ್ಟರು. ನಾನು ಸ್ವೀಕಾರ ಮಾಡಿಲ್ಲ ಅಂದರೆ ಅವರಿಗೆ ತಾನೇ ಸೇರಬೇಕು? ಅವರು ಏನು ಬೈದರೋ ಅದೆಲ್ಲವೂ ನರೇಂದ್ರಸ್ವಾಮಿಗೆ ಸೇರುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೆ.6ರಂದು ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ:​ ಪ್ರತಿಭಟನೆ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್​ ಬುದ್ದ ಹೋಗುವಾಗ ಒಬ್ಬರು ಬಾಯಿಗೆ ಬಂದಂತೆ ಬೈತಾರೆ. ಆದರೆ ಇವರು ಏನೂ ಪ್ರತಿಕ್ರಿಯಿಸಲ್ಲ. ಕೊನೆಗೆ ಶಿಷ್ಯ ಕೇಳಿದಾಗ, ಭಿಕ್ಷೆ ತಗೊಳಲ್ಲ ಅಂದರೆ ಅದು ಅವರಿಗೆ ಸೇರುತ್ತದೆ ಅಂತಾ ಹೇಳುತ್ತಾರೆ. ಹಾಗೇ ಅವರು ಏನು ಬೈದರೋ ಅದೆಲ್ಲವೂ ನರೇಂದ್ರ ಸ್ವಾಮಿಗೆ ಸೇರುತ್ತದೆ. ಮತ್ತೆ ಯಾರಿಗೆ ಯಾವುದರ ಬಗ್ಗೆ ಅನುಮಾನ ಇರುತ್ತದೆಯೋ ಆಗ ಇನ್ನೊಬ್ಬರ ಮೇಲೆ ಈ ರೀತಿ ಮಾತಾಡುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ