ಯುವ ಮತದಾರರನ್ನು ಸೆಳೆಯಲು ಸರ್ಕಾರ ಭರ್ಜರಿ ಪ್ಲ್ಯಾನ್​: ಪ್ರತಿ ಗ್ರಾಮ ಪಂಚಾಯಿತಿಗೆ ಯುವಕರ ಸಂಘ ರಚನೆ

ರಾಜ್ಯದಲ್ಲಿ ಸ್ವಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೆ ತಂದ ಯೋಜನೆಯೇ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನಾ.  

ಯುವ ಮತದಾರರನ್ನು ಸೆಳೆಯಲು ಸರ್ಕಾರ ಭರ್ಜರಿ ಪ್ಲ್ಯಾನ್​: ಪ್ರತಿ ಗ್ರಾಮ ಪಂಚಾಯಿತಿಗೆ ಯುವಕರ ಸಂಘ ರಚನೆ
ಪ್ರಾತಿನಿಧಿಕ ಚಿತ್ರImage Credit source: vijaykarnataka.com
Follow us
|

Updated on:Mar 11, 2023 | 9:47 PM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಲಾ ಎರಡು ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳಂತೆ (Vivekananda self-help groups) 12 ಸಾವಿರ ಸ್ವಸಹಾಯ ಗುಂಪುಗಳ ರಚನೆಗೆ ಆದೇಶ ಹೊರಡಿಸಿದೆ. ಈ ಯೋಜನೆ ಮೂಲಕ ಸರ್ಕಾರವು ಯುವ ಜನತೆಯನ್ನು ತಲುಪುವುದರೊಂದಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಯುವ ಮತದಾರರನ್ನು ಸೆಳೆಯಲು ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ರಾಜ್ಯದಲ್ಲಿ ಸ್ವಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೆ ತಂದ ಯೋಜನೆಯೇ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನಾ.

ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2013 ರಲ್ಲಿ 20 ವರ್ಷಕ್ಕಿಂತ ಕಡಿಮೆ ವಯಸ್ಸಿನ 8 ಲಕ್ಷ ಮತ್ತು 2018ರಲ್ಲಿ 15 ಲಕ್ಷ ಮತದಾರರಿದ್ದರು. ಸದ್ಯ ಈ ಮತದಾರರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಈ ಬಾರಿ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಯ ಅಂಕಿಅಂಶಗಳ ಪ್ರಕಾರ, ಸುಮಾರು 7 ಲಕ್ಷದಷ್ಟು ಮತದಾರರು ಮೊಟ್ಟ ಮೊದಲ ಬಾರಿಗೆ ಮತದಾನಕ್ಕೆ ನೋಂದಾಯಿಸಿಕೊಂಡಿದ್ದಾರೆ. 2014 ರಲ್ಲಿ ಮೊಟ್ಟಮೊದಲ ಬಾರಿಗೆ ಮತದಾನ ಮಾಡುವವರ ಸಂಖ್ಯೆ ನಾಲ್ಕು ಲಕ್ಷವಿತ್ತು. ಸದ್ಯ ರಾಜಕೀಯ ಪಕ್ಷಗಳು ಈ ವರ್ಗದ ಮತದಾರರನ್ನು ಗುರಿಯಾಗಿಸಿಕೊಂಡು ಅವರನ್ನು ತಮ್ಮತ್ತ ಸೆಳೆಯಲು ಪ್ಲ್ಯಾನ್​ ರೂಪಿಸುತ್ತಿವೆ.

ಇದನ್ನೂ ಓದಿ: ನಾವು ಕ್ರೆಡಿಟ್ ವಾರ್ ಹಿಂದೆ ಬಿದ್ದಿಲ್ಲ: ಕಾಂಗ್ರೆಸ್ ನಾಯಕರಿಗೆ ಟಾಂಗ್​ ಕೊಟ್ಟ ಪ್ರಲ್ಹಾದ ಜೋಶಿ

ಕರ್ನಾಟಕದಲ್ಲಿ 6,000 ಗ್ರಾಮ ಪಂಚಾಯಿತಿಗಳಿವೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶದಂತೆ ಈ ಹಿಂದೆ ಪ್ರತಿ ಪಂಚಾಯಿತಿಗೆ ಒಂದು ವಿವೇಕಾನಂದ ಸ್ವಸಹಾಯ ಸಂಘವನ್ನು ರಚಿಸಲು ಪ್ರಸ್ತಾಪಿಸಲಾಗಿತ್ತು. ಸದ್ಯ ಪ್ರತಿ ಪಂಚಾಯಿತಿಯಲ್ಲಿ ಅಂತಹ ತಲಾ ಎರಡು ಗುಂಪುಗಳನ್ನು ಹೊಂದಲು ಹಣಕಾಸು ಇಲಾಖೆ ಅನುಮತಿ ನೀಡಿದೆ. ಹಾಗಾಗಿ ರಾಜ್ಯಾದ್ಯಂತ ಒಟ್ಟು 12,000 ವಿವೇಕಾನಂದ ಸ್ವಸಹಾಯ ಸಂಘ ಗುಂಪುಗಳು ರಚನೆಯಾಗಲಿವೆ.

ಯುವಕರಿಗೆ ಉದ್ಯೋಗ ಒದಗಿಸುವ ಗುರಿ:

ಈ ಯೋಜನೆಯಡಿ 10 ಸಾವಿರ ರೂ. ಮತ್ತು 1 ಲಕ್ಷ ರೂ.ಗಳ ಸಬ್ಸಿಡಿ ಸೇರಿದಂತೆ ಒಟ್ಟು 5 ಲಕ್ಷ ರೂ.ಗಳ ಸಾಲವನ್ನು ನೀಡಲಾಗುತ್ತದೆ. ಈ ಕುರಿತಾಗಿ ಕ್ರೀಡಾ ಮತ್ತು ಯುವಜನ ಸೇವಾ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಈ ಯೋಜನೆಯಿಂದ 5 ಲಕ್ಷ ಯುವಕರಿಗೆ ಉದ್ಯೋಗ ಸಿಗಲಿದೆ. ನಾವು ಈ ಯೋಜನೆಯ ಮೂಲಕ ಯುವ ಸಬಲೀಕರಣದತ್ತ ಗಮನ ಹರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ 28,000 ಸ್ವಸಹಾಯ ಗುಂಪುಗಳನ್ನು ರಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Narendra Modi: ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಾಗಿ ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ; ಪ್ರಧಾನಿ ಮೋದಿ

ಐದು ಲಕ್ಷ ಕುಟುಂಬಗಳನ್ನು ತಲುಪುವ ಉದ್ದೇಶ 

ಕರ್ನಾಟಕದ ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ವಾಸವಾಗಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಜನಸಂಖ್ಯೆಯ ಅರ್ಧದಷ್ಟು ಯುವಕರಿದ್ದಾರೆ. ಅವರು ಉದ್ಯೋಗಗಳನ್ನು ಹುಡುಕಿಕೊಂಡು ನಗರ ಪ್ರದೇಶಗಳಿಗೆ ತೆರಳುತ್ತಿದ್ದಾರೆ. ಈ ಯೋಜನೆಯು ಅವರಿಗೆ ಆಯಾ ಸ್ಥಳಗಳಲ್ಲಿ ಉದ್ಯೋಗಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದರಿಂದಾಗಿ ಅವರು ತಮ್ಮ ಸ್ವಂತ ಊರು, ಹಳ್ಳಿಗಳಲ್ಲಿ ಉಳಿಯುವಂತಾಗುತ್ತದೆ. ಆ ಮೂಲಕ ಸರ್ಕಾರ ಐದು ಲಕ್ಷ ಯುವಕರನ್ನು ಗುರಿಯಾಗಿಸಿದೆ. ಅಂದರೆ, ನಾವು ಪರೋಕ್ಷವಾಗಿ ಐದು ಲಕ್ಷ ಕುಟುಂಬಗಳನ್ನು ತಲುಪುತ್ತಿದ್ದೇವೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:47 pm, Sat, 11 March 23

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ