AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manpreet Singh Badal: ಕಾಂಗ್ರೆಸ್ ತೊರೆದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಸೇರಿದ ಮನ್‌ಪ್ರೀತ್ ಸಿಂಗ್ ಬಾದಲ್

ರಾಹುಲ್ ಗಾಂಧಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ, ಮನ್‌ಪ್ರೀತ್ ಸಿಂಗ್ ಬಾದಲ್ ತಾನು ಕಾಂಗ್ರೆಸ್ ಪಕ್ಷದಿಂದ ಭ್ರಮನಿರಸನಗೊಂಡಿರುವುದಾಗಿ ಹೇಳಿದ್ದಾರೆ.

Manpreet Singh Badal: ಕಾಂಗ್ರೆಸ್ ತೊರೆದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಸೇರಿದ ಮನ್‌ಪ್ರೀತ್ ಸಿಂಗ್ ಬಾದಲ್
ಮನ್‌ಪ್ರೀತ್ ಸಿಂಗ್ ಬಾದಲ್
TV9 Web
| Edited By: |

Updated on: Jan 18, 2023 | 5:06 PM

Share

ಚಂಡೀಗಢ/ದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್  (Manpreet Singh Badal) ಕಾಂಗ್ರೆಸ್ (Congress) ಪಕ್ಷವನ್ನು ತೊರೆದ ಕೆಲವೇ ಗಂಟೆಗಳ ನಂತರ ಇಂದು(ಬುಧವಾರ) ಬಿಜೆಪಿ (BJP) ಸೇರಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ರಾಹುಲ್ ಗಾಂಧಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ, ಬಾದಲ್ ತಾನು ಕಾಂಗ್ರೆಸ್ ಪಕ್ಷದಿಂದ ಭ್ರಮನಿರಸನಗೊಂಡಿರುವುದಾಗಿ  ಹೇಳಿದ್ದಾರೆ. ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ನಾನು ಹೊಂದಿರುವ ಜವಾಬ್ದಾರಿಗೆ ಪ್ರತಿ ಔನ್ಸ್ ಶಕ್ತಿಯನ್ನು ವಿನಿಯೋಗಿಸಿದ್ದೇನೆ. ನನಗೆ ಈ ಅವಕಾಶಗಳನ್ನು ಒದಗಿಸಿದ್ದಕ್ಕಾಗಿ ಮತ್ತು ಈ ಹಿಂದೆ ನೀವು ನನಗೆ ತೋರಿದ ದಯೆ ಮತ್ತು ಸೌಜನ್ಯಕ್ಕಾಗಿ ನಾನು ನಿಮಗೆ ಧನ್ಯವಾದಗಳು ಎಂದು ಬಾದಲ್ ತಮ್ಮ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ.

ಪಕ್ಷದೊಳಗಿನ ಪ್ರಚಲಿತ ಸಂಸ್ಕೃತಿ ಮತ್ತು ಪ್ರಸ್ತುತ ಹೊತ್ತಲ್ಲಿ ಧಿಕ್ಕರಿಸುವ ಬಯಕೆಯನ್ನು ಗಮನಿಸಿದರೆ, ನಾನು ಇನ್ನು ಮುಂದೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಭಾಗವಾಗಲು ಬಯಸುವುದಿಲ್ಲ ಎಂದು ಅವರು ಹೇಳಿದರು.

ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ ಮನ್‌ಪ್ರೀತ್ ಸಿಂಗ್ ಬಾದಲ್, “ಏಳು ವರ್ಷಗಳ ಹಿಂದೆ ನಾನು ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್ ಅನ್ನು ನಿಮ್ಮ ಪಕ್ಷದೊಂದಿಗೆ ವಿಲೀನಗೊಳಿಸಿದ್ದೇನೆ. ನಾನು ಪಂಜಾಬ್‌ನ ಜನರಿಗೆ ಮತ್ತು ಅದರ ಹಿತಾಸಕ್ತಿಗಳೆರಡಕ್ಕೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ಅನುವು ಮಾಡಿಕೊಡುವ ಶ್ರೀಮಂತ ಇತಿಹಾಸವನ್ನು ಹೊಂದಿರುವ ಸಂಸ್ಥೆಯಲ್ಲಿ ಏಕೀಕರಣಗೊಳ್ಳುವ ಅಪಾರ ಭರವಸೆ ಮತ್ತು ನಿರೀಕ್ಷೆಯೊಂದಿಗೆ ನಾನು ಹಾಗೆ ಮಾಡಿದ್ದೇನೆ. ಆರಂಭಿಕ ಉತ್ಸಾಹವು ಕ್ರಮೇಣ ನಿರಾಶಾದಾಯಕ ಭ್ರಮನಿರಸನಕ್ಕೆ ದಾರಿ ಮಾಡಿಕೊಟ್ಟಿತು” ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು