Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರು ವಿಧೇಯಕ: ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದ ಆರ್​​ ಅಶೋಕ್​

ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ವಿಭಜನೆಗೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಗ್ರೇಟರ್ ಬೆಂಗಳೂರು ವಿಧೇಯಕ ಮರಣ ಶಾಸನ ಎಂದು ಕರೆದಿರುವ ವಿರೋಧ ಪಕ್ಷದ ನಾಯಕರು, ಬಿಬಿಎಂಪಿ ವಿಭಜನೆಯಿಂದ ಆಡಳಿತಾತ್ಮಕ ವೆಚ್ಚ ಹೆಚ್ಚಾಗುವುದು ಹಾಗೂ ಬೆಂಗಳೂರಿನ ಅಭಿವೃದ್ಧಿಗೆ ಅಡ್ಡಿಯಾಗುವುದು ಎಂದು ಆರೋಪಿಸಿದ್ದಾರೆ. ಬೆಂಗಳೂರು ಒಂದಾಗಿರಬೇಕೆಂಬುದು ಒತ್ತಾಯಿಸಿದ್ದಾರೆ.

ಗ್ರೇಟರ್ ಬೆಂಗಳೂರು ವಿಧೇಯಕ: ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದ ಆರ್​​ ಅಶೋಕ್​
ಗ್ರೇಟರ್ ಬೆಂಗಳೂರು ವಿಧೇಯಕ: ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದ ಆರ್​​ ಅಶೋಕ್​
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 10, 2025 | 4:57 PM

ಬೆಂಗಳೂರು, ಮಾರ್ಚ್​ 10: ಗ್ರೇಟರ್ ಬೆಂಗಳೂರು ವಿಧೇಯಕ (Greater Bengaluru Bill) ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದು ವಿರೋಧ ಪಕ್ಷದ ನಾಯಕ ಅಶೋಕ್ (R Ashoka) ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, 74ನೇ ತಿದ್ದುಪಡಿ ಬಗ್ಗೆ ನೀವು ಅಪಚಾರ ಮಾಡುತ್ತಿದ್ದೀರಿ. ಮುಖ್ಯಮಂತ್ರಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಸ್ಥಳೀಯ ನಾಯಕತ್ವದ ಮೇಲೆ ಹೇರಿಕೆ ಮಾಡುತ್ತಿದ್ದಿರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ಮಾಡಬಾರದು: ಆರ್.ಅಶೋಕ್ ಒತ್ತಾಯ

ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ಮಾಡಬಾರದು. ಬೆಂಗಳೂರು ಒಟ್ಟಾಗಿರಲಿ ಅಂತಾ 4 ಗೋಪುರ ನಿರ್ಮಿಸಿದ್ದರು. ಕೆಂಪೇಗೌಡರ ಪರಿಕಲ್ಪನೆಯನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಿಎಂಗೆ ಪರಮಾಧಿಕಾರ ನೀಡಿ ಪಾಲಿಕೆ ಅಧಿಕಾರ ತೆಗೆದಿದ್ದಾರೆ. ಬೆಂಗಳೂರಿಗೆ ಈ ವಿಧೇಯಕ ಮರಣ ಶಾಸನ ತಂದಂತಾಗುತ್ತದೆ. ಬೆಂಗಳೂರಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ. ಒಬ್ಬ ಮೇಯರ್ ಇರಲಿ, ಕಮಿಷನರ್ ಡಿವೈಡ್ ಮಾಡಿ ಆಡಳಿತ ಮಾಡಿ ಎಂದು ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಬೆಂಗಳೂರು ಒಡೆಯುವ ಕೆಲಸ ಬೇಡ: ಶಾಸಕ ಡಾ.ಅಶ್ವತ್ಥ್‌ ನಾರಾಯಣ

ಶಾಸಕ ಡಾ.ಅಶ್ವತ್ಥ್‌ ನಾರಾಯಣ ಮಾತನಾಡಿ, ಬೆಂಗಳೂರು ಒಡೆಯುವ ಕೆಲಸ ಆಗುವುದು ಬೇಡ. ಅಧಿಕಾರ ವಿಕೇಂದ್ರೀಕರಣ ಮಾಡುವ ಕೆಲಸ ಮಾಡಿ. ಬೆಂಗಳೂರು ವಿಭಜನೆ ಕೈಬಿಡಿ. ವಾರ್ಡ್ ಸಮಿತಿ ನೇಮಕಾತಿ ಪ್ರಸ್ತಾವನೆ ಕೈಬಿಡಿ. ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಬೆಂಗಳೂರು ಅಭಿವೃದ್ಧಿ ಸಚಿವರು ಇರುವುದು ಬೇಡ. ನಾಮನಿರ್ದೇಶಿತ ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರಿಗೆ ಮತದಾನದ ಹಕ್ಕು ಕೈಬಿಡುವಂತೆ ಆಗ್ರಹಿಸಿದರು. ಅಶ್ವಥ್ ನಾರಾಯಣ ಸಲಹೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
Image
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
Image
ರನ್ಯಾಗೆ ಯಾಕೆ ಪ್ರೊಟೋಕಾಲ್ ವಿಸ್ತರಿಸಲಾಗುತ್ತಿದೆ: ಸುನೀಲ ಕುಮಾರ
Image
ಬ್ಯಾರಿ ಸಮುದಾಯದ ಬಗ್ಗೆ ಸ್ಪೀಕರ್ ಕೇಳಿದ ಪ್ರಶ್ನೆಗೆ ನಿರುತ್ತರನಾದ ಜಮೀರ್

ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿ

ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆಗೆ ಬಗ್ಗೆ ದೆಹಲಿಯಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದು, ಬೆಂಗಳೂರು ನಗರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಬೆಂಗಳೂರಿನಲ್ಲಿ ರಸ್ತೆ ನಿರ್ಮಾಣ, ಟ್ರಾಫಿಕ್​ ನಿರ್ವಹಣೆ ಮಾಡಿಲ್ಲ. ಬ್ರ್ಯಾಂಡ್​ ಬೆಂಗಳೂರು ಅಂತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Karnataka Budget Session: ರಾಜ್ಯದಲ್ಲಿ ಜೈನ್ ಸಮುದಾಯದವರು 20 ಲಕ್ಷಕ್ಕೂ ಹೆಚ್ಚಿದ್ದಾರೆ, ಅವರಿಗೊಂದು ನಿಗಮ ಬೇಕು: ಜಮೀರ್ ಅಹ್ಮದ್

ಉತ್ತಮ ಯೋಜನೆಗಳೇ ಇಲ್ಲ. ವರ್ಲ್ಡ್​​​ ಬ್ಯಾಂಕ್​ನಿಂದ ಸಾಲ ಪಡೆಯೋದು ಬಿಟ್ರೆ ಬೇರೇನೂ ಆಗಿಲ್ಲ. ಇದನ್ನೆಲ್ಲಾ ಮರೆಮಾಚಲು 7 ಭಾಗಗಳನ್ನಾಗಿ ವಿಭಜನೆಯಾಗಲಿದೆ. ಬಿಬಿಎಂಪಿ ವಿಭಜನೆ ಆಡಳಿತಾತ್ಮಕ ವೆಚ್ಚಗಳನ್ನು ಹೆಚ್ಚು ಮಾಡಲಿದೆ. ಇದು ಬೆಂಗಳೂರಿನ ಸಮಸ್ಯೆಗೆ ಪರಿಹಾರ ಅಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು