AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆ

ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಸೇರಿದ್ದಾರೆ. ಹಾಗೇ ಬ್ರಿಜೇಶ್​ ಕಾಳಪ್ಪ ಕೂಡ ಮರಳಿ ಮಾತೃ ಪಕ್ಷಕ್ಕೆ ವಾಪಸ್​ ಆಗಿದ್ದಾರೆ. ಎಲ್.ಆರ್. ಶಿವರಾಮೇಗೌಡ ಅವರ ಪುತ್ರ ಮಂಜೇಗೌಡ ಮತ್ತು ಇತರರು ಕೂಡ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆ
ಎಲ್​​ಆರ್ ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆ
Anil Kalkere
| Edited By: ವಿವೇಕ ಬಿರಾದಾರ|

Updated on:Feb 16, 2025 | 1:26 PM

Share

ಬೆಂಗಳೂರು, ಫೆಬ್ರವರಿ 16: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)​ ನೇತೃತ್ವದಲ್ಲಿ ಮಾಜಿ ಸಂಸದ, ಮಾಜಿ ಶಾಸಕ ಎಲ್​.ಆರ್​.ಶಿವರಾಮೇಗೌಡ (L. R. Shivarame Gowda) ಕಾಂಗ್ರೆಸ್​ (Congress) ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸ್ವಾಗತಿಸಿದರು. ಎಲ್.ಆರ್. ಶಿವರಾಮೇಗೌಡ ಅವರ ಬೆಂಬಲಿಗರೂ ಕೂಡ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್​ ಸೇರಿದ್ದಾರೆ.

ಎಲ್​ಆರ್​ ಶಿವರಾಮೇಗೌಡ ಅವರು ಇತ್ತೀಚಿಗೆ ಬಿಜೆಪಿ ಸೇರಿದ್ದರು. ಇದೀಗ ಮರಳಿ ಕಾಂಗ್ರೆಸ್​ ಪಕ್ಷ ಸೇರಿಕೊಂಡಿದ್ದಾರೆ. ಕಾಂಗ್ರೆಸ್​ ತೊರೆದು ಆಮ್​ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದ ಬ್ರಿಜೇಶ್​ ಕಾಳಪ್ಪ ಕೂಡ ಮರಳಿ ಮಾತೃ ಪಕ್ಷಕ್ಕೆ ವಾಪಸ್​ ಆಗಿದ್ದಾರೆ.

ಎಲ್​ ಆರ್ ಶಿವರಾಮೇಗೌಡ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ವೇದಿಕೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು. ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇದು ಎಲ್​ ಆರ್​ ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆ ಬಹುತೇಕ ಖಚಿತ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದ್ದವು.

ಇದನ್ನೂ ಓದಿ: ಬೆಂಗಳೂರಿಗೆ ಇನ್ನೂ 6 ಟಿಎಂಸಿ ಕಾವೇರಿ ನೀರು ತರ್ತೇವೆ: ಡಿಸಿಎಂ ಡಿಕೆ ಶಿವಕುಮಾರ್​

ಮಾಜಿ ಸಂಸದ ಜಿ. ಮಾದೇಗೌಡ ಅವರ ಬಗ್ಗೆ ಲಘುವಾಗಿ ಮಾತನಾಡಿ ಜೆಡಿಎಸ್​ನಿಂದ ಉಚ್ಚಾಟನೆಗೊಂಡಿದ್ದ ಎಲ್​ಆರ್ ಶಿವರಾಮೇಗೌಡ ಅವರು 2023ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿಗೆ ರಾಜಿನಾಮೆ ನೀಡಿ ಮತ್ತೆ ಕಾಂಗ್ರೆಸ್​ ಸೇರಿದ್ದಾರೆ. ಪಕ್ಷಾಂತರ ಶಿವರಾಮೇಗೌಡಿಗೆ ಹೊಸದೇನು ಅಲ್ಲ. 1996ರಲ್ಲಿ ಜನತಾ ದಳದಲ್ಲಿದ್ದ ಶಿವರಾಮೇಗೌಡರು 1999ರವೇಳೆಗೆ ಕಾಂಗ್ರೆಸ್​ ಪಕ್ಷ ಸೇರ್ಪಡೆಗೊಂಡಿದ್ದರು.

2009ರಲ್ಲಿ ಬಿಜೆಪಿ ಪಕ್ಷವನ್ನು ಸೇರಿದ್ದರು. ಇದಾದ ಒಂದೇ ವರ್ಷದಲ್ಲಿ ಮತ್ತೆ ಕಾಂಗ್ರೆಸ್​ ಕೈ ಹಿಡಿದಿದ್ದರು. ನಂತರ 2018ರಲ್ಲಿ ಜೆಡಿಎಸ್​ ಸೇರಿಕೊಂಡರು. ಬಳಿಕ, 2023 ಜೆಡಿಎಸ್​ನಿಂದ ಉಚ್ಚಾಟನೆಗೊಂಡ ಬಳಿಕ ಬಿಜೆಪಿ ಸೇರಿ ಕಮಲ ಹಿಡಿದರು. ಇದೀಗ ಮತ್ತೆ ಕಾಂಗ್ರೆಸ್​ಗೆ ಸೇರಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Sun, 16 February 25

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!