AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆಗೆ ನೀಡಿದ್ದ ಸರ್ಕಾರಿ ಬಂಗಲೆ ಖಾಲಿ ಮಾಡಿ’; ಸಂಸದ ಚಿರಾಗ್ ಪಾಸ್ವಾನ್​ಗೆ ನೋಟಿಸ್ ಜಾರಿ

Chirag Paswan Bungalow | ರಾಮ್ ವಿಲಾಸ್ ಪಾಸ್ವಾನ್ ಕೇಂದ್ರ ಸಚಿವರಾಗಿದ್ದಾಗ ಅವರು ನೀಡಿದ್ದ ಬಂಗಲೆಯನ್ನು ಅವರ ಕುಟುಂಬಸ್ಥರು ಇನ್ನೂ ಖಾಲಿ ಮಾಡಿಲ್ಲ. ಹೀಗಾಗಿ ತುರ್ತಾಗಿ ಆ ಬಂಗಲೆಯನ್ನು ಖಾಲಿ ಮಾಡುವಂತೆ ಜುಲೈ 14ರಂದು ಚಿರಾಗ್ ಪಾಸ್ವಾನ್​ಗೆ ನೋಟಿಸ್ ನೀಡಲಾಗಿದೆ.

'ತಂದೆಗೆ ನೀಡಿದ್ದ ಸರ್ಕಾರಿ ಬಂಗಲೆ ಖಾಲಿ ಮಾಡಿ'; ಸಂಸದ ಚಿರಾಗ್ ಪಾಸ್ವಾನ್​ಗೆ ನೋಟಿಸ್ ಜಾರಿ
ರಾಮ್ ವಿಲಾಸ್ ಪಾಸ್ವಾನ್- ಚಿರಾಗ್ ಪಾಸ್ವಾನ್
TV9 Web
| Edited By: |

Updated on: Aug 10, 2021 | 12:55 PM

Share

ನವದೆಹಲಿ: ಕೇಂದ್ರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಸರ್ಕಾರದಿಂದ ನೀಡಲಾಗಿದ್ದ ಬಂಗಲೆಯಲ್ಲೇ ಅವರ ಕುಟುಂಬಸ್ಥರು ಇನ್ನೂ ವಾಸವಾಗಿದ್ದಾರೆ. ಹೀಗಾಗಿ, ದೆಹಲಿಯಲ್ಲಿರುವ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಮಗ ಸಂಸದ ಚಿರಾಗ್ ಪಾಸ್ವಾನ್​ಗೆ ಸರ್ಕಾರ ಆದೇಶ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯ ಲುಟ್ಯೇನ್​ನಲ್ಲಿರುವ ಬಂಗಲೆ ಸರ್ಕಾರಕ್ಕೆ ಸೇರಿದ್ದಾಗಿದೆ. ಈ ಬಂಗಲೆಯನ್ನು ಕೇಂದ್ರ ಸಚಿವರಿಗೆ, ಸಂಸದರಿಗೆ, ಸರ್ಕಾರದ ಹಿರಿಯ ಅಧಿಕಾರಿಗಳಿಗೆ, ನ್ಯಾಯಮೂರ್ತಿಗಳಿಗೆ, ಸೇನಾಪಡೆಗಳ ಅಧಿಕಾರಿಗಳಿಗೆ ನೀಡಲಾಗುತ್ತದೆ. ಆದರೆ, ರಾಮ್ ವಿಲಾಸ್ ಪಾಸ್ವಾನ್ ಕೇಂದ್ರ ಸಚಿವರಾಗಿದ್ದಾಗ ಅವರು ನೀಡಿದ್ದ ಬಂಗಲೆಯನ್ನು ಅವರ ಕುಟುಂಬಸ್ಥರು ಇನ್ನೂ ಖಾಲಿ ಮಾಡಿಲ್ಲ. ಹೀಗಾಗಿ ತುರ್ತಾಗಿ ಆ ಬಂಗಲೆಯನ್ನು ಖಾಲಿ ಮಾಡುವಂತೆ ಜುಲೈ 14ರಂದು ಚಿರಾಗ್ ಪಾಸ್ವಾನ್​ಗೆ ನೋಟಿಸ್ ನೀಡಲಾಗಿದೆ. ಇದಕ್ಕೂ ಮೊದಲು ಕೂಡ 2 ಬಾರಿ ನೋಟಿಸ್ ನೀಡಲಾಗಿದ್ದು, ಆದರೂ ಚಿರಾಗ್ ಪಾಸ್ವಾನ್ ಕುಟುಂಬಸ್ಥರು ಆ ಬಂಗಲೆಯನ್ನು ಖಾಲಿ ಮಾಡಿಲ್ಲ.

ಕಳೆದ ತಿಂಗಳ ಅಂತ್ಯದಲ್ಲಿ ಕೇಂದ್ರ ಸಚಿವ ಸಂಪುಟವನ್ನು ಪುನಾರಚನೆ ಮಾಡಿರುವುದರಿಂದ ಹೊಸದಾಗಿ ನೇಮಕಗೊಂಡಿರುವ ಕೇಂದ್ರ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ನೀಡಲು ಆ ಬಂಗಲೆಯ ಅಗತ್ಯವಿದೆ ಎಂದು ಸರ್ಕಾರ ಸೂಚಿಸಿದೆ ಎನ್ನಲಾಗಿದೆ. ಹೊಸ ಕೇಂದ್ರ ಸಚಿವರಿಗೆ ಸರ್ಕಾರಿ ಬಂಗಲೆ ನೀಡಬೇಕಾದ ಅನಿವಾರ್ಯತೆ ಇರುವುದರಿಂದ ಅವರಿಗೆ ಸೂಕ್ತವಾದ ಸ್ಥಳದಲ್ಲಿ ಬಂಗಲೆಯನ್ನು ಹುಡುಕುವುದು ಸರ್ಕಾರದ ಅಧಿಕಾರಿಗಳಿಗೆ ಸವಾಲಾಗಿದೆ. ಈಗಾಗಲೇ ವಿಐಪಿ ಏರಿಯಾದಲ್ಲಿರುವ ಏರಿಯಾದಲ್ಲಿರುವ ಸರ್ಕಾರಿ ಬಂಗಲೆಗಳನ್ನು ಹಿಂದಿನವರು ಖಾಲಿ ಮಾಡದ ಕಾರಣ ಅವರನ್ನು ಖಾಲಿ ಮಾಡಿಸುವುದೇ ಅಧಿಕಾರಿಗಳಿಗೆ ಸವಾಲಿನ ಕೆಲಸವಾಗಿದೆ ಎನ್ನಲಾಗಿದೆ.

ದಶಕಗಳಿಂದ ಚಿರಾಗ್ ಪಾಸ್ವಾನ್ ಕುಟುಂಬ ದೆಹಲಿಯ ಆ ಸರ್ಕಾರಿ ಬಂಗಲೆಯಲ್ಲಿಯೇ ವಾಸವಾಗಿದ್ದು, ಅವರ ಸಂಬಂಧಿಯಾದ ನೂತನ ಕೇಂದ್ರ ಸಚಿವ ಪಶುಪತಿ ಪರಾಸ್ ಅವರಿಗೆ ಆ ಬಂಗಲೆಯನ್ನು ನೀಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ ಆ ಆಫರ್​ಗೂ ಚಿರಾಗ್ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Karnataka Cabinet: ಹಂಚಿಕೆಯಾದ ಖಾತೆಗಳ ಬಗ್ಗೆ ನೂತನ ಸಚಿವರು ಹೇಳಿದ್ದೇನು?

Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಸ್ಥಗಿತ

(Government Orders MP Chirag Paswan to Vacate Bungalow in Delhi which Allotted to His Father)

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ