AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HDK ಸಿಎಂ ಆಗಿದ್ದಾಗ ದಾಸರಹಳ್ಳಿಗೆ 30 ಕೋಟಿ ರೂ. ಅನುದಾನ, ಶಾಸಕರು ಪರ್ಸೆಂಟೇಜ್​ ತೆಗೆದುಕೊಂಡು ಬಿಲ್‌ ಮಾಡಿರುವ ಆರೋಪ

2 ಕೋಟಿ 80 ಲಕ್ಷ ಅವ್ಯವಹಾರ ಆಗಿದೆ ಎಂದು ಟಿವಿಸಿಸಿ ವರದಿ ಮಾಡಿದೆ. ಹಣವನ್ನ ರಿಕವರಿ ಮಾಡಿ ಎಂದು ಆದೇಶ ಮಾಡಿದೆ ಎಂದು ಶಾಸಕ ಮಂಜುನಾಥ ವಿರುದ್ಧ ಮಾಜಿ ಶಾಸಕ ಎಸ್​. ಮುನಿರಾಜ್ ವಾಗ್ದಾಳಿ ಮಾಡಿದರು.

HDK ಸಿಎಂ ಆಗಿದ್ದಾಗ ದಾಸರಹಳ್ಳಿಗೆ 30 ಕೋಟಿ ರೂ. ಅನುದಾನ, ಶಾಸಕರು ಪರ್ಸೆಂಟೇಜ್​ ತೆಗೆದುಕೊಂಡು ಬಿಲ್‌ ಮಾಡಿರುವ ಆರೋಪ
ಮಾಜಿ ಶಾಸಕ ಮುನಿರಾಜ್
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 11, 2023 | 3:48 PM

Share

ನೆಲಮಂಗಲ: ಹೆಚ್​.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ದಾಸರಹಳ್ಳಿ ಕ್ಷೇತ್ರಕ್ಕೆ 30 ಕೋಟಿ ರೂ. ಅನುದಾನ (Grant) ಕೊಟ್ಟಿದ್ರು. ಶಾಸಕರು ಪರ್ಸೆಂಟೇಜ್ ತಗೊಂಡು ಬಿಲ್ ಮಾಡಿದ್ರು. ಆದ್ರೆ ಯಾವುದೇ ಕಾಮಗಾರಿ ಆಗಿರಲಿಲ್ಲ. 2 ಕೋಟಿ 80 ಲಕ್ಷ ಅವ್ಯವಹಾರ ಆಗಿದೆ ಎಂದು ಟಿವಿಸಿಸಿ ವರದಿ ಮಾಡಿದೆ. ಹಣವನ್ನ ರಿಕವರಿ ಮಾಡಿ ಎಂದು ಆದೇಶ ಮಾಡಿದೆ ಎಂದು ಶಾಸಕ ಮಂಜುನಾಥ ವಿರುದ್ಧ ಮಾಜಿ ಶಾಸಕ ಎಸ್​. ಮುನಿರಾಜ್ (Former MLA Muniraj) ವಾಗ್ದಾಳಿ ಮಾಡಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 4 ವರ್ಷದಲ್ಲಿ ವಾರ್ಡ್ ಕಾಮಗಾರಿಗೆ 471 ಕೋಟಿ ಬಂದಿದೆ. ಕಾಮಗಾರಿ ಮುಗಿದಿದೆ ಎಂದು ಬಿಲ್ ಮಾಡಿದ್ದಾರೆ. ಇವರ ಕಾಲದಲ್ಲಿ ಆಗಿರುವ ಕಾಮಗಾರಿ ಕಳಪೆ ಗುಣಮಟ್ಟದಾಗಿದೆ. ದಾಸರಹಳ್ಳಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗಿಲ್ಲ ಎಂದು ಹೇಳಿದರು.

ಕುಮಾರಸ್ವಾಮಿ ಸಿಎಂ ಆಗಿದ್ದಾಗ 700 ಕೋಟಿ ಅನುದಾನ

ಸಮ್ಮಿಶ್ರ ಸರ್ಕಾರ ಪತನ ನಂತರ ಕುಮಾರಸ್ವಾಮಿ 700 ಕೋಟಿ ಕೊಟ್ಟಿದ್ದರು. ಅದನ್ನ ಸಮ್ಮಿಶ್ರ ಸರ್ಕಾರ ವಾಪಸ್​ ಪಡೆದುಕೊಂಡಿದೆ ಎಂದು ಶಾಸಕರು ಭಾಷಣಗಳಲ್ಲಿ ಹೇಳ್ತಾರೆ. ಕಳೆದ ನಾಲ್ಕು ವರ್ಷದಲ್ಲಿ ಕ್ಷೇತ್ರಕ್ಕೆ ವಾರ್ಡ್ ಕಾಮಗಾರಿಗೆಂದು 471 ಕೋಟಿ ರೂ. ಬಿಲ್ ಆಗಿದೆ. ಮುಖ್ಯ ರಸ್ತೆಗಳಿಗೆ 89 ಕೋಟಿ ಅನುದಾನ ಕೊಡಲಾಗಿದೆ. ತೋಟಗಾರಿಕೆಗೆ 20 ಕೋಟಿ 82 ಲಕ್ಷ ಹಣ ಕೊಟ್ಟಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಲಿಂಗಾಯತ ಸ್ವತಂತ್ರ ಧರ್ಮದ ಕೂಗು: ಸಾಂವಿಧಾನಿಕ ಮಾನ್ಯತೆಗೆ ಮತ್ತೊಮ್ಮೆ ಶಿಫಾರಸ್ಸು ಮಾಡುವಂತೆ ಕೇಂದ್ರಕ್ಕೆ ಒತ್ತಾಯ

ಕಳಪೆ ಕಾಮಗಾರಿ ಎಂದು ಆರೋಪ

ಆದ್ರೆ ಒಂದು ಪಾರ್ಕಿನ ಅಭಿವೃದ್ದಿ ಸಹ ಆಗಿಲ್ಲ. ಕೋವಿಡ್ ನಿರ್ವಹಣೆಗೆ 245 ಕೋಟಿ 89 ಲಕ್ಷ ಹಣ ಬಂದಿದೆ. ನಗರೋತ್ಥಾನದಲ್ಲಿ 110 ಕೋಟಿ ಕೊಟ್ಟಿದ್ದಾರೆ. ಕಳೆದ ಸರ್ಕಾರದಲ್ಲಿ ನಾನು ಶಾಸಕನಾಗಿದ್ದ 100 ಕೋಟಿ ಹಣ ಫ್ರೀ ಮಾಡಿದ್ರು. ಬೃಹತ್ ನೀರು ಗಾವಲಿಗೆ 80 ಕೋಟಿ ಹಣ ಕೊಟ್ಟಿದ್ದಾರೆ. 110 ವಿಲೇಜ್ ಪ್ರಾಜೆಕ್ಟ್‌ನಲ್ಲಿ 50 ಕೋಟಿ ರೂ. ಹೆಸರಘಟ್ಟ ಮುಖ್ಯರಸ್ತೆಗೆ 15 ಕೋಟಿ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಜೆಡಿಎಸ್​ಗೆ ಮತ ಹಾಕಿದರೆ ನೀವು ಬಿಜೆಪಿಗೆ ಮತ ಹಾಕಿದಂತೆ: ಶಾಸಕ ಜಮೀರ್ ಅಹ್ಮದ್​

ಪೈಪ್‌ಲೈನ್‌ಗೆ 3 ಕೋಟಿ, ಎಮೆರ್ಜನ್ಸಿ ಫಂಡ್ 5 ಕೋಟಿ ಬಿಡುಗಡೆಯಾಗಿದೆ. ಮಾಡಿರುವ ಯಾವ ಕಾಮಗಾರಿಗಳು ಗುಣಮಟ್ಟದಲ್ಲ. ಎಲ್ಲಾ ಕಳಪೆ ಕಾಮಗಾರಿಯಾಗಿದೆ. ನಾವು ಯಾವುದೇ ಅಭಿವೃದ್ದಿ ಕೆಲಸಗಳಿಗೆ ಅಡ್ಡ ಹಾಕಿಲ್ಲ. ಇವರು ಮಾಡುವ ಲೂಟಿಗೆ ಅಡ್ಡ ಹಾಕಿದ್ದೇವೆ. ಸುಮಾರು 900 ಕೋಟಿ ಹಣ ಲೂಟಿ ಹೊಡೆಯಲಾಗಿದೆ ಎಂದು ಮಾಜಿ ಶಾಸಕ ಮುನಿರಾಜ್ ಆರೋಪ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:38 pm, Sat, 11 February 23

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು