AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್ ಶೆಟ್ಟರ್​ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಇದೀಗ ಜರ್ನಾದನ ರೆಡ್ಡಿ ಸರದಿ: ಯಡಿಯೂರಪ್ಪ ಸುಳಿವು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಿಟ್ಟು ಹೋಗಿರುವ ಹಲವರನ್ನು ವಾಪಸ್ ಕರೆತರುವ ಪ್ರಯತ್ನಗಳು ನಡೆದಿವೆ. ಮೊನ್ನೇ ಅಷ್ಟೇ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಬಿಜೆಪಿಗೆ ವಾಪಸ್ ಆದ ಬೆನ್ನಲ್ಲೇ ಇದೀಗ ಗಾಲಿ ಜನಾರ್ದನ ರೆಡ್ಡಿ ಸರದಿ. ಈ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದೇನು ಎನ್ನುವುದನ್ನು ನೋಡಿ.

ಜಗದೀಶ್ ಶೆಟ್ಟರ್​ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಇದೀಗ  ಜರ್ನಾದನ ರೆಡ್ಡಿ ಸರದಿ: ಯಡಿಯೂರಪ್ಪ ಸುಳಿವು
TV9 Web
| Edited By: |

Updated on: Jan 28, 2024 | 5:17 PM

Share

ಬಳ್ಳಾರಿ, (ಜನವರಿ 28): ಪಕ್ಷ ಬಿಟ್ಟು ಹೋಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಅವರನ್ನು ವಾಪಸ್ ಬಿಜೆಪಿಗೆ ಸೆಳೆಯಾಲಾಗಿದೆ. ಇದರ ಬೆನ್ನಲ್ಲೇ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿರುವ ಕೆಲ ನಾಯಕರುಗಳನ್ನು ಘರ್ ವಾಪಸಿ ಮಾಡಿಕೊಳ್ಳಲು ಬಿಜೆಪಿ ನಾಯಕರು ಕಸರತ್ತು ನಡೆಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಕೆಆರ್​ಪಿಸಿ ಸಂಸ್ಥಾಪಕ, ಶಾಸಕ ಜನಾರ್ದನ ರೆಡ್ಡಿಯನ್ನ (Gali Janardhana Reddy) ಮರಳಿ ಬಿಜೆಪಿಗೆ ಕರೆತರಲು ತೆರೆಮರೆ ಪ್ರಯತ್ನಗಳು ನಡೆದಿದ್ದು, ಗೆಳೆಯ ಶ್ರೀರಾಮುಲು ಮೂಲಕ ರೆಡ್ಡಿ ಘರವಾಪ್ಸಿ ಮಾಡುತ್ತಾರೆ ಎನ್ನುವ ಚರ್ಚೆಗಳು ನಡೆದಿವೆ. ಇನ್ನು ರೆಡ್ಡಿ ವಾಪಸ್ ಬಿಜೆಪಿಗೆ ಆಗಮನವಾಗುತ್ತಿರುವ ಬಗ್ಗೆ ಸ್ವತಃ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಸುಳಿವು ನೀಡಿದ್ದಾರೆ.

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ , ವಿಧಾನ ಪರಿಷತ್‌ ಮಾಜಿ ಸದಸ್ಯ ಆಯನೂರು ಮಂಜುನಾಥ್ (Ayanur Manjunath) ಬಿಜೆಪಿಗೆ ವಾಪಸ್‌ ಆಗುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬಿಎಸ್​ವೈ, ಸಾಕಷ್ಟು ಜನ ಬಿಜೆಪಿಗೆ ಮತ್ತೆ ವಾಪಸ್‌ ಬರುತ್ತಿದ್ದಾರೆ. ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಯಾರು ಪಕ್ಷವನ್ನು ಬಿಟ್ಟು ಹೋಗಿದ್ದಾರೋ ಅವರು ಮತ್ತೆ ಪಕ್ಷ ಸೇರ್ಪಡೆಯಾಗುತ್ತಾರೆ. ಬಿಜೆಪಿಗೆ ಹೊಸಬರು ಕೂಡ ಬರುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ರೆಡ್ಡಿ ಬಿಜೆಪಿ ಸೇರುವ ಬಗ್ಗೆ ಸಹೋದರ ಹೇಳಿದ್ದೇನು?

ಇನ್ನು ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯಿಸಿರುವ ಸಹೋದರ ಸೋಮಶೇಖರ್ ರೆಡ್ಡಿ,TP, ZP ಎಲ್ಲ ಚುನಾವಣೆಗೆ ರೆಡ್ಡಿ ಬಂದ್ರೆ ಪ್ಲಸ್ ಆಗುತ್ತೆ. ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷಕ್ಕೆ ಜರ್ನಾದನ ರೆಡ್ಡಿ ಬರುತ್ತಾರೆ. ನಾನು ಜರ್ನಾದನ ರೆಡ್ಡಿಯನ್ನ ಸಂಪರ್ಕ ಮಾಡಿಲ್ಲ. ದೊಡ್ಡ ದೊಡ್ಡ ನಾಯಕರು ಜರ್ನಾದನ ರೆಡ್ಡಿಯನ್ನ ಸಂಪರ್ಕ ಮಾಡಿದ್ದಾರೆ. ಶೀಘ್ರದಲ್ಲಿ ಪಕ್ಷಕ್ಕೆ ಬರುವ ನಿರೀಕ್ಷೆ ಇದೆ ಎಂದು ಸುಳಿವು ನೀಡಿದರು.

ಜರ್ನಾದನ ರೆಡ್ಡಿ ಬಿಜೆಪಿಗೆ ಬಂದ್ರೆ ಮತ್ತೆ ಪಕ್ಷಕ್ಕೆ ಬಲ ಬರುತ್ತೆ. ಪಕ್ಷ ಬೇರೆ ಮಾಡಿದಕ್ಕೆ ಮಾತ್ರ ಜರ್ನಾದನ ರೆಡ್ಡಿಯನ್ನ ವಿರೋಧ ಮಾಡಿದ್ದೆವೆ. ವೈಯಕ್ತಿಕ ದ್ವೇಷ ಇಲ್ಲ. ಜರ್ನಾದನ ರೆಡ್ಡಿ ಮರಳಿ ಬಿಜೆಪಿಗೆ ಬಂದ್ರೆ ಖುಷಿ ಆಗುತ್ತೆ. ಬಿಜೆಪಿ ಪಕ್ಷ ದೊಡ್ಡ ಮಟ್ಟಕ್ಕೆ ಬೆಳಿಬೇಕು. ರೆಡ್ಡಿ ಬಂದ್ರೆ ಮುಂಬರುವ ಲೋಕಸಭಾ ಚುನಾವಣೆಗೆ ಪ್ಲಸ್ ಆಗುತ್ತೆ ಎಂದರು.

ಇನ್ನು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿದ್ದು, ವರಿಷ್ಠರ ಜೊತೆ ನಾನು ಚರ್ಚೆ ಮಾಡಿಲ್ಲ. ವರಿಷ್ಠರ ಜತೆ ಚರ್ಚಿಸಿ ಈ ವಿಚಾರದಲ್ಲಿ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್