AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ನನ್ನದು 8 ಸ್ಕೂಲ್ ಇದೆ. ತಿಂಗಳಿಗೆ 3 ಕೋಟಿ ಸಂಬಳ ಕೊಡುತ್ತೇನೆ. ಮುಂದಿನ ನಾಗಮಂಗಲ ವಿಧಾನಸಭಾ ಚುನಾವಣೆಗೆ 10 ತಿಂಗಳ ಸಂಬಳದಷ್ಟೆ ಹಣಬೇಕು.

ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್
ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ
TV9 Web
| Edited By: sandhya thejappa|

Updated on: Jan 30, 2022 | 9:25 AM

Share

ಮಂಡ್ಯ: ಲೋಕಸಭಾ ಉಪಚುನಾವಣೆಗೆ 30 ಕೋಟಿ ರೂಪಾಯಿ ಖರ್ಚು ಮಾಡಿದ್ದೆ ಎಂಬ ಆಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ (L R Shivarame Gowda) ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ (Viral Audio) ಆಗಿದ್ದು, ವೈರಲ್ ಆದ ಆಡಿಯೋದಲ್ಲಿ ಜೆಡಿಎಸ್ (JDS) ಮಹಿಳೆ ಕಾರ್ಯಕರ್ತೆ ಜೊತೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಂಎಲ್ಸಿ ಚುನಾವಣೆಗೆ 27 ಕೋಟಿ ಖರ್ಚು ಮಾಡಿದ್ದೆ. ಐದು ತಿಂಗಳಿಗೆ ಎಂಪಿ ಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ. ಮುಂದಿನ ನಾಗಮಂಗಲ ವಿಧಾನಸಭ ಚುನಾವಣೆಗೆ 30 ಕೋಟಿ ಖರ್ಚು ಮಾಡುತ್ತೇನೆ ಎಂದು ಮಾತನಾಡಿದ 37 ನಿಮಿಷ 54 ಸೆಂಕೆಡ್ ಆಡಿಯೋ ವೈರಲ್ ಆಗಿದೆ.

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ನನ್ನದು 8 ಸ್ಕೂಲ್ ಇದೆ. ತಿಂಗಳಿಗೆ 3 ಕೋಟಿ ಸಂಬಳ ಕೊಡುತ್ತೇನೆ. ಮುಂದಿನ ನಾಗಮಂಗಲ ವಿಧಾನಸಭಾ ಚುನಾವಣೆಗೆ 10 ತಿಂಗಳ ಸಂಬಳದಷ್ಟೆ ಹಣಬೇಕು. ಅಷ್ಟು ಹಣವನ್ನು ಖರ್ಚು ಮಾಡುತ್ತೇನೆ. ತಮಗೆ ಬೆಂಬಲ ನೀಡಬೇಕು ಎಂದು ಮಹಿಳಾ ಕಾರ್ಯಕರ್ತೆ ಜೊತೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೆ ನಾಗಮಂಗಲ ಕ್ಷೇತ್ರದ ಕೊಪ್ಪಗೆ ಭೇಟಿ ನೀಡಿದ್ದ ಎಲ್ಆರ್ ಶಿವರಾಮೇಗೌಡ, ಅಲ್ಲಿನ ಸಭೆಗೆ ಮಹಿಳಾ ಕಾರ್ಯಕರ್ತೆಗೆ ಆಹ್ವಾನಿಸಲು ಕರೆ ಮಾಡಿದ್ದಾರೆ ಎನ್ನಲಾಗಿದೆ.

ಸದ್ಯ ನಾಗಮಂಗಲ ಜೆಡಿಎಸ್ ಟಿಕೆಟ್ ಮೇಲೆ ಶಿವರಾಮೇಗೌಡ ಕಣ್ಣಿಟ್ಟಿದ್ದಾರೆ. ನಾಗಮಂಗಲದ ಜೆಡಿಎಸ್ ಶಾಸಕರ ವಿರುದ್ಧವೂ ಆಡಿಯೋದಲ್ಲಿ ಚರ್ಚೆ ಮಾಡಿದ್ದಾರೆ. ನಾನು ಎರಡು ಸಲ ಎಂಎಲ್ಎ ಆಗಿದ್ದೇನೆ. ಆತ ಮಾಡಿದ ಕೆಲಸಕ್ಕಿಂತ ತಾತನಂತ ಕೆಲಸ ಮಾಡಬಹುದು. ಸುರೇಶ್ ಗೌಡ ನನಗೆ ಕಳೆದ ಲೋಕಸಭೆ ಟಿಕೆಟ್ ತಪ್ಪಿಸಿದ್ದ. ನಿಖಿಲ್ ಕುಮಾರ್ ಸ್ವಾಮಿ ಚುನಾವಣೆಗೆ ನಿಲ್ಲಿಸಿ ಅವರ ಮನೆಗೆ ಕಂಟಕ ತಂದರೂ, ನನಗುಗೂ ಕಂಟಕ ತಂದರು. ಮುಂದಿನ ಬಾರಿ ಚುನಾವಣೆಗೆ ನಾನು ನಿಂತುಕೊಳ್ಳುತ್ತೇನೆ. ನನಗೆ ಬೆಂಬಲಕೊಡಿ ಎಂದು ಮಾತನಾಡಿರುವುದು ವೈರಲ್ ಆದ ಆಡಿಯೋದಲ್ಲಿದೆ.

ಇದೇ ಆಡಿಯೋದಲ್ಲಿ ಮಾಜಿ ಸಂಸದ ಜಿ ಮಾದೇಗೌಡರ ಬಗ್ಗೆಯೂ ಚರ್ಚೆ ನಡೆದಿದೆ. ಐದು ಬಾರಿ ಕಾಂಗ್ರೆಸ್ನಿಂದ ನಿಂತು ಸೋತಿದ್ದೇನೆ. ಎಲ್ಲವೂ ಕಡಿಮೆ ಅಂತರದಿಂದ ಸೋತಿದ್ದು. ಜಿ ಮಾದೇಗೌಡರಿಗೆ ಎಕ್ಕಡದಲ್ಲಿ ಹೊಡೆದಿದ್ದೆ. ಜಿ. ಮಾದೇಗೌಡರು ಆಗ ಸಂಸದರಾಗಿದ್ದರು. ಅದರಿಂದಲೆ ಜಿ ಮಾದೇಗೌಡರ ವಿರೋಧದಿಂದ ಸೋತೆ ಎಂದು ಮಾತನಾಡಿದ್ದಾರೆ. ಇನ್ನು ಆಡಿಯೋದಲ್ಲಿ ನಾಗಮಂಗಲ ಎಂಎಲ್ಎ ಸುರೇಶ್ ಗೌಡ ಪರವಾಗಿ ಮಹಿಳೆ ಮಾತನಾಡಿದ್ದಾರೆ.

ಇದನ್ನೂ ಓದಿ

ಪರವಿರೋಧ ಚರ್ಚೆ, ವಾಗ್ದಾಳಿ ನಡುವೆ ಪಂಚಮಸಾಲಿ ಸಮಾಜದ 3ನೇ ಪೀಠ ಸ್ಥಾಪನೆಗೆ ಸಿದ್ಧತೆ, ಜಾಗ ಸ್ವಚ್ಛಗೊಳಿಸಲು ಟ್ರ್ಯಾಕ್ಟರ್ ಚಲಾಯಿಸಿದ ಸಂಗನಬಸವಶ್ರೀ

ಹಾಲಿನಲ್ಲಿರುವಷ್ಟೇ ಕ್ಯಾಲ್ಸಿಯಂ ಎಲೆಕೋಸಿನಲ್ಲಿದೆ; ಇದರ ಆರೋಗ್ಯ ಪ್ರಯೋಜನಗಳು ಇಲ್ಲಿದೆ ಗಮನಿಸಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ