AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ನೀಡ್ಬೇಕಿತ್ತು, ನ.11ರಂದು ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡ್ತೇನೆ ಎಂದ ಮಾಜಿ ಶಾಸಕ ಬಣಕಾರ್

ಯಾರೇ ಮನವೊಲಿಸಿದರೂ ​ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ನ.11ರಂದು ನನ್ನ ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಮಾಜಿ ಶಾಸಕ ಬಣಕಾರ್ ತಿಳಿಸಿದ್ದಾರೆ.

6 ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ನೀಡ್ಬೇಕಿತ್ತು, ನ.11ರಂದು ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡ್ತೇನೆ ಎಂದ ಮಾಜಿ ಶಾಸಕ ಬಣಕಾರ್
ub banakar
TV9 Web
| Edited By: |

Updated on:Nov 09, 2022 | 7:00 PM

Share

ಬೆಂಗಳೂರು: ಮಾಜಿ ಶಾಸಕ ಯು.ಬಿ.ಬಣಕಾರ್ (U B Banakar) ಬಿಜೆಪಿಗೆ ಗುಡ್​ ಬೈ ಹೇಳಿದ್ದಾರೆ. . ಬಿಜೆಪಿ ಸದಸ್ಯತ್ವ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ಬಣಕಾರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಹೊತ್ತಲ್ಲಿ ಬಿಜೆಪಿ ಶಾಕ್ ಕೊಟ್ಟಿದ್ದಾರೆ ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಇಂದು(ನ.9) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಯಾರೇ ಮನವೊಲಿಸಿದರೂ ​ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನನ್ನ ಸಮಸ್ಯೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೂ ಗೊತ್ತಿದೆ. ಸಿಎಂ ಬೊಮ್ಮಾಯಿ ನಿವಾಸಕ್ಕೆ ಹೋದರೆ ಬಹಳ ಬ್ಯುಸಿ ಇರುತ್ತಾರೆ. ಈಗ ಯಡಿಯೂರಪ್ಪ ಅವರನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಬಿಎಸ್​ವೈ ಸಿಎಂ ಆಗಬೇಕೆಂದು ಬಿ.ಸಿ.ಪಾಟೀಲ್​ಗೆ ಸಹಕಾರ ಕೊಟ್ಟೆ. ಹಿರೇಕೆರೂರಲ್ಲಿ ಬಿ.ಸಿ.ಪಾಟೀಲ್​ರನ್ನು ಗೆಲ್ಲಿಸುವ ಕೆಲಸ ಮಾಡಿದ್ದೇನೆ. ಆದರೆ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತೆ ಎಂದು ದೂರವಿಡುವ ಪ್ರಯತ್ನಿಸಿದರು. ಕಾರ್ಯಕರ್ತರ ಜೊತೆ ಚರ್ಚಿಸಿಯೇ ತೀರ್ಮಾನ ಕೈಗೊಂಡಿದ್ದೇನೆ ಎಂದು ಹೇಳಿದರು.

ಯಡಿಯೂರಪ್ಪನವರ ಆಪ್ತ, ಮಾಜಿ ಶಾಸಕ ಬಿಜೆಪಿಗೆ ಗುಡ್​ ಬೈ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಇಬ್ಬರು ನಾಯಕರಿದ್ದೆವು. ಇಬ್ಬರೂ ನಾಯಕರು ಒಟ್ಟಿಗೆ ಹೋಗಲು ಆಗಲಿಲ್ಲ. ಬಿಎಸ್​ವೈ ನಮ್ಮಿಬ್ಬರನ್ನು ಪಕ್ಷದ ಎರಡು ಕಣ್ಣುಗಳು ಎಂದಿದ್ದರು. ಕೃಷಿ ಸಚಿವ ಬಿ.ಸಿ.ಪಾಟೀಲ್​ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಬಿಜೆಪಿ ಬಿಡುವ ನಿರ್ಧಾರವನ್ನು ಮಾಡಿದ್ದೇನೆ. ಕಾರ್ಯಕರ್ತರ ಜತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಬೇರೆಯವರಾಗಿದ್ದರೆ 4-5 ತಿಂಗಳ ಹಿಂದೆಯೇ ಪಕ್ಷ ಬಿಡುತ್ತಿದ್ದರು. ನ.11ರಂದು ನನ್ನ ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು.

2 ಬಾರಿ ಹಿರೇಕೆರೂರು ಕ್ಷೇತ್ರದ ಶಾಸಕರಾಗಿದ್ದ ಯು.ಬಿ.ಬಣಕಾರ್​​ 1994 ಹಾಗೂ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದ್ರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ವಿರುದ್ಧ ಸೋಲುಕಂಡಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಾಮಾನದಿಂದ ಬಿ.ಸಿ.ಪಾಟೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಬಣಕರ್ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಸಾಧ್ಯತೆಗಳು ಕಡಿಮೆ. ಇದರಿಂದ ಬಣಕಾರ್ ತಮ್ಮ ಮುಂದಿನ ರಾಜಕೀಯ ನಡೆಗಾಗಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Published On - 6:59 pm, Wed, 9 November 22

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ