AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಇರುವವರಿಗೆ ವಿದ್ಯುತ್​​ ಫ್ರೀ ಇದೆಯೇ?

ವಾಣಿಜ್ಯ ಬಳಕೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯಿಸಲ್ಲ. ಬಾಡಿಗೆದಾರರು ಬಿಲ್ ಕಟ್ಟುತ್ತಿದ್ದರೆ ಉಚಿತ ವಿದ್ಯುತ್​ ನೀಡುತ್ತೇವೆ.

ಗಂಗಾಧರ​ ಬ. ಸಾಬೋಜಿ
|

Updated on:Jun 02, 2023 | 4:56 PM

Share

ಬೆಂಗಳೂರು: ಫ್ರೀ..ಫ್ರೀ..ಫ್ರೀ…ಅಂತಾನೆ ಚುನಾವಣೆ ಪ್ರಚಾರದ ವೇಳೆ ಭರವಸೆ ನೀಡಿದ್ದ ಐದು ಘೋಷಣೆಗಳನ್ನು ಇಂದು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಪೈಕಿ ಗೃಹಜ್ಯೋತಿ ಯೋಜನೆ (Gruha Jyothi Scheme) ಒಂದು. ಜುಲೈ 1 ರಿಂದ ಬಳಕೆ ಮಾಡುವ ವಿದ್ಯುತ್ ಉಚಿತವಾಗಿರಲಿದೆ ಎಂದು ಸಿಎಂ ಹೇಳಿದ್ದಾರೆ. ಈ ಯೋಜನೆ ಮೂಲಕ 200 ಯೂನಿಟ್ ವಿದ್ಯುತ್​ನ್ನು ಕಾಂಗ್ರೆಸ್​ ಸರ್ಕಾರ ಉಚಿತ ನೀಡುತ್ತಿದೆ. ಹಾಗಾದ್ರೆ ಬಾಡಿಗೆದಾರರಿಗೂ ಈ ಯೋಜನೆ ಅನ್ವಯಿಸುತ್ತಾ ಎನ್ನುವ ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ ಹೀಗಿದೆ. ​​    ​

ವಾಣಿಜ್ಯ ಬಳಕೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯಿಸಲ್ಲ. ಬಾಡಿಗೆದಾರರು ಬಿಲ್ ಕಟ್ಟುತ್ತಿದ್ದರೆ ಉಚಿತ ವಿದ್ಯುತ್​ ನೀಡುತ್ತೇವೆ. ಒಂದು ಕಟ್ಟಡದಲ್ಲಿ ಒಂದಕ್ಕಿಂತ ಹೆಚ್ಚು ಆರ್​ಆರ್ ನಂಬರ್ ಇದ್ದರೆ ಹೊಂದಿದ್ದರೆ ಅದನ್ನು ಕಮರ್ಷಿಯಲ್​ ಎಂದು ಪರಿಗಣಿಸಲಾಗುವುದು. ಹಾಗಾಗಿ ಬಾಡಿಗೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯವಾಗಲ್ಲ ಎಂದಿದ್ದಾರೆ.

ಇದನ್ನೂ ಓದಿ: Gruha Jyothi Scheme: ಜುಲೈ 1ರಿಂದ 200 ಯುನಿಟ್ ವಿದ್ಯುತ್ ಉಚಿತ: ಸಿದ್ದರಾಮಯ್ಯ ಘೋಷಣೆ

ಸಿಂಗಲ್ ಬಿಲ್ಡಿಂಗ್​ನಲ್ಲಿ ಬಾಡಿಗೆದಾರರಿದ್ದರೆ ಮಾತ್ರ ಉಚಿತವಿರುತ್ತದೆ. ಒಂದು ಬಿಲ್ಡಿಂಗ್​ನಲ್ಲಿ ಒಂದು ಮನೆ RR ನಂಬರ್​ ಮಾತ್ರ ಪರಿಗಣನೆ ಮಾಡಲಾಗುತ್ತಿದೆ. ಒಂದು ಬಿಲ್ಡಿಂಗ್​ನಲ್ಲಿ ಒಂದಕ್ಕಿಂತ ಹೆಚ್ಚು ಆರ್​ಆರ್​ ನಂಬರ್​ಯಿದ್ದರೆ, ಅದರ ಲಾಭವನ್ನು ಬಿಲ್ಡಿಂಗ್ ಮಾಲೀಕರು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

12 ತಿಂಗಳ ಸರಾಸರಿ ವಿದ್ಯುತ್​ ಬಿಲ್​ ಪರಿಗಣೆ

12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡಲಾಗುವುದು. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಗೃಹಜ್ಯೋತಿ ಸೇರಿದಂತೆ ಗೃಹಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಗಳನ್ನು ಸಹ ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿದರು. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಯಾವುದೇ ಜಾತಿ, ಧರ್ಮ, ಭಾಷೆ ಬೇಧವಿಲ್ಲದೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:43 pm, Fri, 2 June 23

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!