AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ, ವಿಮಾನ ನಿಲ್ದಾಣ, ಬಂದರು ಹೀಗೆ ಎಲ್ಲ ಯೋಜನೆಗಳನ್ನು ಅದಾನಿಗೆ ಕೊಡುತ್ತಿರುವುದೇಕೆ?: ಮಲ್ಲಿಕಾರ್ಜುನ ಖರ್ಗೆ

Mallikarjun Kharge: ದೆಹಲಿಯಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಮೋದಿ ಸರ್ಕಾರವು ಪ್ರಜಾಪ್ರಭುತ್ವದ ಬಗ್ಗೆ ಸಾಕಷ್ಟು ಮಾತನಾಡುತ್ತದೆ. ಆದರೆ ಅವರು ಹೇಳಿದ್ದು ಅವರ ಕಾರ್ಯಗಳಲ್ಲಿ ಕಾಣಿಸುತ್ತಿಲ್ಲ ಎಂದಿದ್ದಾರೆ.

ರಸ್ತೆ, ವಿಮಾನ ನಿಲ್ದಾಣ, ಬಂದರು ಹೀಗೆ ಎಲ್ಲ ಯೋಜನೆಗಳನ್ನು ಅದಾನಿಗೆ ಕೊಡುತ್ತಿರುವುದೇಕೆ?: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 06, 2023 | 1:53 PM

Share

ದೆಹಲಿ: ಹಳೆ ರೈಲುಗಳಲ್ಲಿ ಹೊಸ ಇಂಜಿನ್ ಹಾಕುವುದು ಮತ್ತು ಸುದೀರ್ಘ ಭಾಷಣದ ಜೊತೆಗೆ ಅದಕ್ಕೆ ಚಾಲನೆ ನೀಡುವುದು ಬಿಟ್ಟರೆ ಅವರು ಬೇರೆ ಕೆಲಸ ಮಾಡಲಿಲ್ಲ. ರೈಲಿಗೆ ಚಾಲನೆ ನೀಡಲು ನಿಮ್ಮಲ್ಲಿ ಸ್ಥಳೀಯ ಸಂಸದರು ಇರುವಾಗ ಪ್ರಧಾನಿ ಮೋದಿಯವರ ಅಗತ್ಯವೇನಿದೆ ಕಾಂಗ್ರೆಸ್ (Congress) ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಖರ್ಗೆ, ನರೇಂದ್ರ ಮೋದಿ (Narendra Modi) ಸರ್ಕಾರವು ಪ್ರಜಾಪ್ರಭುತ್ವದ ಬಗ್ಗೆ ಸಾಕಷ್ಟು ಮಾತನಾಡುತ್ತದೆ. ಆದರೆ ಅವರು ಹೇಳಿದ್ದು ಅವರ ಕಾರ್ಯಗಳಲ್ಲಿ ಕಾಣಿಸುತ್ತಿಲ್ಲ ಎಂದಿದ್ದಾರೆ.

ವಿಮಾನ ನಿಲ್ದಾಣ, ರಸ್ತೆ, ಬಂದರುಗಳವರೆಗೆ ಎಲ್ಲಾ ಯೋಜನೆಗಳನ್ನು ಅದಾನಿಗೆ ನೀಡಲಾಗಿದೆ, ಏಕೆ?  ಇದು ಬಿಜೆಪಿ ಕೇವಲ ಒಬ್ಬ ವ್ಯಕ್ತಿ ಶ್ರೀಮಂತರಾಗಲು ಬಯಸುತ್ತದೆ ಎಂಬುದನ್ನು ತೋರಿಸುತ್ತದೆ. ಅದಾನಿ ಶ್ರೀಮಂತರಾಗಬೇಕು ಎಂಬುದನ್ನು ಬಿಜೆಪಿ ಬಯಸುತ್ತಿದೆ. 50 ಲಕ್ಷ ಕೋಟಿ ಬಜೆಟ್ ಅನ್ನು ಕೇವಲ 12 ನಿಮಿಷಗಳಲ್ಲಿ ಅಂಗೀಕರಿಸಲಾಯಿತು. ವಿರೋಧ ಪಕ್ಷಗಳಿಗೆ ಯಾವುದೇ ಆಸಕ್ತಿಯಿಲ್ಲ ಎಂದು ಅವರು ಯಾವಾಗಲೂ ಹೇಳುತ್ತಾರೆ. ಆದರೆ ನಾವು ಮಾತನಾಡಲು ಎದ್ದಾಗಲೆಲ್ಲ ಅವರು ನಮ್ಮ ಬಾಯ್ಮುಚ್ಚಿಸುತ್ತಾರೆ.ಆಡಳಿತ ಪಕ್ಷವೇ ಗೊಂದಲ ಸೃಷ್ಟಿಸುವುದನ್ನು ನನ್ನ ಇಡೀ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ ಹೇಳಿದ್ದಾರೆ.

ಸಂಸತ್ ಕಲಾಪ ಸ್ಥಗಿತವಾಗುವುದಕ್ಕೆ ಆಡಳಿತ ಪಕ್ಷವನ್ನು ದೂಷಿಸಿದ ಖರ್ಗೆ, ಆಡಳಿತ ಪಕ್ಷವು ವಿರೋಧ ಪಕ್ಷಗಳಿಗೆ ಮಾತನಾಡಲು ಬಿಡಲಿಲ್ಲ ಎಂದು ಹೇಳಿದ್ದಾರೆ. ಜೆಪಿಸಿ ಆರಂಭಿಸಿದರೆ ಆಡಳಿತ ಪಕ್ಷಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ, ಹೀಗಿದ್ದರೂ ಜೆಪಿಸಿ ರಚಿಸಲು ಏಕೆ ಹೆದರುತ್ತಾರೆ ಎಂದು ಖರ್ಗೆ ಪ್ರಶ್ನಿಸಿದರು. ಜೆಪಿಸಿ ರಚನೆ ಮಾಡದಿರುವ ಆಡಳಿತ ಪಕ್ಷದ ನಿರ್ಧಾರದ ಹಿಂದೆ ಏನೋ ಒಂದು ಇದೆ ಎಂದು ಖರ್ಗೆ ಸಂದೇಹ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್​? ಇಲ್ಲಿದೆ ಅಚ್ಚರಿ ಸಂಗತಿಗಳು 

ಬಿಜೆಪಿಯ ಅಮ್ರೇಲಿ ಸಂಸದರನ್ನು ಸ್ಥಳೀಯ ನ್ಯಾಯಾಲಯ ಮೂರು ವರ್ಷಗಳ ಕಾಲ ದೋಷಿ ಎಂದು ಘೋಷಿಸಿದೆ. ಆದರೆ ತಕ್ಷಣವೇ ಅವರನ್ನು ಅನರ್ಹಗೊಳಿಸಲಿಲ್ಲ ಎಂದು ಸಂಸದರ ಅನರ್ಹತೆ ವಿಚಾರವನ್ನೂ ಖರ್ಗೆ ಮಾತನಾಡಿದ್ದಾರೆ. ಬಿಜೆಪಿ ಸರ್ಕಾರವು ಸಂಸತ್ತಿನಲ್ಲಿ ಅದಾನಿ ವಿಷಯದ ಬಗ್ಗೆ ಉತ್ತರಿಸಲಿಲ್ಲ. ಅದರ ಬದಲು ಬ್ರಿಟನ್‌ನಲ್ಲಿ ಮಾಡಿದ ಹೇಳಿಕೆಗಳ ಬಗ್ಗೆ ರಾಹುಲ್ ಗಾಂಧಿಯವರ ಕ್ಷಮೆಯಾಚನೆಗೆ ಒತ್ತಾಯಿಸುವ ಮೂಲಕ ಗಮನವನ್ನು ಬೇರೆಡೆಗೆ ತಿರುಗಿಸಿತು ಎಂದು ಖರ್ಗೆ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Thu, 6 April 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!