AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಮನೆಯಲ್ಲಿರುವವರ ಪಾಲಿಗೆ ಉಚಿತ ವಿದ್ಯುತ್ ಗಗನ ಕುಸುಮ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಗೃಹಜ್ಯೋತಿ(Gruha jyothi) ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ‘ನದಿ ದಾಟಿದ ಮೇಲೆ ಅಂಬಿಗ ಯಾಕೆಂಬ ಧೋರಣೆಯಲ್ಲೀಗ ಸಿದ್ದರಾಮಯ್ಯ(Siddaramaiah) ಸರ್ಕಾರವಿದೆ ಎಂದು ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.

ಬಾಡಿಗೆ ಮನೆಯಲ್ಲಿರುವವರ ಪಾಲಿಗೆ ಉಚಿತ ವಿದ್ಯುತ್ ಗಗನ ಕುಸುಮ:  ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಸಿದ್ದರಾಮಯ್ಯ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 09, 2023 | 12:18 PM

Share

ಬೆಂಗಳೂರು: ಗೃಹಜ್ಯೋತಿ(Gruha jyothi) ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ(BJP) ವಾಗ್ದಾಳಿ ನಡೆಸಿದ್ದು, ‘ನದಿ ದಾಟಿದ ಮೇಲೆ ಅಂಬಿಗ ಯಾಕೆಂಬ ಧೋರಣೆಯಲ್ಲೀಗ ಸಿದ್ದರಾಮಯ್ಯ(Siddaramaiah) ಸರ್ಕಾರವಿದೆ. ಬದುಕು ಕಟ್ಟಿಕೊಂಡ ಹೆಚ್ಚಿನವರು ಬಾಡಿಗೆ ಮನೆಗಳಲ್ಲಿ ವಾಸವಾಗಿರುತ್ತಾರೆ. ಬಾಡಿಗೆ ಮನೆಯಲ್ಲಿರುವವರ ಪಾಲಿಗೆ ಉಚಿತ ವಿದ್ಯುತ್ ಗಗನ ಕುಸುಮವಾಗಿದೆ. ಅಷ್ಟೇ ಅಲ್ಲ ಹೊಸದಾಗಿ ಮನೆ ಕಟ್ಟಿದವರಿಗೆ ಈ ಯೋಜನೆ ಅಸ್ಪೃಶ್ಯ. ಉಚಿತ ಬಿಡಿ, ಮೊದಲು ವಿದ್ಯುತ್ ಪೂರೈಸಿ ಎಂದು ಜನ ಶಾಪ ಹಾಕುತ್ತಿದ್ದಾರೆ ಎಂದು ಟ್ವೀಟ್​ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫ್ರೀ ವಿದ್ಯುತ್ ಯೋಜನೆ ಬಗ್ಗೆ ವಿವರಣೆ ನೀಡಿದ್ದ ಸಚಿವ ಕೆಜೆ ಜಾರ್ಜ್

ರಾಜ್ಯದಲ್ಲಿ 200 ಯೂನಿಟ್​​ಗಿಂತ ಕಡಿಮೆ ವಿದ್ಯುತ್​ ಬಳಕೆದಾರರು 2.16 ಕೋಟಿ ಜನರಿದ್ದಾರೆ. 2 ಲಕ್ಷ ಗ್ರಾಹಕರು ಮಾತ್ರ 200 ಯೂನಿಟ್​​ಗಿಂತ ಹೆಚ್ಚಾಗಿ ಬಳಕೆ ಮಾಡುತ್ತಾರೆ. ಗೃಹಜ್ಯೋತಿ ಯೋಜನೆ ಲಾಭ ಪಡೆಯಲು ಅರ್ಜಿ ಹಾಕಬೇಕು. ಸೇವಾ ಸಿಂಧು ಆ್ಯಪ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಹಾಗೇ ಒಂದು ಪ್ರತ್ಯೇಕ ಆ್ಯಪ್ ಬಿಡುಗಡೆ ‌ಮಾಡುತ್ತೇವೆ. ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್​ ಹೇಳಿದ್ದರು.

ಇದನ್ನೂ ಓದಿ:Gruha Jyothi Scheme: ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಚಾಲನೆಗೆ ದಿನಾಂಕ ಫಿಕ್ಸ್, ಎಲ್ಲಿ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ

ಇನ್ನು ಬೆಂಗಳೂರಿನ ಬೆಸ್ಕಾಂ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಅವರು ಹೊಸ ಮನೆ ಕಟ್ಟಿದವರಿಗೆ, ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಾಡಿಗೆ ಇರುವವರಿಗೆ ಸದ್ಯಕ್ಕೆ ಯೋಜನೆ ಸಿಗಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಇನ್ನು 2 ದಿನದಲ್ಲಿ ಸ್ಪಷ್ಟನೆ ಕೊಡುತ್ತೇವೆ ಎಂದಿದ್ದರು. ಜೊತೆಗೆ ಬೇರೆ ರಾಜ್ಯದಿಂದ ಬಂದು, ಇಲ್ಲಿ ವಾಸವಾದವರಿಗೂ ಈ ಸೌಲಭ್ಯ ನೀಡಲಾಗುತ್ತದೆ. ಆದರೆ ಆಧಾರ್ ವಿಳಾಸ ಇಲ್ಲಿ ಇರುವಂತೆ ಬದಲಾಯಿಸಿಕೊಳ್ಳಬೇಕು. ಇಲ್ಲವಾದಲ್ಲಿ ಬಾಡಿಗೆ ಕರಾರುಪತ್ರ ಕಡ್ಡಾಯವಾಗಿ ಇರಬೇಕು ಎಂದು ಹೇಳಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ