AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ನನ್ನದು 8 ಸ್ಕೂಲ್ ಇದೆ. ತಿಂಗಳಿಗೆ 3 ಕೋಟಿ ಸಂಬಳ ಕೊಡುತ್ತೇನೆ. ಮುಂದಿನ ನಾಗಮಂಗಲ ವಿಧಾನಸಭಾ ಚುನಾವಣೆಗೆ 10 ತಿಂಗಳ ಸಂಬಳದಷ್ಟೆ ಹಣಬೇಕು.

ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್
ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ
TV9 Web
| Edited By: sandhya thejappa|

Updated on: Jan 30, 2022 | 9:25 AM

Share

ಮಂಡ್ಯ: ಲೋಕಸಭಾ ಉಪಚುನಾವಣೆಗೆ 30 ಕೋಟಿ ರೂಪಾಯಿ ಖರ್ಚು ಮಾಡಿದ್ದೆ ಎಂಬ ಆಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ (L R Shivarame Gowda) ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ (Viral Audio) ಆಗಿದ್ದು, ವೈರಲ್ ಆದ ಆಡಿಯೋದಲ್ಲಿ ಜೆಡಿಎಸ್ (JDS) ಮಹಿಳೆ ಕಾರ್ಯಕರ್ತೆ ಜೊತೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಂಎಲ್ಸಿ ಚುನಾವಣೆಗೆ 27 ಕೋಟಿ ಖರ್ಚು ಮಾಡಿದ್ದೆ. ಐದು ತಿಂಗಳಿಗೆ ಎಂಪಿ ಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ. ಮುಂದಿನ ನಾಗಮಂಗಲ ವಿಧಾನಸಭ ಚುನಾವಣೆಗೆ 30 ಕೋಟಿ ಖರ್ಚು ಮಾಡುತ್ತೇನೆ ಎಂದು ಮಾತನಾಡಿದ 37 ನಿಮಿಷ 54 ಸೆಂಕೆಡ್ ಆಡಿಯೋ ವೈರಲ್ ಆಗಿದೆ.

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ನನ್ನದು 8 ಸ್ಕೂಲ್ ಇದೆ. ತಿಂಗಳಿಗೆ 3 ಕೋಟಿ ಸಂಬಳ ಕೊಡುತ್ತೇನೆ. ಮುಂದಿನ ನಾಗಮಂಗಲ ವಿಧಾನಸಭಾ ಚುನಾವಣೆಗೆ 10 ತಿಂಗಳ ಸಂಬಳದಷ್ಟೆ ಹಣಬೇಕು. ಅಷ್ಟು ಹಣವನ್ನು ಖರ್ಚು ಮಾಡುತ್ತೇನೆ. ತಮಗೆ ಬೆಂಬಲ ನೀಡಬೇಕು ಎಂದು ಮಹಿಳಾ ಕಾರ್ಯಕರ್ತೆ ಜೊತೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೆ ನಾಗಮಂಗಲ ಕ್ಷೇತ್ರದ ಕೊಪ್ಪಗೆ ಭೇಟಿ ನೀಡಿದ್ದ ಎಲ್ಆರ್ ಶಿವರಾಮೇಗೌಡ, ಅಲ್ಲಿನ ಸಭೆಗೆ ಮಹಿಳಾ ಕಾರ್ಯಕರ್ತೆಗೆ ಆಹ್ವಾನಿಸಲು ಕರೆ ಮಾಡಿದ್ದಾರೆ ಎನ್ನಲಾಗಿದೆ.

ಸದ್ಯ ನಾಗಮಂಗಲ ಜೆಡಿಎಸ್ ಟಿಕೆಟ್ ಮೇಲೆ ಶಿವರಾಮೇಗೌಡ ಕಣ್ಣಿಟ್ಟಿದ್ದಾರೆ. ನಾಗಮಂಗಲದ ಜೆಡಿಎಸ್ ಶಾಸಕರ ವಿರುದ್ಧವೂ ಆಡಿಯೋದಲ್ಲಿ ಚರ್ಚೆ ಮಾಡಿದ್ದಾರೆ. ನಾನು ಎರಡು ಸಲ ಎಂಎಲ್ಎ ಆಗಿದ್ದೇನೆ. ಆತ ಮಾಡಿದ ಕೆಲಸಕ್ಕಿಂತ ತಾತನಂತ ಕೆಲಸ ಮಾಡಬಹುದು. ಸುರೇಶ್ ಗೌಡ ನನಗೆ ಕಳೆದ ಲೋಕಸಭೆ ಟಿಕೆಟ್ ತಪ್ಪಿಸಿದ್ದ. ನಿಖಿಲ್ ಕುಮಾರ್ ಸ್ವಾಮಿ ಚುನಾವಣೆಗೆ ನಿಲ್ಲಿಸಿ ಅವರ ಮನೆಗೆ ಕಂಟಕ ತಂದರೂ, ನನಗುಗೂ ಕಂಟಕ ತಂದರು. ಮುಂದಿನ ಬಾರಿ ಚುನಾವಣೆಗೆ ನಾನು ನಿಂತುಕೊಳ್ಳುತ್ತೇನೆ. ನನಗೆ ಬೆಂಬಲಕೊಡಿ ಎಂದು ಮಾತನಾಡಿರುವುದು ವೈರಲ್ ಆದ ಆಡಿಯೋದಲ್ಲಿದೆ.

ಇದೇ ಆಡಿಯೋದಲ್ಲಿ ಮಾಜಿ ಸಂಸದ ಜಿ ಮಾದೇಗೌಡರ ಬಗ್ಗೆಯೂ ಚರ್ಚೆ ನಡೆದಿದೆ. ಐದು ಬಾರಿ ಕಾಂಗ್ರೆಸ್ನಿಂದ ನಿಂತು ಸೋತಿದ್ದೇನೆ. ಎಲ್ಲವೂ ಕಡಿಮೆ ಅಂತರದಿಂದ ಸೋತಿದ್ದು. ಜಿ ಮಾದೇಗೌಡರಿಗೆ ಎಕ್ಕಡದಲ್ಲಿ ಹೊಡೆದಿದ್ದೆ. ಜಿ. ಮಾದೇಗೌಡರು ಆಗ ಸಂಸದರಾಗಿದ್ದರು. ಅದರಿಂದಲೆ ಜಿ ಮಾದೇಗೌಡರ ವಿರೋಧದಿಂದ ಸೋತೆ ಎಂದು ಮಾತನಾಡಿದ್ದಾರೆ. ಇನ್ನು ಆಡಿಯೋದಲ್ಲಿ ನಾಗಮಂಗಲ ಎಂಎಲ್ಎ ಸುರೇಶ್ ಗೌಡ ಪರವಾಗಿ ಮಹಿಳೆ ಮಾತನಾಡಿದ್ದಾರೆ.

ಇದನ್ನೂ ಓದಿ

ಪರವಿರೋಧ ಚರ್ಚೆ, ವಾಗ್ದಾಳಿ ನಡುವೆ ಪಂಚಮಸಾಲಿ ಸಮಾಜದ 3ನೇ ಪೀಠ ಸ್ಥಾಪನೆಗೆ ಸಿದ್ಧತೆ, ಜಾಗ ಸ್ವಚ್ಛಗೊಳಿಸಲು ಟ್ರ್ಯಾಕ್ಟರ್ ಚಲಾಯಿಸಿದ ಸಂಗನಬಸವಶ್ರೀ

ಹಾಲಿನಲ್ಲಿರುವಷ್ಟೇ ಕ್ಯಾಲ್ಸಿಯಂ ಎಲೆಕೋಸಿನಲ್ಲಿದೆ; ಇದರ ಆರೋಗ್ಯ ಪ್ರಯೋಜನಗಳು ಇಲ್ಲಿದೆ ಗಮನಿಸಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ