AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL card holders | ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ TV ಬೇಕು.. TVಯೇ ಇರಬಾರದು ಅಂದ್ರೆ ಹೇಗೆ? ಉಮೇಶ್ ಕತ್ತಿಗೆ ಸೋಮಶೇಖರ್ ರೆಡ್ಡಿ ಪ್ರಶ್ನೆ

G Somashekar Reddy: ಸಾಲಾ ಮಾಡಿಯಾದರೂ ಜನ ಬೈಕ್ ತೆಗೆದುಕೊಳ್ಳುತ್ತಾರೆ. ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ ಟಿವಿ ಬೇಕು. ಟಿವಿಯೇ ಇರಬಾರದು ಎನ್ನುವುದನ್ನು ನಾವು ವಿರೋಧಿಸುತ್ತೇವೆ. ನಿಜವಾದ ಬಡವರನ್ನು ಆರ್ಥಿಕ ಮಟ್ಟದಿಂದ ಗುರುತಿಸಬೇಕೆಂದರು.

BPL card holders | ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ TV ಬೇಕು.. TVಯೇ ಇರಬಾರದು ಅಂದ್ರೆ ಹೇಗೆ? ಉಮೇಶ್ ಕತ್ತಿಗೆ ಸೋಮಶೇಖರ್ ರೆಡ್ಡಿ ಪ್ರಶ್ನೆ
ಸೋಮಶೇಖರ್ ರೆಡ್ಡಿ
sandhya thejappa
|

Updated on:Feb 15, 2021 | 3:12 PM

Share

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು ಬಿಪಿಎಲ್ ಕಾರ್ಡನ್ನು ರದ್ದು ಪಡಿಸಲಾಗುತ್ತದೆ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಬಿಜೆಪಿ ಸೋಮಶೇಖರ ರೆಡ್ಡಿ ಮನೆ ಮನೆ ಸಮೀಕ್ಷೆ ನಡೆಸಿದರೆ ನಕಲಿ ಬಿಪಿಎಲ್ ಕಾರ್ಡ್​ದಾರರನ್ನು ಪತ್ತೆ ಮಾಡಬಹುದು ಎಂದರು. ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆಯಾಗಿರುವುದು ಗೊತ್ತಿಲ್ಲ. ಇಂತಹ ನಿಯಮಗಳ ವಿರುದ್ಧ ಹೋರಾಟ ಮಾಡುತ್ತೇವೆ. ನಾವು ಬಿಜೆಪಿಯವರಾದರೂ ಸಹ ಹೋರಾಟ ಮಾಡುತ್ತೇವೆ. ಯಾರೇ ಆಗಲಿ ಸ್ವಂತ ನಿರ್ಧಾರ ಜನರ ಮೇಲೆ ಹೇರಬಾರದು. ಸ್ವಂತ ನಿರ್ಧಾರಗಳು ತೆಗೆದುಕೊಂಡರೆ ಈ ರೀತಿಯಾಗುತ್ತದೆ. ಸಿಎಂ ಗಮನಕ್ಕೆ ತರದೆ ನಿರ್ಧಾರ ಕೈಗೊಂಡರೆ ತಪ್ಪಾಗುತ್ತದೆ. ಸಚಿವರ ನಿರ್ಧಾರ ಬಡವರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಸಾಮಾನ್ಯವಾಗಿ ಟಿವಿ, ಫ್ರಿಡ್ಜ್ ಎಲ್ಲರ ಮನೆಯಲ್ಲೂ ಇರುತ್ತದೆ. ಸಾಲ ಮಾಡಿಯಾದರೂ ಜನ ಬೈಕ್ ತೆಗೆದುಕೊಳ್ಳುತ್ತಾರೆ. ಹೀಗಾಗಿ ಇಂತಹ ನಿಯಮಗಳನ್ನು ಮಾಡಿದರೆ ತಪ್ಪಾಗುತ್ತದೆ. ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ ಟಿವಿ ಬೇಕು. ಟಿವಿಯೇ ಇರಬಾರದು ಎನ್ನುವುದನ್ನು ನಾವು ವಿರೋಧಿಸುತ್ತೇವೆ. ನಿಜವಾದ ಬಡವರನ್ನು ಆರ್ಥಿಕ ಮಟ್ಟದಿಂದ ಗುರುತಿಸಬೇಕೆಂದರು.

ಆನಂದ್ ಸಿಂಗ್ ವಿರುದ್ಧ ಸೋಮಶೇಖರ್ ರೆಡ್ಡಿ ಕಿಡಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಬೇಕು. ಯಾವುದೇ ಕಾರಣಕ್ಕೂ ಆನಂದ್ ಸಿಂಗ್ ಬಳ್ಳಾರಿ ಉಸ್ತುವಾರಿ ಆಗುವುದಕ್ಕೆ ನಾವು ಬಿಡಲ್ಲ. ಈಗಾಗಲೇ ಎಲ್ಲ ಶಾಸಕರು ಸಿಎಂ ಗೆ ಪತ್ರ ಬರೆಯುತ್ತಿದ್ದೇವೆ. ಈಗಾಗಲೇ ಬಳ್ಳಾರಿ ವಿಭಜನೆ ವಿರೋಧಿಸಿ ಕೆಲವರು ಕೋರ್ಟ್​ಗೆ ಹೋಗಿದ್ದಾರೆ. ನಾವು ಕೂಡ ಬಳ್ಳಾರಿ ವಿಭಜನೆ ಆದೇಶ ವಾಪಸ್ಸು ಪಡೆಯುವಂತೆ ಶೀಘ್ರವೇ ಸಿಎಂ ಭೇಟಿ ಮಾಡುತ್ತೇವೆ. ಸಿಎಂ ಯಡಿಯೂರಪ್ಪ ಇದಕ್ಕೆ ಸ್ಪಂಧಿಸಿ ಬಳ್ಳಾರಿ ವಿಭಜನೆ ಆದೇಶ ವಾಪಸ್ಸು ಪಡೆಯುವ ವಿಶ್ವಾಸ ಇದೆ. ಆನಂದ್ ಸಿಂಗ್ ಬಳ್ಳಾರಿ ಉಸ್ತುವಾರಿ ಬಿಟ್ಟು, ವಿಜಯನಗರ ಉಸ್ತುವಾರಿಯಾಗಲಿ. ಜಿಲ್ಲೆ ವಿಭಜಿಸಿ ಬಳ್ಳಾರಿಯಲ್ಲಿ ಇರುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: Raghavendra Sarvam Fraud Case ಯುವರಾಜನ ಹಾದಿಯಲ್ಲೇ ಮತ್ತೊಬ್ಬ ಸೆಲೆಬ್ರಿಟಿ ವಂಚಕನ ವಿರುದ್ಧ ಶಂಕರಪುರ ಠಾಣೆಯಲ್ಲಿ ಕೇಸ್ ದಾಖಲು

Published On - 1:33 pm, Mon, 15 February 21

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ