AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಫಾಕ್ಸ್​​​ಕಾನ್​ ಘಟಕ; ನಾಚಿಕೆ ಬಿಟ್ಟು ಕ್ರೆಡಿಟ್ ತಗೊಳ್ತಿದ್ದೀರಿ, ಕಾಂಗ್ರೆಸ್​ ಪಕ್ಷವನ್ನು ಲೇವಡಿ ಮಾಡಿದ ಬಿಜೆಪಿ

ಫಾಕ್ಸ್​​ಕಾನ್ ಕರ್ನಾಟಕದಲ್ಲಿ ಘಟಕ ಆರಂಭಿಸುವ ಯೋಜನೆ ಹಾಕಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಉತ್ಪಾದನೆ ಆಧಾರಿತ ಭತ್ಯೆ ಯೋಜನೆ (PLI Scheme) ಕಾರಣ ಎಂಬುದು ನಿಮಗೆ ನೆನಪಿರಲಿ. ಈಗ ನಾಚಿಕೆ ಬಿಟ್ಟು ಕ್ರೆಡಿಟ್ ತಗೊಳ್ಳುತ್ತಿದ್ದೀರಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಬೆಂಗಳೂರಿನಲ್ಲಿ ಫಾಕ್ಸ್​​​ಕಾನ್​ ಘಟಕ; ನಾಚಿಕೆ ಬಿಟ್ಟು ಕ್ರೆಡಿಟ್ ತಗೊಳ್ತಿದ್ದೀರಿ, ಕಾಂಗ್ರೆಸ್​ ಪಕ್ಷವನ್ನು ಲೇವಡಿ ಮಾಡಿದ ಬಿಜೆಪಿ
ಬಿಜೆಪಿ
Ganapathi Sharma
|

Updated on: Jun 01, 2023 | 9:05 PM

Share

ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್​​ಕಾನ್ (Foxconn) ದೇವನಹಳ್ಳಿ ಘಟಕದಲ್ಲಿ ಶೀಘ್ರದಲ್ಲೇ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಈ ವಿಚಾರವಾಗಿ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಟ್ವೀಟ್​ಗೆ ಬಿಜೆಪಿ ಕುಹಕವಾಡಿದೆ. ಫಾಕ್ಸ್​​ಕಾನ್ ಕರ್ನಾಟಕದಲ್ಲಿ ಘಟಕ ಆರಂಭಿಸುವ ಯೋಜನೆ ಹಾಕಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಉತ್ಪಾದನೆ ಆಧಾರಿತ ಭತ್ಯೆ ಯೋಜನೆ (PLI Scheme) ಕಾರಣ ಎಂಬುದು ನಿಮಗೆ ನೆನಪಿರಲಿ. ಈಗ ನಾಚಿಕೆ ಬಿಟ್ಟು ಕ್ರೆಡಿಟ್ ತಗೊಳ್ಳುತ್ತಿದ್ದೀರಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಫಾಕ್ಸ್​ಕಾನ್​​ನ ಯೋಜನೆಯೊಂದಿಗೆ ಕರ್ನಾಟಕದಲ್ಲಿ ಉತ್ಪಾದನೆಗೆ ದೊಡ್ಡ ಉತ್ತೇಜನ ದೊರೆತಂತಾಗಿದೆ. ಕಂಪನಿಯು 1.7 ಶತಕೋಟಿ ಡಾಲರ್ ಹೂಡಿಕೆಯೊಂದಿಗೆ ಐಫೋನ್ ಜೋಡಣಾ ಘಟಕವನ್ನು ಆರಂಭಿಸಲಿದ್ದು, ಇದರಿಂದ 50 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. 20 ಮಿಲಿಯನ್ ಸ್ಮಾರ್ಟ್‌ಫೋನ್ ಯೂನಿಟ್‌ಗಳವರೆಗೆ ವಾರ್ಷಿಕ ಸಾಮರ್ಥ್ಯವನ್ನು ಪ್ರಸ್ತಾಪಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಕರ್ನಾಟಕದಲ್ಲಿ ಫಾಕ್ಸ್​​ಕಾನ್ ಘಟಕ ಆರಂಭಿಸುವ ಯೋಜನೆ ಹಾಕಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಉತ್ಪಾದನೆ ಆಧಾರಿತ ಭತ್ಯೆ ಯೋಜನೆ ಕಾರಣ ಎಂಬುದು ನಿಮಗೆ ನೆನಪಿರಲಿ. ಅಂದು ಆ ನಿರ್ಧಾರವನ್ನು ಸ್ವಾಗತಿಸುವ ಬದಲು ನಿಮ್ಮ ಪಕ್ಷವು ಸುಳ್ಳುಗಳನ್ನು ಹೇಳಿ, ನಿಂದನೆ ಮಾಡಿತ್ತು. ಈಗ ನೀವು ನಾಚಿಕೆ ಬಿಟ್ಟು ಬಿಜೆಪಿಯ ಪ್ರಯತ್ನಗಳ ಶ್ರೇಯಸ್ಸನ್ನು ಪಡೆದುಕೊಳ್ಳುತ್ತಿದ್ದೀರಿ. ಬಿಜೆಪಿಯ ಕಠಿಣ ಪರಿಶ್ರಮದ ಕ್ರೆಡಿಟ್ ತೆಗೆದುಕೊಳ್ಳುವುದೇ ಕಾಂಗ್ರೆಸ್​​ನ ಲಕ್ಷಣ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ: ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪನಿಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂಬಿ ಪಾಟೀಲ್

2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಫಾಕ್ಸ್​ಕಾನ್ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದ್ದಾರೆ. ಇದರ ಬೆನ್ನಲ್ಲೇ, ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದರು.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?