AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯವಾಗ್ತಿದೆ ಎಂದ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಸರ್ಕಾರ ಗಂಭೀರ ಚಿಂತನೆ ಮಾಡಬೇಕು: ಪ್ರಲ್ಹಾದ್ ಜೋಶಿ

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ಮಾಡಬೇಕು ಎಂದರು. ಶಂಕಿತ ಉಗ್ರನಿಗೆ ಧಾರವಾಡ ಲಿಂಕ್​ ಇರುವುದು ತಿಳಿದುಬಂದಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣವೆಂದು ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದರು. ಇದಕ್ಕೂ ಕೇಂದ್ರ ಸಚಿವರು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯವಾಗ್ತಿದೆ ಎಂದ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಸರ್ಕಾರ ಗಂಭೀರ ಚಿಂತನೆ ಮಾಡಬೇಕು: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ ಮತ್ತು ಶಾಮನೂರು ಶಿವಶಂಕರಪ್ಪ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Oct 07, 2023 | 2:21 PM

Share

ಧಾರವಾಡ, ಅ.7: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಹಿರಿಯರು, ವೀರಶೈವ ಮಹಾಸಭಾ ಅಧ್ಯಕ್ಷರು. ಅವರು ಎಲ್ಲಾ ಎಲ್ಲ ಮಾಹಿತಿ ಇಟ್ಟುಕೊಂಡೇ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿಕೆ ನೀಡಿರುತ್ತಾರೆ. ಹೀಗಾಗಿ ಅವರ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಕೆಲವು ತಾಲೂಕುಗಳು ಬರದಿಂದ ಉಳಿದಿವೆ. ಅದನ್ನು ಮೊದಲು ರಾಜ್ಯ ಸರ್ಕಾರ ಘೋಷಣೆ ಮಾಡಲಿ. ಅವರು ಇದುವರೆಗೂ ಪ್ರಸ್ತಾವನೆ ಸಲ್ಲಿಸಿಲ್ಲ. ಕಾವೇರಿ, ಬರ ವಿಷಯಕ್ಕೆ ಸ್ಪಂದಿಸಲು ಕೇಂದ್ರ ಸರ್ಕಾರ ತಯಾರಿದೆ ಎಂದರು.

ಅಧ್ಯಯನ ತಂಡ ತಡವಾಗಿ ಬಂದ ವಿಚಾರವಾಗಿ ಮಾತನಾಡಿದ ಜೋಶಿ, ರಾಜ್ಯದಿಂದ ಪ್ರಸ್ತಾಪ ಬಂದ ಬಳಿಕವೇ ಕೇಂದ್ರ ತಂಡ ಬರಬೇಕಾಗುತ್ತದೆ. ಅವರಿಂದ ಪ್ರಸ್ತಾಪ ಬಂದ ಬಳಿಕ ತಂಡ ಬಂದಿದೆ. ರಾಜ್ಯ ಸರ್ಕಾರ ಎಲ್ಲದಕ್ಕೂ ಕೇಂದ್ರದತ್ತ ಕೈ ತೋರಿಸಬಾರದು ಎಂದರು.

ಸಂತೋಷ್ ಲಾಡ್ ಹೇಳಿಕೆಗೆ ಪ್ರಲ್ಹಾದ್ ಜೋಶಿ ತಿರುಗೇಟು

ಐಸಿಸ್ ಶಂಕಿತ ಉಗ್ರನಿಗೆ ಧಾರವಾಡ ಲಿಂಕ್​ ಇರುವುದು ಪತ್ತೆಯಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣವೆಂದು ಸಚಿವ ಸಂತೋಷ್ ಲಾಡ್ ಅವರು ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಜೋಶಿ, ಎಲ್ಲಿ ರಾಜ್ಯ ಸರ್ಕಾರದ ಅನುಕಂಪ ಇರುತ್ತದೆಯೋ ಅಲ್ಲಿ ಅವರು ಈ ಕಾರ್ಯ ಮಾಡುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಇವರ ಯೋಗ್ಯತೆಗೆ ಒಬ್ಬೇ ಒಬ್ಬ ಲಿಂಗಾಯತ ಅಭ್ಯರ್ಥಿಯನ್ನು ಹಾಕಲಿಲ್ಲ, ಶಾಮನೂರು ಬಿಜೆಪಿಗೆ ಹೋಗಿದ್ದರೆ ಇಷ್ಟೊತ್ತಿಗೆ ಕೇಂದ್ರ ಮಂತ್ರಿ ಆಗ್ತಿದ್ದರು – ಎಚ್​​ ಡಿ ರೇವಣ್ಣ

ಯುಪಿಎ ಕಾಲದಲ್ಲಿ ದೆಹಲಿಯಿಂದ ಹುಬ್ಬಳ್ಳಿವರೆಗೆ ಬಾಂಬ್ ಸ್ಪೋಟ ಆಗುತ್ತಿದ್ದವು. ಆದರೆ ದೇಶದೊಳಗೆ ಈಗ ಆ ಚಟುವಟಿಕೆ ಇಲ್ಲ. ಕಾಶ್ಮೀರದಲ್ಲಿಯೂ ಬಹಳ ಕಡಿಮೆ ಆಗಿವೆ. ಆದರೆ ಕೆಲವು ಕಡೆ ಉಗ್ರ ಚಟುವಟಿಕೆ ಮಾಡುವವರು ಇದ್ದಾರೆ. ಎಲ್ಲಿ ರಾಜ್ಯ ಸರ್ಕಾರದ ಅನುಕಂಪ ಇರುತ್ತದೆಯೋ ಅಲ್ಲಿ ಅವರು ಈ ಕಾರ್ಯ ಮಾಡುತ್ತಾರೆ. ಅಂಥ ರಾಜ್ಯಗಳಲ್ಲಿ ಅಂಡರ್‌ಗ್ರೌಂಡ್ ಸೆಲ್‌ಗಳನ್ನು ಮಾಡುತ್ತಿದ್ದಾರೆ ಎಂದರು.

ಉಗ್ರರಿಗೆ ಧಾರವಾಡದ ಲಿಂಕ್ ಇರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ನಾವು ರಾಜಕೀಯವಾಗಿ ಏನೂ ಹೇಳುತ್ತಿಲ್ಲ. ರಾಜ್ಯ ಸರ್ಕಾರದ ಮಂತ್ರಿಗಳು ಬೇಜವಾಬ್ದಾರಿಯಿಂದ ಮಾತನಾಡಬಾರದು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:32 pm, Sat, 7 October 23

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು