AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ನೀಡ್ಬೇಕಿತ್ತು, ನ.11ರಂದು ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡ್ತೇನೆ ಎಂದ ಮಾಜಿ ಶಾಸಕ ಬಣಕಾರ್

ಯಾರೇ ಮನವೊಲಿಸಿದರೂ ​ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ನ.11ರಂದು ನನ್ನ ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಮಾಜಿ ಶಾಸಕ ಬಣಕಾರ್ ತಿಳಿಸಿದ್ದಾರೆ.

6 ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ನೀಡ್ಬೇಕಿತ್ತು, ನ.11ರಂದು ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡ್ತೇನೆ ಎಂದ ಮಾಜಿ ಶಾಸಕ ಬಣಕಾರ್
ub banakar
TV9 Web
| Edited By: |

Updated on:Nov 09, 2022 | 7:00 PM

Share

ಬೆಂಗಳೂರು: ಮಾಜಿ ಶಾಸಕ ಯು.ಬಿ.ಬಣಕಾರ್ (U B Banakar) ಬಿಜೆಪಿಗೆ ಗುಡ್​ ಬೈ ಹೇಳಿದ್ದಾರೆ. . ಬಿಜೆಪಿ ಸದಸ್ಯತ್ವ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ಬಣಕಾರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಹೊತ್ತಲ್ಲಿ ಬಿಜೆಪಿ ಶಾಕ್ ಕೊಟ್ಟಿದ್ದಾರೆ ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಇಂದು(ನ.9) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಯಾರೇ ಮನವೊಲಿಸಿದರೂ ​ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನನ್ನ ಸಮಸ್ಯೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೂ ಗೊತ್ತಿದೆ. ಸಿಎಂ ಬೊಮ್ಮಾಯಿ ನಿವಾಸಕ್ಕೆ ಹೋದರೆ ಬಹಳ ಬ್ಯುಸಿ ಇರುತ್ತಾರೆ. ಈಗ ಯಡಿಯೂರಪ್ಪ ಅವರನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಬಿಎಸ್​ವೈ ಸಿಎಂ ಆಗಬೇಕೆಂದು ಬಿ.ಸಿ.ಪಾಟೀಲ್​ಗೆ ಸಹಕಾರ ಕೊಟ್ಟೆ. ಹಿರೇಕೆರೂರಲ್ಲಿ ಬಿ.ಸಿ.ಪಾಟೀಲ್​ರನ್ನು ಗೆಲ್ಲಿಸುವ ಕೆಲಸ ಮಾಡಿದ್ದೇನೆ. ಆದರೆ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತೆ ಎಂದು ದೂರವಿಡುವ ಪ್ರಯತ್ನಿಸಿದರು. ಕಾರ್ಯಕರ್ತರ ಜೊತೆ ಚರ್ಚಿಸಿಯೇ ತೀರ್ಮಾನ ಕೈಗೊಂಡಿದ್ದೇನೆ ಎಂದು ಹೇಳಿದರು.

ಯಡಿಯೂರಪ್ಪನವರ ಆಪ್ತ, ಮಾಜಿ ಶಾಸಕ ಬಿಜೆಪಿಗೆ ಗುಡ್​ ಬೈ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಇಬ್ಬರು ನಾಯಕರಿದ್ದೆವು. ಇಬ್ಬರೂ ನಾಯಕರು ಒಟ್ಟಿಗೆ ಹೋಗಲು ಆಗಲಿಲ್ಲ. ಬಿಎಸ್​ವೈ ನಮ್ಮಿಬ್ಬರನ್ನು ಪಕ್ಷದ ಎರಡು ಕಣ್ಣುಗಳು ಎಂದಿದ್ದರು. ಕೃಷಿ ಸಚಿವ ಬಿ.ಸಿ.ಪಾಟೀಲ್​ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಬಿಜೆಪಿ ಬಿಡುವ ನಿರ್ಧಾರವನ್ನು ಮಾಡಿದ್ದೇನೆ. ಕಾರ್ಯಕರ್ತರ ಜತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಬೇರೆಯವರಾಗಿದ್ದರೆ 4-5 ತಿಂಗಳ ಹಿಂದೆಯೇ ಪಕ್ಷ ಬಿಡುತ್ತಿದ್ದರು. ನ.11ರಂದು ನನ್ನ ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು.

2 ಬಾರಿ ಹಿರೇಕೆರೂರು ಕ್ಷೇತ್ರದ ಶಾಸಕರಾಗಿದ್ದ ಯು.ಬಿ.ಬಣಕಾರ್​​ 1994 ಹಾಗೂ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದ್ರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ವಿರುದ್ಧ ಸೋಲುಕಂಡಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಾಮಾನದಿಂದ ಬಿ.ಸಿ.ಪಾಟೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಬಣಕರ್ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಸಾಧ್ಯತೆಗಳು ಕಡಿಮೆ. ಇದರಿಂದ ಬಣಕಾರ್ ತಮ್ಮ ಮುಂದಿನ ರಾಜಕೀಯ ನಡೆಗಾಗಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Published On - 6:59 pm, Wed, 9 November 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ