AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಮತ್ತಷ್ಟು ವಿಳಂಬ: ಶಾಸಕರಿಗಷ್ಟೇ ಪಟ್ಟ ಕಟ್ಟೋದು ಬೇಡ ಎಂದ ಕಾಂಗ್ರೆಸ್ ಹೈಕಮಾಂಡ್

ಮೊದಲ ಪಟ್ಟಿಯಲ್ಲಿ ಕೆಲ ಕಾರ್ಯಕರ್ತರಿಗೂ ಅವಕಾಶ ನೀಡಲು ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ. ಹೀಗಾಗಿ ಶಾಸಕರ ಜೊತೆಗೆ ಕಾರ್ಯಕರ್ತರ ಹೆಸರನ್ನು ಪಟ್ಟಿಯಲ್ಲಿ ಸೇರಿಸುವಂತೆ ಸೂಚನೆ‌ ನೀಡಿದ್ದಾರೆ. ಹೀಗಾಗಿ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಇನ್ನು ಒಂದು ವಾರ ವಿಳಂಬವಾಗುವ ಸಾಧ್ಯತೆ ಇದೆ.

ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಮತ್ತಷ್ಟು ವಿಳಂಬ: ಶಾಸಕರಿಗಷ್ಟೇ ಪಟ್ಟ ಕಟ್ಟೋದು ಬೇಡ ಎಂದ ಕಾಂಗ್ರೆಸ್ ಹೈಕಮಾಂಡ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
ಹರೀಶ್ ಜಿ.ಆರ್​.
| Edited By: |

Updated on:Dec 21, 2023 | 6:56 AM

Share

ನವದೆಹಲಿ, ಡಿಸೆಂಬರ್ 21: ದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಕೊನೆಗೂ ನಿಗಮ ಮಂಡಳಿ ನೇಮಕ (Corporation Board Chairman) ಪ್ರಕ್ರಿಯೆಯನ್ನು ಬುಧವಾರ ಅಂತಿಮಗೊಳಿಸಿದ್ದರು. ಆದರೆ, ಅದಕ್ಕೀಗ ಕಾಂಗ್ರೆಸ್ ಹೈಕಮಾಂಡ್ (Congress high command) ಬ್ರೇಕ್ ಹಾಕಿದೆ. ನಿಗಮ ಮಂಡಳಿ ನೇಮಕ ವಿಚಾರವಾಗಿಯೇ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸರಣಿ ಸಭೆ ನಡೆಸಿದ್ದರು. ಬಳಿಕ ಹೈಕಮಾಂಡ್​​ಗೆ ಪಟ್ಟಿ ರವಾನಿಸಿದ್ದಾರೆ. ಆದರೆ ಹೈಕಮಾಂಡ್ ನಾಯಕರು ಸಿಎಂ, ಡಿಸಿಎಂ ಕಳುಹಿಸಿದ ಪಟ್ಟಿಯನ್ನು ತಡೆಹಿಡಿದಿದ್ದಾರೆ.

ಸಿಎಂ, ಡಿಸಿಎಂ‌ ಕಳುಹಿಸಿದ ಪಟ್ಟಿಯನ್ನು ಹೈಕಮಾಂಡ್ ನಾಯಕರು ತಡೆಹಿಡಿಯಲು ಕಾರಣವಿದೆ. ಸಿಎಂ ಹಾಗೂ ಡಿಸಿಎಂ ಕಳುಹಿಸಿದ ಮೊದಲ ಪಟ್ಟಿಯಲ್ಲಿ ಕೇವಲ ಶಾಸಕರ ಹೆಸರಿರುವುದನ್ನು ನೋಡಿದ ರಾಹುಲ್ ಗಾಂಧಿ, ಕೇವಲ ಶಾಸಕರಿಗೆ ಮಾತ್ರ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ‌.

ಮೊದಲ ಪಟ್ಟಿಯಲ್ಲಿ ಕೆಲ ಕಾರ್ಯಕರ್ತರಿಗೂ ಅವಕಾಶ ನೀಡಲು ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ. ಹೀಗಾಗಿ ಶಾಸಕರ ಜೊತೆಗೆ ಕಾರ್ಯಕರ್ತರ ಹೆಸರನ್ನು ಪಟ್ಟಿಯಲ್ಲಿ ಸೇರಿಸುವಂತೆ ಸೂಚನೆ‌ ನೀಡಿದ್ದಾರೆ. ಹೀಗಾಗಿ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಇನ್ನು ಒಂದು ವಾರ ವಿಳಂಬವಾಗುವ ಸಾಧ್ಯತೆ ಇದೆ.

ಹೈಕಮಾಂಡ್ ನಾಯಕರ‌ ಜೊತೆ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾವು ಕಳುಹಿಸಿದ ಪಟ್ಟಿಯನ್ನು ಹೈಕಮಾಂಡ್ ನಾಯಕರು ಇನ್ನೂ ನೋಡಿಲ್ಲ, ನೋಡಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದಾರೆ.‌ ಎರಡು ಮೂರು ದಿನಗಳಲ್ಲಿ ಹೈಕಮಾಂಡ್ ನಾಯಕರು ಪ್ರತಿಕ್ರಿಯೆ ನೀಡಬಹುದು. ಆ ಬಳಿಕ ಪಟ್ಟಿ ಬಿಡುಗಡೆ ಬಗ್ಗೆ ತಿರ್ಮಾನ ಮಾಡಲಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ದಿಲ್ಲೀಲಿ ತಡರಾತ್ರಿವರೆಗಿನ ಸಿಎಂ-ಡಿಸಿಎಂ ಸಭೆ ಸಕ್ಸಸ್: ನಿಗಮ-ಮಂಡಳಿ ಪಟ್ಟಿ ಫೈನಲ್‌

ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನಲ್ಲೂ ಹಲವು ಸಭೆ ನಡೆಸಿ ಪಟ್ಟಿ ತಯಾರಿ ಮಾಡಲಾಗಿತ್ತು. ನಮ್ಮ ಪಟ್ಟಿಯನ್ನು ಹೈಕಮಾಂಡ್ ಗೆ ನೀಡಲಾಗಿದೆ. ಚರ್ಚೆ ನಡೆಸಲಾಗಿದೆ, ಶೀಘ್ರದಲ್ಲಿ ವರಿಷ್ಠರು ತಿರ್ಮಾನ ತೆಗೆದುಕೊಳ್ಳಬಹುದು, ಕಾರ್ಯಕರ್ತರಿಗೂ ಅವಕಾಶ ನೀಡಲಾಗುವುದು. ಮೊದಲಿನಿಂದಲೂ ಈ ಪ್ರಸ್ತಾಪ ಇದೆ. ಕಾರ್ಯಕರ್ತರಿಗೆ ಅವಕಾಶ ನೀಡಲು ನಮ್ಮ ವಿರೋಧ ಏನಿಲ್ಲ. ಪಟ್ಟಿ ಬಿಡುಗಡೆ ಬಗ್ಗೆ ಹೈಕಮಾಂಡ್ ನಾಯಕರು ನಿರ್ಧರಿಸಲಿದ್ದಾರೆ ಎಂದಿದ್ದಾರೆ.

ಹೈಕಮಾಂಡ್ ನಾಯಕರ ಜೊತೆಗಿನ ಮೀಟಿಂಗ್​​ನಲ್ಲಿ ಸಿಎಂ, ಡಿಸಿಎಂ ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದಾರೆ. 22ರ ಒಳಗೆ ಅಭ್ಯರ್ಥಿಗಳ ಆಯ್ಕೆ ಕುರಿತು ವರದಿ ಸಲ್ಲಿಸುವಂತೆ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ಉಸ್ತುವಾರಿಗಳು ಮೂರು ಅಭ್ಯರ್ಥಿಗಳ ಹೆಸರು ಸೂಚಿಸಬೇಕು, ಆ ಪಟ್ಟಿಯನ್ನು ಹೈಕಮಾಂಡ್​​ಗೆ ರವಾನಿಸಲಿದ್ದು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:50 am, Thu, 21 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ