AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಎಲೆಕ್ಷನ್‌ನಲ್ಲಿ ದುಡ್ಡು ಹಂಚದೆ ಗೆದ್ದಿದ್ದೀನಿ ಎಂದ ರಮೇಶ್ ಜಾರಕಿಹೊಳಿ: ಹಣ ಹಂಚಿದ ಫೋಟೋ, FIR ಪ್ರತಿ ರಿಲೀಸ್ ಮಾಡಿದ ಪೂಜಾರಿ

ನಾನು 6 ಎಲೆಕ್ಷನ್‌ನಲ್ಲಿ ದುಡ್ಡು ಹಂಚದೆ ಗೆದ್ದಿದ್ದೀನಿ ಎಂದಿರುವ ರಮೇಶ್ ಜಾರಕಿಹೊಳಿ ವಿರುದ್ಧ ಅಶೋಕ್ ಪೂಜಾರಿ ಫೋಟೋ ಹಾಗೈ ಎಫ್​ಐಆರ್ ಪ್ರತಿ ರಿಲೀಸ್ ಮಾಡಿದ್ದಾರೆ.

6 ಎಲೆಕ್ಷನ್‌ನಲ್ಲಿ ದುಡ್ಡು ಹಂಚದೆ ಗೆದ್ದಿದ್ದೀನಿ ಎಂದ ರಮೇಶ್ ಜಾರಕಿಹೊಳಿ: ಹಣ ಹಂಚಿದ ಫೋಟೋ, FIR ಪ್ರತಿ ರಿಲೀಸ್ ಮಾಡಿದ ಪೂಜಾರಿ
ಅಶೋಕ್ ಪೂಜಾರಿ
TV9 Web
| Edited By: |

Updated on:Jan 21, 2023 | 3:34 PM

Share

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Election 2023) ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಲ್ಲೂ ಬೆಳಗಾವಿ (Belagavi) ಜಿಲ್ಲೆಯಲ್ಲಿ ಈಗನಿಂದಲೇ ಓಲೈಕೆ ರಾಜಕೀಯ (Politics) ಶುರುವಾಗಿದೆ. ಜಿಲ್ಲೆಯಲ್ಲಿ ಮತದಾರರಿಗೆ ಹಲವು ಬಗೆಯ ಗಿಫ್ಟ್​​ಗಳನ್ನು ನೀಡಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, ನಾನು 6 ಎಲೆಕ್ಷನ್‌ನಲ್ಲಿ ಗೆದ್ದಿದ್ದೇನೆ. ಆದ್ರೆ ದುಡ್ಡು ಹಂಚಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ಅವರು ರಮೇಶ್ ಜಾರಕಿಹೊಳಿ ಕಳೆದ ಚುನಾವಣೆ ಸಂದರ್ಭದಲ್ಲಿ ಹಣ ಹಂಚುತ್ತಿದ್ದ ಫೋಟೋ ಹಾಗೂ ದಾಖಲಾಗಿದ್ದ ಎಫ್​ಐಆರ್ ಪ್ರತಿಯನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಗ್ರಾಮೀಣ ಮತ ಬ್ಯಾಂಕ್​ಗೆ ಲಗ್ಗೆ: ಕುಕ್ಕರ್ ಗಿಫ್ಟ್ ಬೇಡಾ, ನಾನು 10 ಕೋಟಿ ಖರ್ಚು ಮಾಡುವೆ ಬನ್ನೀ- ರಮೇಶ್ ಜಾರಕಿಹೊಳಿ

ಹೌದು…ಇಂದು(ಜನವರಿ 21) ಬೆಳಗಾವಿಯಲ್ಲಿ ಸುದ್ದಿಗೋಷ್ಠಿ‌ ನಡೆಸಿ ಮಾತನಾಡಿದ ಅಶೋಕ್ ಪೂಜಾರಿ, 2018ರ ಚುನಾವಣೆ ವೇಳೆ ರಮೇಶ್ ಜಾರಕಿಹೊಳಿ ದುಡ್ಡು ಹಂಚುತ್ತಿದ್ದ ಫೋಟೋ ರಿಲೀಸ್ ಮಾಡಿದರು. ಅಲ್ಲದೇ ಹಣ ಹಂಚಿಕೆ ಆರೋಪದ ಮೇಲೆ ದಾಖಲಾಗಿದ್ದ ಎಫ್​ಐಆರ್​ ಪ್ರತಿಯನ್ನು ಸಹ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದರು. ಈ ಮೂಲಕ ರಮೇಶ್ ಜಾರಕಿಹೊಳಿ ಹಣ ಹಂಚಿಲ್ಲ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದರು.

2018ರ ಚುನಾವಣೆಯಲ್ಲಿ ಗೋಕಾಕ್​ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶೋಕ್ ಪೂಜಾರಿ, ರಮೇಶ್ ಜಾರಕಿಹೊಳಿ ವಿರುದ್ಧ ಸೋಲುಕಂಡಿದ್ದರು. ಆ ವೇಳೆ ದುರ್ಗಾ ಮಂದಿರದಲ್ಲಿ ಅಂದಿನ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಜಾರಕಿಹೊಳಿ ವಿರುದ್ಧ ಹಣ ಹಂಚಿದ ಆರೋಪ ಮಾಡಿದ್ದರು. ಈ ಬಗ್ಗೆ ಗೋಕಾಕ್ ಗ್ರಾಮೀಣ ಠಾಣೆಯಲ್ಲಿ 2018 ಮೇ.7ರಂದು ಎಫ್ಐಆರ್ ದಾಖಲಾಗಿತ್ತು. ಆ ಎಫ್​ಐಆರ್ ಪ್ರತಿಯನ್ನು ಬಿಡುಗಡೆ ಮಾಡಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಕ್ಷೇತ್ರದಲ್ಲಿ ಗಿಫ್ಟ್​ ಪಾಲಿಟಿಕ್ಸ್​​: ರಮೇಶ್​ ಜಾರಕಿಹೊಳಿ ಆಪ್ತನಿಂದ ಸೀರೆ ಹಂಚಿಕೆ

ರಮೇಶ್ ಜಾರಕಿಹೊಳಿ ಹೇಳಿದ್ದೇನು?

ನಿನ್ನೆ (ಜನವರಿ 20) ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಕುಕ್ಕರ್, ಮಿಕ್ಸರ್​ ಗಿಫ್ಟ್ ಕೊಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹಾಗೇ ನಾನು 6 ಚುನಾವಣೆ ಗೆದ್ದಿದ್ದೇನೆ ಎಂದೂ ದುಡ್ಡು ಹಂಚಿಲ್ಲ ಎಂದು ಹೇಳಿದ್ದರು. ಆದರೆ, ಇದೀಗ ರಮೇಶ್ ಜಾರಕಿಹೊಳಿ ಹಣ ಹಂಚಿದ ಫೋಟೋವನ್ನು ಅಶೋಕ್ ಪೂಜಾರಿ ಬಿಡುಗಡೆ ಮಾಡುವ ಮೂಲಕ ಜಾರಕಿಹೊಳಿಗೆ ತಿವಿದಿದ್ದಾರೆ.

ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಅಶೋಕ್ ಪೂಜಾರಿ ಸತತವಾಗಿ 4 ಬಾರಿ ಸ್ಪರ್ಧಿಸಿ ಸೋಲುಕಂಡಿದ್ದಾರೆ. ಈಗ ಮತ್ತೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೋಕಾಕ್​ನಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

Published On - 3:32 pm, Sat, 21 January 23

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ