AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಇರುವವರಿಗೆ ವಿದ್ಯುತ್​​ ಫ್ರೀ ಇದೆಯೇ?

ವಾಣಿಜ್ಯ ಬಳಕೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯಿಸಲ್ಲ. ಬಾಡಿಗೆದಾರರು ಬಿಲ್ ಕಟ್ಟುತ್ತಿದ್ದರೆ ಉಚಿತ ವಿದ್ಯುತ್​ ನೀಡುತ್ತೇವೆ.

ಗಂಗಾಧರ​ ಬ. ಸಾಬೋಜಿ
|

Updated on:Jun 02, 2023 | 4:56 PM

Share

ಬೆಂಗಳೂರು: ಫ್ರೀ..ಫ್ರೀ..ಫ್ರೀ…ಅಂತಾನೆ ಚುನಾವಣೆ ಪ್ರಚಾರದ ವೇಳೆ ಭರವಸೆ ನೀಡಿದ್ದ ಐದು ಘೋಷಣೆಗಳನ್ನು ಇಂದು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಪೈಕಿ ಗೃಹಜ್ಯೋತಿ ಯೋಜನೆ (Gruha Jyothi Scheme) ಒಂದು. ಜುಲೈ 1 ರಿಂದ ಬಳಕೆ ಮಾಡುವ ವಿದ್ಯುತ್ ಉಚಿತವಾಗಿರಲಿದೆ ಎಂದು ಸಿಎಂ ಹೇಳಿದ್ದಾರೆ. ಈ ಯೋಜನೆ ಮೂಲಕ 200 ಯೂನಿಟ್ ವಿದ್ಯುತ್​ನ್ನು ಕಾಂಗ್ರೆಸ್​ ಸರ್ಕಾರ ಉಚಿತ ನೀಡುತ್ತಿದೆ. ಹಾಗಾದ್ರೆ ಬಾಡಿಗೆದಾರರಿಗೂ ಈ ಯೋಜನೆ ಅನ್ವಯಿಸುತ್ತಾ ಎನ್ನುವ ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ ಹೀಗಿದೆ. ​​    ​

ವಾಣಿಜ್ಯ ಬಳಕೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯಿಸಲ್ಲ. ಬಾಡಿಗೆದಾರರು ಬಿಲ್ ಕಟ್ಟುತ್ತಿದ್ದರೆ ಉಚಿತ ವಿದ್ಯುತ್​ ನೀಡುತ್ತೇವೆ. ಒಂದು ಕಟ್ಟಡದಲ್ಲಿ ಒಂದಕ್ಕಿಂತ ಹೆಚ್ಚು ಆರ್​ಆರ್ ನಂಬರ್ ಇದ್ದರೆ ಹೊಂದಿದ್ದರೆ ಅದನ್ನು ಕಮರ್ಷಿಯಲ್​ ಎಂದು ಪರಿಗಣಿಸಲಾಗುವುದು. ಹಾಗಾಗಿ ಬಾಡಿಗೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯವಾಗಲ್ಲ ಎಂದಿದ್ದಾರೆ.

ಇದನ್ನೂ ಓದಿ: Gruha Jyothi Scheme: ಜುಲೈ 1ರಿಂದ 200 ಯುನಿಟ್ ವಿದ್ಯುತ್ ಉಚಿತ: ಸಿದ್ದರಾಮಯ್ಯ ಘೋಷಣೆ

ಸಿಂಗಲ್ ಬಿಲ್ಡಿಂಗ್​ನಲ್ಲಿ ಬಾಡಿಗೆದಾರರಿದ್ದರೆ ಮಾತ್ರ ಉಚಿತವಿರುತ್ತದೆ. ಒಂದು ಬಿಲ್ಡಿಂಗ್​ನಲ್ಲಿ ಒಂದು ಮನೆ RR ನಂಬರ್​ ಮಾತ್ರ ಪರಿಗಣನೆ ಮಾಡಲಾಗುತ್ತಿದೆ. ಒಂದು ಬಿಲ್ಡಿಂಗ್​ನಲ್ಲಿ ಒಂದಕ್ಕಿಂತ ಹೆಚ್ಚು ಆರ್​ಆರ್​ ನಂಬರ್​ಯಿದ್ದರೆ, ಅದರ ಲಾಭವನ್ನು ಬಿಲ್ಡಿಂಗ್ ಮಾಲೀಕರು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

12 ತಿಂಗಳ ಸರಾಸರಿ ವಿದ್ಯುತ್​ ಬಿಲ್​ ಪರಿಗಣೆ

12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡಲಾಗುವುದು. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಗೃಹಜ್ಯೋತಿ ಸೇರಿದಂತೆ ಗೃಹಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಗಳನ್ನು ಸಹ ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿದರು. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಯಾವುದೇ ಜಾತಿ, ಧರ್ಮ, ಭಾಷೆ ಬೇಧವಿಲ್ಲದೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:43 pm, Fri, 2 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More